Somanathapura Channakesava: ಸೋಮನಾಥಪುರ ಚನ್ನಕೇಶವನಿಗೆ ವಿಶ್ವ ಮಾನ್ಯತೆ


Team Udayavani, Sep 21, 2023, 12:12 PM IST

Somanathapura Channakesava: ಸೋಮನಾಥಪುರ ಚನ್ನಕೇಶವನಿಗೆ ವಿಶ್ವ ಮಾನ್ಯತೆ

ತಿ.ನರಸೀಪುರ: ರಾಷ್ಟ್ರೀಯ ಸ್ಮಾರಕ ಸ್ಥಾನ ಪಡೆದಿರುವ ಐತಿಹಾಸಿಕ ಪ್ರಸಿದ್ಧ ಸೋಮನಾಥಪುರ ಚನ್ನಕೇಶವ ದೇವಸ್ಥಾನ ಯುನೆಸ್ಕೋ-ವಿಶ್ವ ಪಾರಂಪರಿಕ ತಾಣಕ್ಕೆ ಸೇರ್ಪಡೆಗೊಂಡಿದ್ದು ದೇಗುಲಕ್ಕೆ ಸಿಕ್ಕ ಮತ್ತೂಂದು ಗರಿಮೆ.

ಕೇಂದ್ರ ಸರ್ಕಾರ 2022ರ ಫೆಬ್ರವರಿಯಲ್ಲಿ ರಾಜ್ಯದ ಬೇಲೂರು, ಹಳೇಬೀಡು, ಸೋಮನಾಥಪುರ ಚನ್ನಕೇಶವ ದೇಗುಲವನ್ನು ಯುನೆಸ್ಕೋಗೆ ನಾಮನಿರ್ದೇಶನ ಮಾಡಿತ್ತು. ಇದೀಗ ಈ ಅತ್ಯದ್ಭುತ ಶಿಲ್ಪಕಲೆ ಹೊಂದಿರುವ ಸೋಮನಾಥಪುರ ಚನ್ನಕೇಶವ ದೇಗುಲಕ್ಕೆ ಯುನೆಸ್ಕೋ ಅಧಿಕೃತ ಮುದ್ರೆ ಹೊತ್ತಿದೆ. ಹೊಯ್ಸಳರು ನಿರ್ಮಿಸಿರುವ ಈ ದೇಗುಲ ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದು ಪ್ರವಾಸೋದ್ಯಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಅಸಾಧಾರಣ ಹಾಗೂ ಆಕರ್ಷಕ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.

ಹೊಯ್ಸಳರ ಕಾಲ: ಹೊಯ್ಸಳರ ಕಾಲದ 3ನೇ ನರಸಿಂಹರಾಜನ ಆಡಳಿತದಲ್ಲಿ ದಂಡನಾಯಕನಾಗಿದ್ದ ಸೋಮನಾಥ ಎಂಬವರ ಅವಧಿಯಲ್ಲಿ ಸಂಪೂರ್ಣ ಕಲ್ಲುಗಳಿಂದ ನಿರ್ಮಾಣಗೊಂಡ ಐತಿಹಾಸಿಕ ದೇಗುಲ ಇದಾಗಿದೆ. ಇದು ವೈಷ್ಣವ ದೇಗುಲ. ಆದರೆ, ಇಲ್ಲಿ ಯಾವುದೇ ಧಾರ್ಮಿಕ ಪೂಜಾ ಕೈಂಕರ್ಯ ನಡೆಯುವುದಿಲ್ಲ. ಇದು ಭಾರತೀಯ ಪುರಾತತ್ವ ಇಲಾಖೆ ವ್ಯಾಪ್ತಿಗೆ ಸೇರಿದ್ದು ಇಲಾಖೆ ನಿಯಮಗಳು ಇಲ್ಲಿಗೂ ಅನ್ವಯವಿದೆ. ಹೊಯ್ಸಳರ ಕಾಲದಲ್ಲಿ ಅಂದರೆ, 12-13ನೇ ಶತಮಾನದ (1268) ಹಿಂದೆ ದೇಗುಲವನ್ನು ಆಕರ್ಷಕವಾಗಿ ನಿರ್ಮಿಸಿದ್ದು, ಮೈಸೂರಿನ ಅಂಬಾವಿಲಾಸಿ ಅರಮನೆಗೂ ಮುನ್ನವೇ ಈ ಸೋಮನಾಥಪುರ ಚನ್ನಕೇಶ್ವರ ದೇವಸ್ಥಾನ ಸ್ಥಾಪಿತವಾಗಿದೆ ಎಂಬ ಮಾಹಿತಿ ಇದೆ. ಈ ದೇವಸ್ಥಾನ ಯಾವಾಗ ಸ್ಥಾಪನೆಯಾಯಿತು ಎಂಬುದರ ಬಗ್ಗೆ ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆಯಲ್ಲಿ ಬರೆಯಲಾಗಿದೆ.

