ನಗರದಲ್ಲಿ ನೀರು ಸೋರಿಕೆ ತಡೆಗೆ ಶೀಘ್ರವೇ ಸ್ಕಾಡಾ


Team Udayavani, Sep 11, 2020, 1:08 PM IST

ನಗರದಲ್ಲಿ ನೀರು ಸೋರಿಕೆ ತಡೆಗೆ ಶೀಘ್ರವೇ ಸ್ಕಾಡಾ

ಮೈಸೂರು: ನಗರಕ್ಕೆ ಪೂರೈಕೆಯಾಗುವ ಕುಡಿಯುವನೀರು ಎಲ್ಲಿ ಪೋಲಾಗುತ್ತಿದೆ, ಏನೇನು ಅವ್ಯವಹಾರ ನಡೆಯುತ್ತಿದೆ, ಲ್ಲಿ ಏನೇನು ಸಮಸ್ಯೆಗಳಿವೆ ಎಂಬು ದರ ಬಗ್ಗೆ ನಿಗಾ ಇಡಲು ಸ್ಕಾಡಾ(ಸೂಪವೈಸರಿ ಕಂಟ್ರೋಲ್‌ ಎಂಡ್‌ ಡೇಟಾ ಅನಾಲಿಟಿಕ್ಸ್ ಆಕ್ವಿಸಿಷನ್‌) ಎಂಬ ಹೊಸ ತಂತ್ರ ಜ್ಞಾನವೊಂದನ್ನು ಅಭಿವೃದ್ಧಿ ಪಡಿಸಲು ವಾಣಿ ವಿಲಾಸ ನೀರು ಸರಬರಾಜು ಮಂಡಳಿಯು ಮುಂದಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮೈಸೂರಿಗೆ ಅವಶ್ಯ ಕತೆ ಇರುವುದು 170 ಎಂಎಲ್‌ಡಿ ನೀರು. ಇಲ್ಲಿಗೆ 260ಎಂಎಲ್‌ಡಿ ನೀರು ಪೂರೈಕೆಯಾಗುತ್ತಿದೆ. ಆದರೆ ನಗರದ ಎಷ್ಟೋ ಬಡಾವಣೆಗಳಲ್ಲಿ ನೀರಿನ ಜ್ವಲಂತ ಸಮಸ್ಯೆಇದೆ. ಇದನ್ನು ಬಗೆಹರಿಸಲು ಸ್ಕಾಡಾ ಎಂಬ ಈ ಹೊಸ ತಂತ್ರಜ್ಞಾನ ರೂಪಿಸಲಾಗುತ್ತದೆ ಎಂದರು. ವರ್ಷದೊಳಗೆ ಪೂರ್ಣ: ಐಎಲ್‌ ಎಂಡ್‌ ಎಫ್ಎಸ್‌ ಕಂಪನಿಗೆ ನೀಡಿರುವ ಗುತ್ತಿಗೆಯಲ್ಲಿ ಸ್ಕಾಡಾ ತಂತ್ರಜ್ಞಾನ ಅಳವಡಿಕೆ ಕೂಡ ಸೇರಿದೆ. ಇನ್ನು 24 ತಿಂಗಳೊಳಗೆಎಲ್ಲವೂ ಸಿದ್ಧವಾಗಲಿದೆ. ಈ ಮೂಲಕ ನೀರು ಸರಬ ರಾಜಿನಲ್ಲಿ ಆಗುತ್ತಿರುವ ಅವ್ಯವಹಾರಗಳು ನಿಯಂತ್ರಣಕ್ಕೆ ಬರಲಿವೆ. ಇಂತಹ ಯೋಜನೆಗಳು ಬೃಹತ್‌ ಮೈಸೂರು ಮಹಾನಗರಪಾಲಿಕೆ ರಚನೆಗೆ ಪೂರಕವಾಗಿರಲಿದೆ. ನಗರದ ಅಂಚಿನಲ್ಲಿರುವ ಗ್ರಾಮಗಳನ್ನು ಪಾಲಿಕೆವ್ಯಾಪ್ತಿಗೆ ಸೇರಿಸಿಕೊಂಡರೆ ನೀರು ಸರಬರಾಜು ಹೆಚ್ಚು ಬೇಕಾಗುತ್ತದೆ. ಈ ಪ್ರಕ್ರಿಯೆ ಸ್ಕಾಡಾ ಪೂರಕವಾಗಲಿದೆ ಎಂದು ಮಾಹಿತಿ ನೀಡಿದರು.

