ನಿದ್ದೆಗೆಡಿಸಿದ ಬಂಡಾಯ ಸ್ಪರ್ಧಿಗಳು

ನಗರಸಭೆ ಚುನಾವಣೆಗೆ ಟಿಕೆಟ್ ಸಿಗದೆ ಬಂಡಾಯ • ಎಲ್ಲಾ ಪಕ್ಷಗಳಲ್ಲೂ ಇದೇ ಪರಿಸ್ಥಿತಿ

Team Udayavani, May 29, 2019, 1:25 PM IST

mysuru-tdy-2..

ನಂಜನಗೂಡು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ಆರ್‌. ಧ್ರುವನಾರಾಯಣ ಪ್ರಚಾರ ನಡೆಸಿದರು.

ನಂಜನಗೂಡು: ಇಲ್ಲಿನ ನಗರಸಭೆ 31 ವಾರ್ಡುಗಳಿಗೆ 134 ಮಂದಿ ಸ್ಪರ್ಧಿಸಿದ್ದಾರೆ. ಬಹುತೇಕ ಕಡೆಗಳಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳು ಕಣದಲ್ಲಿದ್ದರೆ ಹಲವಡೆ ಬಿಜೆಪಿ – ಕಾಂಗ್ರೆಸ್‌ ಬಂಡಾಯ ಗಾರರು ಅಧಿಕೃತ ಅಭ್ಯರ್ಥಿಗಳ ನಿದ್ದೆಗೆಡಿಸಿದ್ದಾರೆ.

ಶಾಸಕರು ಸಂಸದರ ಬೆಂಬಲದೊಂದಿಗೆ ನಗರಸಭೆಯ 2 ದಶಕಗಳ ಅತಂತ್ರ ಹೋಗಲಾಡಿಸಿ ಅಧಿಕಾರ ಕಬಳಿಸಲು ಬಿಜೆಪಿ ಹಾತೊರೆಯುತ್ತಿದ್ದರೆ ಶಾಸಕರು ಹಾಗೂ ಪಕ್ಷದ ಸ್ಥಳಿಯ ಮುಖಂಡರ ನಡುನ ಟಿಕೆಟ್ ಹಂಚಿಕೆಯಿಂದ ಹಿಡಿದು ಪ್ರಚಾರದ ವರೆಗಿನ ಗೊಂದಲವನ್ನೇ ಅಧಿಕಾರ ಹಿಡಿಯುವ ಏಣಿಯಾಗಿಸಿಕೊಳ್ಳಲು ಮಾಜಿ ಸಂಸದ ಆರ್‌.ಧ್ರುವನಾರಾಯಣ ಹಾಗೂ ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ ಅವರ ನೇತೃತ್ವದ ಕಾಂಗ್ರೆಸ್‌ ತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ -ಬಿಜೆಪಿಯ ಅಧಿಕಾರದ ಹಣಾಹಣಿಯಲ್ಲಿ ಅತಂತ್ರ ಸೃಷ್ಟಿಯಾಗಿ ತಮಗೊಂದಿಷ್ಟು ಪಾಲು ಯಾರಿಂದ ಸಿಕ್ಕೀತು ಎನ್ನುವ ಆಸೆ ಜೆಡಿಎಸ್‌ ಜಿಲ್ಲಾಧ್ಯಕ್ಷ ಎನ್‌. ನರಸಿಂಹಸ್ವಾಮಿ, ತಾಲೂಕು ಅಧ್ಯಕ್ಷ ಆರ್‌. ಮಹದೇವಸ್ವಾ ಅವರದ್ದಾಗಿದೆ.

ಕಾಂಗ್ರೆಸ್‌ – ಬಿಜೆಪಿ ಟಿಕೆಟ್ ವಂಚಿತರು ಹಲವಡೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲನ್ನೇ ಗುರಿಯಾಗಿಸಿಕೊಂಡು ಗುಪ್ತ ಹೋರಾಟ ಕೈ ಹಾಕಿದ್ದಾರೆ. ಆದರೆ, ಗೆಲವು ಯಾರಿಗೆ ಎಂಬುದನ್ನು ನಂಜನಗೂಡಿನ 42 ಸಾವಿರಕ್ಕೂ ಹೆಚ್ಚು ಮತದಾರರು ಬುಧವಾರ ತೀರ್ಮಾನಿಸಲಿದ್ದಾರೆ.

