ರೋಗಿಗಳು ಕಂಗಾಲು; ಆಸ್ಪತ್ರೆಯೊಳಗೆ ಬುಸ್, ಬುಸ್ ನಾಗಪ್ಪ ಪ್ರತ್ಯಕ್ಷ!
Team Udayavani, Jul 17, 2017, 12:50 PM IST
ಮೈಸೂರು:ಬರೋಬ್ಬರಿ 60 ಮಂದಿ ರೋಗಿಗಳಿದ್ದ ವಾರ್ಡ್ ನೊಳಗೆ ನಾಗರಹಾವು ಪ್ರತ್ಯಕ್ಷವಾಗಿದ್ದರಿಂದ ರೋಗಿಗಳು ಭಯಭೀತರಾದ ಘಟನೆ ಮೈಸೂರಿನ ಸ್ಯಾನಿಟೋರಿಯಂ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಖಾಸಗಿ ಟಿವಿ ಚಾನೆಲ್ ವೊಂದರ ವರದಿ ತಿಳಿಸಿದೆ.
ಸ್ಯಾನಿಟೋರಿಯಂ ಆಸ್ಪತ್ರೆಯ ಔಷಧ ಇಡುವ ಕಬೋರ್ಡ್ ನೊಳಗೆ ನಾಗರಹಾವು ಸೇರಿಕೊಂಡಿತ್ತು. ಕಬೋರ್ಡ್ ತೆರೆದಾಗ ಹಾವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಯ ಸಿಬ್ಬಂದಿಗಳು ಉರಗ ತಜ್ಞರಿಗೆ ವಿಷಯ ಮುಟ್ಟಿಸಿದ್ದರು.
ಏತನ್ಮಧ್ಯೆ ವಾರ್ಡ್ ನಲ್ಲಿದ್ದ 60 ಮಂದಿ ರೋಗಿಗಳು ಕಂಗಾಲಾಗಿದ್ದರು. ರೋಗಿಗಳ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಉರಗ ಸಂರಕ್ಷಕ ಸ್ನೇಕ್ ರಮೇಶ್ ಅವರು ಹಾವನ್ನು ಹಿಡಿದು ತೆಗೆದುಕೊಂಡು ಹೋದ ಮೇಲೆ ರೋಗಿಗಳು, ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