Mysore; ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ: ಕೆ.ಎಸ್ ಈಶ್ವರಪ್ಪ
ಕಾಂಗ್ರೆಸ್ ನಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಿದ್ದಾರೆ
Team Udayavani, Nov 4, 2023, 2:25 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ ಎಂದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು. ನಾನೆ ಐದು ವರ್ಷ ಸಿಎಂ ಅಂದರು. ವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ. ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ. ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು. ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ ತರುವುದಾಗಿ ಹೇಳಿದ್ದರು. ಈಗ ಅದನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಸಾಧು ಸಂತರ ಶಾಪ ಸಿದ್ದರಾಮಯ್ಯಗೆ ತಟ್ಟುತ್ತದೆ. ದಲಿತರು ಹಿಂದುಳಿದ ವರ್ಗದವರ ಶಾಪವು ತಟ್ಟುತ್ತದೆ. ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ತಿಂಗಳು – ವರ್ಷ ಅಲ್ಲ, ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.
ಯಾವತ್ತು ಸಿದ್ದರಾಮಯ್ಯ ಯಾವ ಪಕ್ಷ ಕಟ್ಟುವುದಿಲ್ಲ. ಯಾರೋ ಕಟ್ಟಿದ ಪಕ್ಷಕ್ಕೆ ಬಂದು ಅಧಿಕಾರ ಮಾಡುವುದು ಸಿದ್ದರಾಮಯ್ಯನವರ ಚಾಳಿ. ಜೆಡಿಎಸ್ ನಿಂದ ಅವತ್ತು ಹೊರಗಡೆ ಬಂದಾಗ ನಾಯಿ ಹಸದಿತ್ತು, ಅನ್ನ ಹಳಸಿತ್ತು ಎಂಬ ರೀತಿ ಕಾಂಗ್ರೆಸ್ ಸೇರಿದರು. ಈಗಲೂ ಸಿಎಂ ಸ್ಥಾನದಿಂದ ಅವರನ್ನು ಇಳಿಸಿದರೆ ಅಪ್ಪಿತಪ್ಪಿಯೂ ಪಕ್ಷ ಕಟ್ಟುತ್ತೇನೆ ಎಂದು ಹೇಳುವುದಿಲ್ಲ. ಅದು ಸಿದ್ದರಾಮಯ್ಯ ಚಾಳಿ ಎಂದು ಟೀಕಿಸಿದರು.
ಸಿದ್ದರಾಮಯ್ಯ ಪೂರ್ವವಾದರೆ, ಡಿಕೆ ಶಿವಕುಮಾರ್ ಪಶ್ಚಿಮ. ಇವರಿಬ್ಬರ ಕಥೆಯೇ ಹೀಗಾದರೆ ಉಳಿದ ಸಚಿವರುಗಳ ಕಥೆ ಏನಾಗಿರಬೇಡ? ಕಾಂತರಾಜ್ ಆಯೋಗದ ವರದಿಯನ್ನ ಒಪ್ಪಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ವರದಿ ಒಪ್ಪಿಕೊಳ್ಳುವುದಿಲ್ಲ ಎಂದು ಡಿ.ಕೆ. ಹೇಳುತ್ತಾರೆ. ಸರ್ಕಾರ ನಂಬರ್ ಒನ್ ನಂಬರ್ ಟು ನಡುವೆಯೇ ಸಮನ್ವಯತೇ ಇಲ್ಲ ಎಂದು ಕಿಡಿಕಾರಿದರು.