ಗುಂಪುಗಾರಿಕೆ ಕಾಂಗ್ರೆಸ್‌: ಕೈ ಪಕ್ಷದಲ್ಲೂ ಗುಂಪುಗಾರಿಕೆ ಇದ್ದು ಸ್ಥಳೀಯರಿಗಿಂತ ರಾಜ್ಯ ಮಟ್ಟದ ನಾಯಕರಲ್ಲಿನ ಅಸಮಾ ಧಾನದ ಬಿಸಿ ತಾಗುತ್ತಿದೆ. 27 ವಾರ್ಡುಗಳಿಗೂ ಅಭ್ಯರ್ಥಿ ಇಲ್ಲದ ಜನತಾ ದಳದಿಂದಲೂ ಅಲ್ಲಲ್ಲಿ ಬಂಡಾಯ ರಾಜಕಾರಣವಿದ್ದು ಅಷ್ಟೇನು ಪ್ರಭಾವ ಬೀರಲಾರದು ಎಂದು ತಿಳಿದು ಬಂದಿದೆ

ಎಚ್ಸಿಎಂ ರಂಗ ಪ್ರವೇಶ: ಮಾಜಿ ಸಂಸದ ಆರ್‌.ಧ್ರುವನಾರಾಯಣ ಹಾಗೂ ಕೇಶವ ಮೂರ್ತಿ ಅವರ ವಿರುದ್ಧ ಅಸಮಾ ಧಾನದಿಂದ ಕುದಿಯುತ್ತಿರುವ ಲೋಕೋಪ ಯೋಗಿ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಈಗ ನಂಜನಗೂಡಿನ ನಗರಸಭಾ ಚುನಾವಣೆಗೆ ರಂಗ ಪ್ರವೇಶ ಮಾಡಿದ್ದಾರೆ.

ಭಾನುವಾರ ನಂಜನಗೂಡಿಗೆ ಆಗಮಿಸಿ ಎಲ್ಲಾ 31 ಅಭ್ಯರ್ಥಿಗಳ ಸಭೆ ನಡೆಸಿದ್ದೂ ಅಲ್ಲದೆ ಅವರನ್ನೆಲ್ಲಾ ಆರ್ಥಿಕವಾಗಿ ಹುರಿ ದುಂಬಿಸಿ ವಾಪಸಾಗಿರುವುದು ತಾಲೂಕು ಕಾಂಗ್ರೆಸ್‌ ಅನ್ನು ಮುಂದಿನ ರಾಜಕಾರಣದ ದಿಕ್ಸೂಚಿಯಾಗಿದೆ ಎನ್ನಲಾಗಿದೆ.

ಬಿಜೆಪಿ ಪಾಲಿಗೆ ಹೆಚ್ಚು ಮಹತ್ವ ಪಡೆದಿದೆ‌:

ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಹೆಚ್ಚು ಮತಗಳು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಹರ್ಷವರ್ಧನ ಅವರ ಪಾಲಿಗೆ ಅತ್ಯಂತ ಮಹತ್ತರವಾದ ಚುನಾವಣೆ ಇದಾಗಿದೆ. ಟಿಕೆಟ್ ಹಂಚಿಕೆಯಲ್ಲಿನ ಸ್ಥಳೀಯ ಅಸಮಾಧಾನ ಬಿಜೆಪಿಯ ಗೆಲುವಿಗೆ ಅನೇಕ ವಾರ್ಡುಗಳಲ್ಲಿ ಮುಳ್ಳಾಗಲಿದೆ ಎನ್ನಲಾಗುತ್ತಿದೆ. ಮೊದಲೇ ಹತ್ತಾರು ಬಣಗಳಾಗಿದ್ದ ನಂಜನಗೂಡು ಬಿಜೆಪಿ ಶ್ರೀನಿವಾಸ ಪ್ರಸಾದರಿಂದ ಒಂದಾಗಿ ಕಾಣುತ್ತಿದ್ದರೂ ಒಳಗೊಳಗೆ ಒಬ್ಬರ ವಿರುದ್ಧ ಇನ್ನೊಬ್ಬರ ಮಸಲತ್ತು ಚಾಳಿ ಈಗಲೂ ನಡೆಯುತ್ತಿದೆ.
● ಶ್ರೀಧರ ಆರ್‌.ಭಟ್

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.