ತೋಟದ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ
Team Udayavani, Jul 8, 2020, 5:56 AM IST
ಮೈಸೂರು: ಬೆಂಗಳೂರಿನಲ್ಲಿ ಕೋವಿಡ್ 19 ಸೋಂಕು ದಿನದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಟಿ.ಕಾಟೂರು ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧ ಚಿಕಿತ್ಸೆಗೆ ಒಳಗಾಗಿದ್ದ ಅವರು, ಮುಂಜಾಗ್ರತೆ ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರ ಇರುವಂತೆ ಕುಟುಂಬದ ವೈದ್ಯರೂ ಆಗಿರುವ ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರ ತಂದೆಗೆ ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ತೋಟದ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಸದ್ಯಕ್ಕೆ ಮೈಸೂರಿನಲ್ಲಿರುವ ಸಿದ್ದರಾಮಯ್ಯ ರಾಜಕೀಯ ಮತ್ತು ಸಾರ್ವಜನಿಕರಿಂದ ದೂರ ಉಳಿಯದೇ, ಕೋವಿಡ್-19 ಪ್ರಕರಣ, ಈ ಬಗ್ಗೆ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೇ, ಸಾಮಾಜಿಕ ಮಾಧ್ಯಮ ತಂಡದೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯರ ಆತ್ಮೀಯರಾದ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್, ಶಾಸಕ ಎಚ್.ಪಿ.ಮಂಜುನಾಥ್, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷಾದ್ ಇತರರು ಅವರನ್ನು ಭೇಟಿಯಾಗಿ ರಾಜಕೀಯ ಸಂಬಂಧ ಚರ್ಚಿಸಿದ್ದಾರೆ.
ಹೋಂ ಕ್ವಾರಂಟೈನಲ್ಲಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಹೋಂ ಕ್ವಾರಂಟೈನ್ನಲ್ಲಿ ಇಲ್ಲ, ಅವರು ಆರೋಗ್ಯವಾಗಿದ್ದಾರೆ. ವಿಶ್ರಾಂತಿ ಪಡೆಯುತ್ತಿದ್ದಾರಷ್ಟೆ. ಡಾ.ಯತೀಂದ್ರ ಅವರು ಸ್ವಯಂ ಕ್ವಾರಂಟೈನ್ನಲ್ಲಿದ್ದು, ಅವರ ಕೋವಿಡ್ ಪರೀಕ್ಷೆ ವರದಿಯೂ ನೆಗೆಟಿವ್ ಬಂದಿದೆ ಎಂದು ಸಿದ್ದರಾಮಯ್ಯ ಅವರ ಕಾರ್ಯದರ್ಶಿ ರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