ನಗರದಲ್ಲಿ ನೀರು ಸೋರಿಕೆ ತಡೆಗೆ ಶೀಘ್ರವೇ ಸ್ಕಾಡಾ


Team Udayavani, Sep 11, 2020, 1:08 PM IST

ನಗರದಲ್ಲಿ ನೀರು ಸೋರಿಕೆ ತಡೆಗೆ ಶೀಘ್ರವೇ ಸ್ಕಾಡಾ

ಮೈಸೂರು: ನಗರಕ್ಕೆ ಪೂರೈಕೆಯಾಗುವ ಕುಡಿಯುವನೀರು ಎಲ್ಲಿ ಪೋಲಾಗುತ್ತಿದೆ, ಏನೇನು ಅವ್ಯವಹಾರ ನಡೆಯುತ್ತಿದೆ, ಲ್ಲಿ ಏನೇನು ಸಮಸ್ಯೆಗಳಿವೆ ಎಂಬು ದರ ಬಗ್ಗೆ ನಿಗಾ ಇಡಲು ಸ್ಕಾಡಾ(ಸೂಪವೈಸರಿ ಕಂಟ್ರೋಲ್‌ ಎಂಡ್‌ ಡೇಟಾ ಅನಾಲಿಟಿಕ್ಸ್ ಆಕ್ವಿಸಿಷನ್‌) ಎಂಬ ಹೊಸ ತಂತ್ರ ಜ್ಞಾನವೊಂದನ್ನು ಅಭಿವೃದ್ಧಿ ಪಡಿಸಲು ವಾಣಿ ವಿಲಾಸ ನೀರು ಸರಬರಾಜು ಮಂಡಳಿಯು ಮುಂದಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮೈಸೂರಿಗೆ ಅವಶ್ಯ ಕತೆ ಇರುವುದು 170 ಎಂಎಲ್‌ಡಿ ನೀರು. ಇಲ್ಲಿಗೆ 260ಎಂಎಲ್‌ಡಿ ನೀರು ಪೂರೈಕೆಯಾಗುತ್ತಿದೆ. ಆದರೆ ನಗರದ ಎಷ್ಟೋ ಬಡಾವಣೆಗಳಲ್ಲಿ ನೀರಿನ ಜ್ವಲಂತ ಸಮಸ್ಯೆಇದೆ. ಇದನ್ನು ಬಗೆಹರಿಸಲು ಸ್ಕಾಡಾ ಎಂಬ ಈ ಹೊಸ ತಂತ್ರಜ್ಞಾನ ರೂಪಿಸಲಾಗುತ್ತದೆ ಎಂದರು. ವರ್ಷದೊಳಗೆ ಪೂರ್ಣ: ಐಎಲ್‌ ಎಂಡ್‌ ಎಫ್ಎಸ್‌ ಕಂಪನಿಗೆ ನೀಡಿರುವ ಗುತ್ತಿಗೆಯಲ್ಲಿ ಸ್ಕಾಡಾ ತಂತ್ರಜ್ಞಾನ ಅಳವಡಿಕೆ ಕೂಡ ಸೇರಿದೆ. ಇನ್ನು 24 ತಿಂಗಳೊಳಗೆಎಲ್ಲವೂ ಸಿದ್ಧವಾಗಲಿದೆ. ಈ ಮೂಲಕ ನೀರು ಸರಬ ರಾಜಿನಲ್ಲಿ ಆಗುತ್ತಿರುವ ಅವ್ಯವಹಾರಗಳು ನಿಯಂತ್ರಣಕ್ಕೆ ಬರಲಿವೆ. ಇಂತಹ ಯೋಜನೆಗಳು ಬೃಹತ್‌ ಮೈಸೂರು ಮಹಾನಗರಪಾಲಿಕೆ ರಚನೆಗೆ ಪೂರಕವಾಗಿರಲಿದೆ. ನಗರದ ಅಂಚಿನಲ್ಲಿರುವ ಗ್ರಾಮಗಳನ್ನು ಪಾಲಿಕೆವ್ಯಾಪ್ತಿಗೆ ಸೇರಿಸಿಕೊಂಡರೆ ನೀರು ಸರಬರಾಜು ಹೆಚ್ಚು ಬೇಕಾಗುತ್ತದೆ. ಈ ಪ್ರಕ್ರಿಯೆ ಸ್ಕಾಡಾ ಪೂರಕವಾಗಲಿದೆ ಎಂದು ಮಾಹಿತಿ ನೀಡಿದರು.