ಅಜಿತ್ ಪವಾರ್ ಹುಟ್ಟುತ್ತಾರೆ: ಕಾಂಗ್ರೆಸ್ ಸರ್ಕಾರ ಬಿದ್ದು ಅಲ್ಲಿನ ಯಾವುದೇ ಅಜಿತ್ ಪವಾರ್ ಬಿಜೆಪಿ ಜೊತೆ ಬಂದರೆ ನಾವು ಸೇರಿಸಿಕೊಳ್ಳುತ್ತೇವೆ. ಆದರೆ ಆಗ ಬಂದ ಅಜಿತ್ ಪವಾರ್ ಗೆ ಸಿಎಂ ಸ್ಥಾನ ಕೊಡುವುದಿಲ್ಲ. ನಾವು ಎಂತಂತವರನ್ನೇ ಜೀರ್ಣಿಸಿಕೊಂಡಿದ್ದೇವೆ. ಜೀರ್ಣವಾದರೆ ಹೊಟ್ಟೆಯಲ್ಲಿ ಇಟ್ಟುಕೊಳ್ಳುತ್ತೇವೆ ಇಲ್ಲವಾದರೆ ವಾಂತಿ ಮಾಡಿ ಹೊರಹಾಕುತ್ತೇವೆ. ಬಂಗರಾಪ್ಪ ಅಂತವರನ್ನೇ ಪಕ್ಷಕ್ಕೆ ಸೇರಿಸಿಕೊಂಡವರು ನಾವು. ಕೆಲವರು ಬಂದರು ಹೋದರು. ಕೆಲವರು ಇಲ್ಲೇ ಈದ್ದು ಒಳ್ಳೆಯವರಾಗಿ ಪಕ್ಷ ಕಟ್ಟುತ್ತಿದ್ದಾರೆ ಎಂದರು.
ಬಿಜೆಪಿ ಅಪರೇಷನ್ ಕಮಲ ಆರೋಪ ವಿಚಾರಕ್ಕೆ ಮಾತನಾಡಿ, ಒಬ್ಬನೇ ಒಬ್ಬ ಕಾಂಗ್ರೆಸ್ ಶಾಸಕ ನನಗೆ 50 ಕೋಟಿ ಆಫರ್ ಬಿಜೆಪಿಯಿಂದ ಆಫರ್ ಯಾರು ಕೊಟ್ಟರು ಎಂದು ಹೇಳಿ ಬಿಡಲಿ. ಆಗ ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಸುಳ್ಳು ಹೇಳಿ ಇಂತಹ ವಿಚಾರ ಹಬ್ಬಿಸುವುದು ಬೇಡ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿ ಕೊಳ್ಳುತ್ತಿದ್ದಾರೆ ಸರ್ಕಾರ ಬೀಳುವ ದಿನಗಣನೆ ಈಗ ಆರಂಭವಾಗಿದೆ. ನಾನು ತಿಂಗಳು ವರ್ಷದ ಮಾತು ಆಡುತ್ತಿಲ್ಲ. ಕೆಲವೇ ದಿನಗಳಲ್ಲಿ ಸರ್ಕಾರ ಬೀಳಬಹುದು. ಸತೀಶ್ ಜಾರಕಿಹೊಳಿ, ಡಿ.ಕೆ ಶಿವಕುಮಾರ್, ಹರಿಪ್ರಸಾದ್, ಪರಮೇಶ್ವರ, ಪ್ರಿಯಾಂಕ ಖರ್ಗೆ ಎಲ್ಲಾ ಅಜಿತ್ ಪವಾರ್ ಗಳಾಗಿದ್ದಾರೆ. ಹೀಗಾಗಿ ಸರ್ಕಾರ ಬೀಳುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ನಲ್ಲಿ ಈಗ ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ ಸ್ಥಾನ ಕೇಳುತ್ತಿದ್ದಾರೆ. ಪ್ರಿಯಾಂಕ ಖರ್ಗೆ ಅವರ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಮೆಚ್ಚಿಕೊಳ್ಳುತ್ತಿದೆ. ಅವರೇ ಕೇಳುತ್ತಿದ್ದಾರೆ, ಇದು ನಗಪಾಟಲಿಗೆ ವಿಚಾರ ಎಂದು ಕೆಎಸ್ ಈಶ್ವರಪ್ಪ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