ಸಿದ್ದು ಪುತ್ರನ ಕ್ಷೇತ್ರದಲ್ಲಿ ಕುಟುಂಬಕ್ಕೆ ಬಹಿಷ್ಕಾರ


Team Udayavani, Dec 14, 2018, 11:48 AM IST

m2-siddu.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಹೊಂದಿಕೊಂಡಂತಿರುವ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ದೇವರಿಗೆ ಬಿಟ್ಟಿದ್ದ ಬಸವನೊಂದಿಗೆ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ನಡೆದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಪ್ರತಿನಿಧಿಸಿದ್ದ ವರುಣಾ ಕ್ಷೇತ್ರ ವ್ಯಾಪ್ತಿಗೆ ಬರುವ ತಗಡೂರು ಗ್ರಾಮದ ವಯಯೋವೃದ್ಧ ಮಹದೇವೇಗೌಡ ಅವರ ಕುಟುಂಬ ದೇವರರಿಗೆ ಬಿಟ್ಟ ಬಸವನನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿತ್ತು. ಕೌಟುಂಬಿಕ ಕಾರಣಕ್ಕೆ ಮಾವ ಮತ್ತು ಅಳಿಯನ ನಡುವೆ ಜಗಳವಾಗಿದೆ.

ಇದನ್ನೆ ನೆಪವಾಗಿಸಿಕೊಂಡು ಪದೇ ಪದೆ ನೀವು ಜಗಳ ಆಡುತ್ತೀರಿ ಎಂದು ಗ್ರಾಮದ ಯಜಮಾನರು ಸೇರಿ ಬಡ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದು, 10 ಸಾವಿರ ರೂ. ದಂಡ ಪಡೆದುಕೊಂಡಿದ್ದಾರೆ. ಇದಕ್ಕೆ ಮಹದೇವೇಗೌಡರ ಅಳಿಯನ ಪಿತೂರಿಯೂ ಕಾರಣ ಎನ್ನಲಾಗಿದೆ. 

ಗ್ರಾಮದ ಯಜಮಾನರು ಈ ಕುಟುಂಬ ಕಳೆದ 15 ವರ್ಷಗಳಿಂದ ಮೇಯಿಸುತ್ತಿದ್ದ ಗ್ರಾಮದ ದೇವಸ್ಥಾನದ ಬಸವನನ್ನೂ ಅವರಿಂದ ಕಿತ್ತುಕೊಳ್ಳಲಾಗಿದೆ. ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿರುವ ಈ ಕುಟುಂಬದವರು ಗ್ರಾಮದ ದೇವಸ್ಥಾನಕ್ಕೆ ಹೋಗುವಂತಿಲ್ಲ, ಗ್ರಾಮದ ಸಾರ್ವಜನಿಕ ನಲ್ಲಿಯಲ್ಲಿ ನೀರು ಹಿಡಿದುಕೊಳ್ಳುವಂತಿಲ್ಲ, ಅಂಗಡಿಗಳಲ್ಲಿ ದಿನಸಿ ಖರೀದಿಸುವಂತಿಲ್ಲ,

ಯಾರೂ ಇವರನ್ನು ಕೂಲಿಗೆ ಕರೆಯುವಂತಿಲ್ಲ, ಯಾರ ಮನೆಯವರೂ ಇವರಿಗೆ ಉಪ್ಪು, ನೀರು ಕೊಡುವಂತಿಲ್ಲ. ಜೊತೆಗೆ ಯಾರಾದರೂ ಇವರನ್ನು ಮಾತನಾಡಿಸಿದರೂ 1,101 ರೂ. ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. 

ಎರಡು ತಿಂಗಳ ಹಿಂದೆ ಸಾಮಾಜಿಕ ಬಹಿಷ್ಕಾರ ಹಾಕಿ, ನೀವು ಮಾಡಿದ್ದು ತಪ್ಪು ಎಂದು ದಂಡ ಕಟ್ಟಿಸಿಕೊಂಡ ನಂತರವೂ ಬಹಿಷ್ಕಾರ ಹಿಂಪಡೆಯದೆ ದೌರ್ಜನ್ಯ ನಡೆಸುತ್ತಿರುವುದರಿಂದ ಕೂಲಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಈ ಕುಟುಂಬ ಇದೀಗ ಬೀದಿಗೆ ಬೀಳುವಂತಾಗಿದೆ. ಗ್ರಾಮದ ಯಜಮಾನರ ಈ ದೌರ್ಜನ್ಯದಿಂದ ನಮಗೆ ನ್ಯಾಯ ಕೊಡಿಸಿ ಎಂದು  ಈ ಬಡ ಕುಟುಂಬ ಇದೀಗ ಕಚೇರಿಗಳನ್ನು ಅಲೆಯುವಂತಾಗಿದೆ. 

15 ವರ್ಷಗಳಿಂದ ನಮ್ಮೂರ ದೇವರ ಬಸವನನ್ನು ಮೇಯಿಸುತ್ತಿದ್ದು, ನೀವು ಜಗಳ ಆಡುತ್ತೀರಿ ಎಂದು ಹೇಳಿ ನಮ್ಮಿಂದ ಬಸವನನ್ನು ಕಿತ್ತುಕೊಂಡಿದ್ದಾರೆ. ಗ್ರಾಮದ ದೇವಸ್ಥಾನಕ್ಕೆ ಹೋಗುವಂತಿಲ್ಲ, ನಲ್ಲಿಯಲ್ಲಿ ನೀರು ಹಿಡಿಯದಂತೆ ಬಹಿಷ್ಕಾರ ಹಾಕಿದ್ದಾರೆ. ನಮ್ಮಿಂದ 10 ಸಾವಿರ ರೂ. ದಂಡ ಕಟ್ಟಿಸಿಕೊಂಡರೂ ಬಹಿಷ್ಕಾರ ವಾಪಸ್‌ ತೆಗೆದುಕೊಂಡಿಲ್ಲ.
-ದೊಡ್ಡಮ್ಮ, ಬಹಿಷ್ಕಾರಕ್ಕೆ ಒಳಗಾದ ಕುಟುಂಬದ ಮಹಿಳೆ

ಕುಟುಂಬಸ್ಥರು ಮನವಿ ಕೊಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ರಾಜಸ್ವ ನಿರೀಕ್ಷಕರನ್ನು ಕಳುಹಿಸಿ ವಸ್ತು ಸ್ಥಿತಿ ಏನೆಂದು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಲಾಗಿದ್ದು, ಆ ವರದಿಯನ್ನು ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಲಾಗುವುದು.
-ಬಾಲಸುಬ್ರಹ್ಮಣ್ಯ, ಉಪ ತಹಶೀಲ್ದಾರ್‌, ನಂಜನಗೂಡು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.