9 ಗ್ರಾಪಂ ಸೇರ್ಪಡೆ: ಬೃಹತ್‌ ಮೈಸೂರು ಮಹಾ ನಗರ ಪಾಲಿಕೆ ಮಾಡಲು ನಗರದ ಸುತ್ತಲಿನ 9 ಗ್ರಾಪಂಗಳನ್ನು ಸೇರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ಬಾರಿಯ ಗ್ರಾಪಂ ಚುನಾವಣೆ ನಡೆಯುವ ಮುನ್ನವೇ ಗ್ರಾಮಗಳನ್ನು ನಗರಪಾಲಿಕೆಗೆ ಸೇರಿಸುವ ಪ್ರಕ್ರಿಯೆ ಚುರುಕಾಗಬೇಕು. ಒಮ್ಮೆ ಚುನಾವಣೆ ಸುತ್ತೋಲೆ ಹೊರಡಿಸಿದರೆ ಮತ್ತೆ ಪ್ರಕ್ರಿಯೆ ಮುಂದೂಡಲ್ಪಡು ತ್ತದೆ.ಗ್ರಾಮಗಳನ್ನು ನಗರ ವ್ಯಾಪ್ತಿಗೆ ಸೇರಿಸಿ 15 ಲಕ್ಷಕ್ಕೂ ಹೆಚ್ಚುಜನಸಂಖ್ಯೆ ಆದರೆ ಮೊನೊ ರೈಲು, ಮೆಟ್ರೋ ರೈಲುಸೇರಿದಂತೆ ಸಾಕಷ್ಟು ಯೋಜನೆಗಳನ್ನು ತರಬಹುದು.ಆದ್ದರಿಂದ ಬೃಹತ್‌ ಮೈಸೂರು ಮಹಾನಗರಪಾಲಿಕೆರಚನೆ ಬಗ್ಗೆ ಸಾಕಷ್ಟು ಗಮನ ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸ್ಕಾಡಾ ತಂತ್ರಜ್ಞಾನ ಕಾರ್ಯವೈಖರಿ ಹೇಗೆ? : ಸ್ಕಾಡಾ ಕುರಿತು ಮಾಹಿತಿ ನೀಡಿದ ವಾಣಿವಿಲಾಸ ನೀರು ಸರಬರಾಜು ಮಂಡಳಿಯ ಎಇಇ ಆಸಿಫ್ “ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿನಿಯಂತ್ರಣ ಕೊಠಡಿ ಸ್ಥಾಪಿಸಿ ಇಡೀ ನಗರದ ನೀರು ಸರಬರಾಜು ವ್ಯವಸ್ಥೆಯ ಮೇಲೆ ನಿಗಾ ಇಡಲಾಗು ತ್ತದೆ. ಸೋಲಾರ್‌ ಮತ್ತು ಎಲೆಕ್ಟ್ರಿಕಲ್‌ ಆ್ಯಕುcಯೇಟರ್‌ ಗಳು, ಪ್ರೋ ಮೀಟರ್‌, ಕ್ಯಾಮರಾ ಗಳು, ಸೆನ್ಸಾರ್‌ ಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವ ಹಿಸುತ್ತವೆ. ಎಲ್ಲಿಗೆ ಎಷ್ಟು ನೀರು ಸರಬರಾಜಾಗು ತ್ತಿದೆ, ಎಲ್ಲಿ ನೀರುಸೋರಿಕೆಯಾಗುತ್ತಿದೆ, ಎಲ್ಲಿ ಕಳ್ಳತನ ಆಗುತ್ತಿದೆ ಎಂಬುದನ್ನು ಸುಲಭವಾಗಿ ಪತ್ತೆಹಚ್ಚಬಹುದು. ಈ ತಂತ್ರಜ್ಞಾನ ಬಳಸಿ ನೀರಿನಲ್ಲಿರುವ ಪಿಎಚ್‌, ಕ್ಲೋರಿನ್‌ ಮತ್ತಿತರ ಅಂಶಗಳ ಪ್ರಮಾಣವನ್ನು ತಿಳಿಯಬಹುದು. ಎಲ್ಲವೂ ಆನ್‌ಲೈನ್‌ ಮೂಲಕ ಆಗಲಿದೆ. ನೀರು ಸರಬರಾಜಿನ ಮೇಲ್ವಿಚರಾಣೆ, ನಿಯಂತ್ರಣ ಎರಡನ್ನೂ ಇದರಿಂದ ಮಾಡಬಹುದು. ಇಂತಹ ವ್ಯವಸ್ಥೆ ಬೆಂಗಳೂರಿನಲ್ಲಿದೆ. ಕೆಲವು ಸಣ್ಣ ಸಣ್ಣ ಊರುಗಳಲ್ಲಿ ನೀರು ಸರಬರಾಜಿನ ಮೇಲ್ವಿಚಾರಣೆ ಇದ್ದರೂ ನಿಯಂತ್ರಣ ವ್ಯವಸ್ಥೆ ಇಲ್ಲ. ಇದು ಸುಮಾರು 50 ಕೋಟಿ ರೂ. ವೆಚ್ಚದ ಯೋಜನೆ’ ಎಂದು ವಿವರಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.