ಪ್ಲಾಸ್ಮಾ ಬೇರ್ಪಡಿಕೆ ಯಂತ್ರಕ್ಕೆ ಚಾಲನೆ


Team Udayavani, Sep 26, 2020, 2:28 PM IST

mysuru-tdy-2

ಮೈಸೂರು ನಗರದ ಸಯ್ನಾಜಿರಾವ್‌ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ಶುಕ್ರವಾರ ಮೈಸೂರಿನ ಮೊದಲ ಪ್ಲಾಸ್ಮಾ ಬೇರ್ಪಡಿಕೆಯಂತ್ರಕ್ಕೆ ಚಾಲನೆ ನೀಡಲಾಯಿತು. ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌ ಇತರರಿದ್ದರು.

ಮೈಸೂರು: ಕೋವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾವನ್ನು ಬೇರೆಯವರಿಗೆ ದಾನ ಮಾಡಿದರೆ ಜೀವದಾನ ಮಾಡಿದಂತಾಗುತ್ತದೆ ಎಂದು ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌ ಹೇಳಿದರು.

ನಗರದ ಸಯ್ನಾಜಿರಾವ್‌ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ಶುಕ್ರವಾರ ಮೈಸೂರಿನ ಮೊದಲ ಪ್ಲಾಸ್ಮಾ ಬೇರ್ಪಡಿಕೆ ಯಂತ್ರವನ್ನು (ಸಿಂಗಲ್‌ ಡೋನರ್‌ ಪ್ಲಾಸ್ಮಾ ಯಂತ್ರ) ಲೋಕಾರ್ಪಣೆ ಮಾಡಿ ಮಾತನಾಡಿದರು.

ಪ್ಲಾಸ್ಮಾದಾನ ಜಾಗೃತಿ: ದೇಶದಲ್ಲಿ ದಿನೇ ದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗ ದೇಶದಲ್ಲಿ 50 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳಿವೆ. ರಾಜ್ಯದಲ್ಲಿ ಪ್ರತಿದಿನ ಸುಮಾರು 10 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಔಷಧ ಕಂಡುಹಿಡಿಯುವವರೆಗೂ ಪ್ಲಾಸ್ಮಾ ಚಿಕಿತ್ಸೆ ನೀಡಿ ಸೋಂಕಿತರನ್ನು ಗುಣಮುಖರನ್ನಾಗಿ ಮಾಡಬಹುದು ಎಂಬ ಕಾರಣಕ್ಕೆ ಎಲ್ಲೆಡೆ ಪ್ಲಾಸ್ಮಾ ದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮೈಸೂರಿನಲ್ಲಿ ಕೋವಿಡ್ ದಿಂದ ಗುಣಮುಖರಾಗಿರುವವರು ಪ್ಲಾಸ್ಮಾ ದಾನ ಮಾಡಲು ಅನುಕೂಲವಾಗುವಂತೆ ಈ ಯಂತ್ರ ಲೋಕಾರ್ಪಣೆ ಮಾಡಿರುವುದು ಒಳ್ಳೆಯ ವಿಚಾರ ಎಂದರು.

ಪರವಾನಗಿ: ದೊಡ್ಡ ದೊಡ್ಡ ಆಸ್ಪತ್ರೆಗಳಿಗೇ ಇನ್ನೂ ಈ ಯಂತ್ರ ಬಳಸಲು ಪರವಾನಗಿ ಸಿಕ್ಕಿಲ್ಲ. ಆದರೆ, ಇವರು ಎಷ್ಟೋ ವರ್ಷಗಳ ಹಿಂದೆಯೇ ಮುಂದಾಲೋಚನೆಯಿಂದ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಇದನ್ನು ಜನರು ಬಳಸಿಕೊಳ್ಳಬೇಕು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಸೋಂಕನ್ನು ಹಿಮ್ಮೆಟ್ಟಿಸಲು ಸರ್ಕಾರ ತಿಳಿಸಿರುವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್‌ ಮಾತನಾಡಿ, ಎಷ್ಟೋ ಕಡೆ ರಕ್ತವನ್ನು ತೆಗೆದು ಅದರಿಂದ ಪ್ಲಾಸ್ಮಾ ಬೇರ್ಪಡಿಸುವ ಪ್ರಕ್ರಿಯೆ ನಡೆಸಲಾಗುತ್ತದೆ. ಹಾಗೆ ಮಾಡಿದರೆ ಮತ್ತೆ ಮೂರು ತಿಂಗಳೂ ರಕ್ತದಾನ ಮಾಡುವಂತಿಲ್ಲ. ಆದರೆ, 17 ಲಕ್ಷ ರೂ. ಮೊತ್ತದ ಈ ಯಂತ್ರದಲ್ಲಿ ನೇರವಾಗಿ ಪ್ಲಾಸ್ಮಾ ಪಡೆಯಬಹುದು. ರಕ್ತ ಮತ್ತೆ ದೇಹಕ್ಕೆ ಸೇರುತ್ತದೆ. 15 ದಿನಗಳ ನಂತರಮತ್ತೆದಾನಮಾಡಬಹುದು. ಪ್ಲಾಸ್ಮಾ ಪಡೆಯುವ ಮುನ್ನ ಅವರನ್ನು ಸಂಪೂರ್ಣವಾಗಿ ಪರೀಕ್ಷೆಗೊಳಪಡಿಸಿ ನಂತರ ಪ್ಲಾಸ್ಮಾ ಪಡೆಯುತ್ತೇವೆ. ಇದರಿಂದ ಅವರಿಗೂ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದರು.

ಜೀವ ಉಳಿಸಿ: ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಮಾತನಾಡಿ, ಕೋವಿಡ್ ದಿಂದ ಗುಣಮುಖ ರಾದ ಪೊಲೀಸರು ಸೇರಿದಂತೆ ಇನ್ನೂ ಸಾಕಷ್ಟು ಜನ ಪ್ಲಾಸ್ಮಾ ದಾನ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಸಾಮಾನ್ಯ ಜನರು ಹೆದರದೆ ಪ್ಲಾಸ್ಮಾ ದಾನ ಮಾಡಿ, ಇನ್ನೊಬ್ಬರ ಜೀವ ಉಳಿಸಿ ಎಂದು ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್‌, ರಕ್ತನಿಧಿ ಕೇಂದ್ರದ ನಿರ್ದೇಶಕ ಮುತ್ತಣ್ಣ, ಡಾ.ಸುದೀರ್‌, ಡಾ.ಮಂಜುನಾಥ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.