ಅದ್ಭುತ ಶಿಲ್ಪಕಲೆ: 700 ವರ್ಷಕ್ಕೂ ಹಳೆಯದಾದ ಈ ಚನ್ನಕೇಶವ ದೇವಸ್ಥಾನ ಅತ್ಯದ್ಭುತವಾದ ಶಿಲ್ಪಕಲೆ ಹೊಂದಿದ್ದು ಪ್ರವಾಸಿಗರು ಹಾಗೂ ಶಿಲ್ಪಕಲಾ ಪ್ರಿಯರನ್ನು ಬೆರಗುಗೊಳಿಸುತ್ತದೆ. ದೇವಾಲಯದ ಸಂಕೀರ್ಣದ ಬಹುತೇಕ ರಚನೆ ಇಂದಿಗೂ ಸುಸ್ಥಿತಿಯಲ್ಲಿ ಸಂರಕ್ಷಿಸಲ್ಪಟ್ಟಿದ್ದು ಪ್ರಸ್ತುತ ಭಾರತೀಯ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿದೆ.

ವಿದೇಶಿಗರ ಶ್ಲಾಘನೆ: ಈ ಹಿಂದೆ ಸಾಕಷ್ಟು ಪ್ರಚಾರ, ಶಿಲ್ಪಕಲೆಯಿಂದ ಪ್ರವಾಸಿಗರು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪ್ರವಾಸೋದ್ಯಮಕ್ಕೆ ಪೂರಕ ಅಗತ್ಯ ಸೌಲಭ್ಯ, ಅಭಿವೃದ್ಧಿ ಆಗದ ಕಾರಣ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.

ಯುನೆಸ್ಕೋ ಪ್ರಕ್ರಿಯೆ ಹೇಗಿತ್ತು?: ಕೇಂದ್ರ ಸರ್ಕಾರ 2022ರ ಫೆಬ್ರವರಿಯಲ್ಲಿ ಯುನೆಸ್ಕೋ ಪಟ್ಟಿಗೆ ಸೋಮನಾಥಪುರ ಚನ್ನಕೇಶವ ದೇವಾಲಯ, ಬೇಲೂರು ಹಾಗೂ ಹಳೇಬಿಡು ಚನ್ನಕೇಶವ ದೇಗುಲವನ್ನು ಕೇಂದ್ರ ಸರ್ಕಾರ ಶಿಫಾರಸು ಮಾಡಿತ್ತು. ಬಳಿಕ ಯುನೆಸ್ಕೋ ತಜ್ಞರ ತಂಡ ಈ ಐತಿಹಾಸಿಕ ತಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೌಲ್ಯಮಾಪನ ನಡೆಸಿತ್ತು. 2023ರ ಮಧ್ಯಭಾಗದಲ್ಲಿ ಈ ದೇಗುಲಗಳ ಬಗ್ಗೆ ಯುನೆಸ್ಕೋ ದಸ್ತಾವೇಜು ಸಿದ್ಧಪಡಿಸಿತ್ತು. ರಿಯೋದಲ್ಲಿ ಇತ್ತೀಚೆಗೆ ನಡೆದ ಯುನೆಸ್ಕೋ ಸಭೆಯಲ್ಲಿ ಅಂತಿಮ ಘೋಷಣೆ ಪ್ರಕಟಗೊಂಡಿದೆ. ಈ 3 ದೇಗುಲಗಳು ಹೊಯ್ಸಳರ ಕಾಲದಲ್ಲಿ ನಿರ್ಮಿಸಿದ್ದು, ಇಲ್ಲಿನ ಶಿಲ್ಪಕಲೆ ವಿದೇಶಿಗರ ಮೆಚ್ಚುಗೆಗೆ ಪಾತ್ರವಾಗಿವೆ.

