ಸಿದ್ದರಾಮಯ್ಯ ಲೋಕಾಯುಕ್ತದ ಹಲ್ಲು ಕಿತ್ತು ಹಾಕಿದವರು; ಸಿಎಂ ಬೊಮ್ಮಾಯಿ
Team Udayavani, Mar 7, 2023, 4:32 PM IST
ಮೈಸೂರು: ಸಿದ್ದರಾಮಯ್ಯ ಅವರು ಲೋಕಾಯುಕ್ತವನ್ನು ಬಂದ್ ಮಾಡಲಿಲ್ಲ. ಬದಲಿಗೆ, ಅದರ ಹಲ್ಲುಗಳನ್ನೆಲ್ಲಾ ಕಿತ್ತು ಹಾಕಿದರು. ಹಲ್ಲು ಕಿತ್ತ ಮೇಲೆ ಇದ್ದರೆಷ್ಟು, ಇಲ್ಲದಿದ್ದರೆಷ್ಟು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಲೋಕಾಯುಕ್ತವನ್ನು ಬಂದ್ ಮಾಡಿದ್ದೆ ಎಂಬುದನ್ನು ಬಿಜೆಪಿಯವರು ಸಾಬೀತುಪಡಿಸಿದರೆ ತಕ್ಷಣ ರಾಜೀನಾಮೆ ಕೊಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ತಮ್ಮ ಕಾಲದಲ್ಲೇಕೆ ಲೋಕಾಯುಕ್ತದಲ್ಲಿನ ಕೇಸ್ಗಳನ್ನು ಎಸಿಬಿಗೆ ವರ್ಗಾಯಿಸುತ್ತಿದ್ದರು ? ಎಂದು ಪ್ರಶ್ನಿಸಿದರು.
ಬಂದ್ ಗೆ ಯಾವ ಬೆಲೆಯೂ ಇಲ್ಲ: ಮಾ.9ರಂದು ಕಾಂಗ್ರೆಸ್ ನಿಂದ ಬಂದ್ಗೆ ಕರೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಬಂದ್ಗೆ ಯಾವ ಬೆಲೆಯೂ ಇಲ್ಲ. 2 ಗಂಟೆ ಬಂದ್ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು. ಯಾವತ್ತಾದರೂ ಇಂಥ ಬಂದ್ ಬಗ್ಗೆ ಕೇಳಿದ್ದೀರಾ. ಇದನ್ನು ಬಂದ್ ಎನ್ನುತ್ತಾರಾ? ಭ್ರಷ್ಟಾಚಾರ ಮಾಡಿದವರು, ಜೈಲಿಗೆ ಹೋಗಿ ಬಂದವರು ಕರೆ ಕೊಟ್ಟರೆ ಜನರ ಮುಂದೆ ನಡೆಯುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಅಂದು ಪರೀಕ್ಷೆಗಳಿವೆ. ವಿದ್ಯಾಾರ್ಥಿಗಳು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತದೆ. ಇದು ಕಾಂಗ್ರೆಸ್ ನವರಿಗೆ ಅರ್ಥವಾಗುವುದಿಲ್ಲ. ಬಂದ್ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶವೂ ಇದೆ ಎಂದರು.
ಸಿದ್ದರಾಮಯ್ಯ ಮಾತಿಗೆ ಜನ ನಗುತ್ತಿದ್ದಾರೆ: ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ ನಿರ್ಮಾಣವಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ. ನಿರ್ಮಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ. ಆದರೂ, ಸಿದ್ದರಾಮಯ್ಯ ಹೆದ್ದಾರಿ ನಿರ್ಮಾಣ ಮಾಡಿದ್ದು ನಾವು. ನಮಗೆ ಕ್ರೆಡಿಟ್ ಸಲ್ಲಬೇಕು ಎನ್ನುತ್ತಿರುವುದನ್ನು ಕೇಳಿ ಜನ ನಗುತ್ತಿದ್ದಾರೆ. ಹಾಗೆ ನೋಡಿದರೆ, ರಸ್ತೆ ವಿಸ್ತರಣೆ ಆಗಬೇಕೆಂಬ ಪ್ರಸ್ತಾವ 20 ವರ್ಷಗಳ ಹಿಂದಿನಿಂದಲೂ ಇತ್ತು. ಪ್ರಸ್ತಾಪಕ್ಕೂ ಹಣ ಬಿಡುಗಡೆ ಮಾಡಿ ಅನುಷ್ಠಾನಕ್ಕೆ ತರುವುದಕ್ಕೂ ವ್ಯತ್ಯಾಸವಿದೆ ಎಂದರು.
ಇದನ್ನೂ ಓದಿ:ಯಕೃತ್ತಿನ ಸಮಸ್ಯೆ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಲಯಾಳಂ ನಟ ಬಾಲ
ಸಿದ್ದರಾಮಯ್ಯ ಹೆದ್ದಾರಿ ಪರಿಶೀಲನೆ ನಡೆಸಲು ನಮ್ಮ ತಕರಾರೇನಿಲ್ಲ. ಈಗಾಗಲೇ ಅಲ್ಲಿ ಸಾವಿರಾರು ಜನರು ಓಡಾಡುತ್ತಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು ಎಂದು ಲೇವಡಿ ಮಾಡಿದರು.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹೈಕೋರ್ಟ್ ತೀರ್ಮಾನವನ್ನು ನಾನು ವಿಶ್ಲೇಷಣೆ ಮಾಡಲು ಬಯಸುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!