9 ಗ್ರಾಪಂ ಸೇರ್ಪಡೆ: ಬೃಹತ್‌ ಮೈಸೂರು ಮಹಾ ನಗರ ಪಾಲಿಕೆ ಮಾಡಲು ನಗರದ ಸುತ್ತಲಿನ 9 ಗ್ರಾಪಂಗಳನ್ನು ಸೇರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ಬಾರಿಯ ಗ್ರಾಪಂ ಚುನಾವಣೆ ನಡೆಯುವ ಮುನ್ನವೇ ಗ್ರಾಮಗಳನ್ನು ನಗರಪಾಲಿಕೆಗೆ ಸೇರಿಸುವ ಪ್ರಕ್ರಿಯೆ ಚುರುಕಾಗಬೇಕು. ಒಮ್ಮೆ ಚುನಾವಣೆ ಸುತ್ತೋಲೆ ಹೊರಡಿಸಿದರೆ ಮತ್ತೆ ಪ್ರಕ್ರಿಯೆ ಮುಂದೂಡಲ್ಪಡು ತ್ತದೆ.ಗ್ರಾಮಗಳನ್ನು ನಗರ ವ್ಯಾಪ್ತಿಗೆ ಸೇರಿಸಿ 15 ಲಕ್ಷಕ್ಕೂ ಹೆಚ್ಚುಜನಸಂಖ್ಯೆ ಆದರೆ ಮೊನೊ ರೈಲು, ಮೆಟ್ರೋ ರೈಲುಸೇರಿದಂತೆ ಸಾಕಷ್ಟು ಯೋಜನೆಗಳನ್ನು ತರಬಹುದು.ಆದ್ದರಿಂದ ಬೃಹತ್‌ ಮೈಸೂರು ಮಹಾನಗರಪಾಲಿಕೆರಚನೆ ಬಗ್ಗೆ ಸಾಕಷ್ಟು ಗಮನ ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸ್ಕಾಡಾ ತಂತ್ರಜ್ಞಾನ ಕಾರ್ಯವೈಖರಿ ಹೇಗೆ? : ಸ್ಕಾಡಾ ಕುರಿತು ಮಾಹಿತಿ ನೀಡಿದ ವಾಣಿವಿಲಾಸ ನೀರು ಸರಬರಾಜು ಮಂಡಳಿಯ ಎಇಇ ಆಸಿಫ್ “ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿನಿಯಂತ್ರಣ ಕೊಠಡಿ ಸ್ಥಾಪಿಸಿ ಇಡೀ ನಗರದ ನೀರು ಸರಬರಾಜು ವ್ಯವಸ್ಥೆಯ ಮೇಲೆ ನಿಗಾ ಇಡಲಾಗು ತ್ತದೆ. ಸೋಲಾರ್‌ ಮತ್ತು ಎಲೆಕ್ಟ್ರಿಕಲ್‌ ಆ್ಯಕುcಯೇಟರ್‌ ಗಳು, ಪ್ರೋ ಮೀಟರ್‌, ಕ್ಯಾಮರಾ ಗಳು, ಸೆನ್ಸಾರ್‌ ಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವ ಹಿಸುತ್ತವೆ. ಎಲ್ಲಿಗೆ ಎಷ್ಟು ನೀರು ಸರಬರಾಜಾಗು ತ್ತಿದೆ, ಎಲ್ಲಿ ನೀರುಸೋರಿಕೆಯಾಗುತ್ತಿದೆ, ಎಲ್ಲಿ ಕಳ್ಳತನ ಆಗುತ್ತಿದೆ ಎಂಬುದನ್ನು ಸುಲಭವಾಗಿ ಪತ್ತೆಹಚ್ಚಬಹುದು. ಈ ತಂತ್ರಜ್ಞಾನ ಬಳಸಿ ನೀರಿನಲ್ಲಿರುವ ಪಿಎಚ್‌, ಕ್ಲೋರಿನ್‌ ಮತ್ತಿತರ ಅಂಶಗಳ ಪ್ರಮಾಣವನ್ನು ತಿಳಿಯಬಹುದು. ಎಲ್ಲವೂ ಆನ್‌ಲೈನ್‌ ಮೂಲಕ ಆಗಲಿದೆ. ನೀರು ಸರಬರಾಜಿನ ಮೇಲ್ವಿಚರಾಣೆ, ನಿಯಂತ್ರಣ ಎರಡನ್ನೂ ಇದರಿಂದ ಮಾಡಬಹುದು. ಇಂತಹ ವ್ಯವಸ್ಥೆ ಬೆಂಗಳೂರಿನಲ್ಲಿದೆ. ಕೆಲವು ಸಣ್ಣ ಸಣ್ಣ ಊರುಗಳಲ್ಲಿ ನೀರು ಸರಬರಾಜಿನ ಮೇಲ್ವಿಚಾರಣೆ ಇದ್ದರೂ ನಿಯಂತ್ರಣ ವ್ಯವಸ್ಥೆ ಇಲ್ಲ. ಇದು ಸುಮಾರು 50 ಕೋಟಿ ರೂ. ವೆಚ್ಚದ ಯೋಜನೆ’ ಎಂದು ವಿವರಿಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.