ಎಲ್ಲಿದೆ ಸೋಮನಾಥಪುರ ಕೇಶವ ದೇಗುಲ?: ಈ ದೇಗುಲ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿದೆ. ಸೋಮನಾಥಪುರ ಗ್ರಾಮೀಣ ಪ್ರದೇಶವಾಗಿದ್ದು ಚನ್ನಕೇಶವ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಈ ದೇಗುಲದ ಸಮೀಪ ಕಾವೇರಿ ನದಿ ಹರಿಯ ಲಿದ್ದು, ರಮಣೀಯ ಪ್ರಕೃತಿ ಸೌಂದರ್ಯ ಹೊಂದಿದೆ. ತಾಲೂಕು ಕೇಂದ್ರದಿಂದ 10 ಕಿ.ಮೀ.ದೂರದಲ್ಲಿದ್ದರೆ, ಮೈಸೂರು ನಗರದಿಂದ 40 ಕಿ.ಮೀ. ಹಾಗೂ ಬೆಂಗಳೂರಿನಿಂದ 130 ಕಿ.ಮೀ. ದೂರದಲ್ಲಿದೆ. ದೇಗುಲಗಳ ತೊಟ್ಟಿಲು ಎಂದು ಕರೆಯಲ್ಪಡುವ ಈ ತಿ.ನರಸೀಪುರ ತಾಲೂಕು ಪ್ರವಾಸಿ ತಾಣಕ್ಕೆ ಹೇಳಿ ಮಾಡಿಸಿದಂತಿದೆ. ತಾಲೂಕಿನಲ್ಲಿ ಮೂಗೂರು ತ್ರಿಪುರ ಸುಂದರಿ ದೇಗುಲ, ತ್ರಿವೇಣಿ ಸಂಗಮ, ತಲಕಾಡು(ಪಂಚಲಿಂಗ ದರ್ಶನ), ಮುಡುಕತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಗುಂಜಾ ನರಸಿಂಹ ದೇವಸ್ಥಾನ ಇದೆ. ಜತೆಗೆ ತ್ರಿವೇಣಿ ಸಂಗಮದಲ್ಲಿ 12 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯಲಿದ್ದು, ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿದೆ.

ಕಾವೇರಿ, ಕಪಿಲಾ ನದಿ ಹಾಗೂ ಸ್ಫಟಿಕ ಸರೋವರ ಹರಿಯುವುದರಿಂದ ತ್ರಿವೇಣಿ ಸಂಗಮ ಎಂದು ಕರೆಯಲಾಗಿದೆ. ಸ್ಫಟಿಕ ಸರೋವರ ಕಣ್ಣಿಗೆ ಕಾಣುವುದಿಲ್ಲ. ಅದೃಶ್ಯವಾಗಿ ಹರಿಯುತ್ತದೆ. ಈ ತ್ರಿವೇಣಿ ಸಂಗಮ ಕಾಶಿಗಿಂತ ಗುಲಗಂಜಿ ತಕ್ಕಕ್ಕಿಂತ ಹೆಚ್ಚು ಪವಿತ್ರ ಕ್ಷೇತ್ರವಾಗಿದೆ ಎಂಬ ಪ್ರತೀತಿ ಇದೆ. ಒಂದು ದಿನದಲ್ಲಿ ಈ ಎಲ್ಲ ದೇಗುಲ ಹಾಗೂ ಪ್ರವಾಸಿ ತಾಣ ವೀಕ್ಷಿಸಬಹುದಾಗಿದೆ.

ತಾಲೂಕಿನ ಸೋಮನಾಥಪುರದ ಶ್ರೀಚನ್ನಕೇಶವ ದೇವಾಲಯ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರ್ಪಡೆಯಾಗಿರುವುದು ಬಹಳ ಹೆಮ್ಮೆಯ ವಿಷಯ. ನಾನು ಶಾಸಕನಾಗಿದ್ದ ಅವಧಿಯಲ್ಲಿ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಒಂದು ಕಡೆ ಸಂತೋಷವಾದರೂ ಮತ್ತೂಂದೆಡೆ ಸ್ಥಳೀಯ ನಿವಾಸಿಗಳಿಗೆ ಇದರಿಂದ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ, ಸರ್ಕಾರ ಗಮನಹರಿಸಬೇಕು. – ಎಂ.ಅಶ್ವಿ‌ನ್‌ ಕುಮಾರ್‌, ಮಾಜಿ ಶಾಸಕ

ನಾಡಿನ ಹೆಮ್ಮೆಯ ಶಿಲ್ಪಕಲೆಗೆ ಹೆಸರಾದ ಸೋಮನಾಥಪುರದ ದೇಗುಲ ಜಾಗತಿಕ ಮಾನ್ಯತೆ ಪಡೆದಿರುವುದು ನಿಜಕ್ಕೂ ಸಂತಸ ತಂದಿದೆ. ಆದರೆ ಸೋಮನಾಥಪುರ ಗ್ರಾಮ ಚಿಕ್ಕದಿರುವುದರಿಂದ ಇಲ್ಲಿನ ಸ್ಥಳೀಯ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ. – ಕೆ.ಎನ್‌.ಪ್ರಭುಸ್ವಾಮಿ, ವಿಚಾರವಾದಿ, ತಿ.ನರಸೀಪುರ

-ಎಸ್‌.ಬಿ.ಪ್ರಕಾಶ್‌

ಟಾಪ್ ನ್ಯೂಸ್

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.