ಎಸ್ಸೆಸ್ಸೆಲ್ಸಿ ಫ‌ಲಿತಾಂಶ ವೃದ್ಧಿಗೆ ವಿಶೇಷ ತರಗತಿ


Team Udayavani, Feb 15, 2021, 6:18 PM IST

ಎಸ್ಸೆಸ್ಸೆಲ್ಸಿ ಫ‌ಲಿತಾಂಶ ವೃದ್ಧಿಗೆ ವಿಶೇಷ ತರಗತಿ

ಹುಣಸೂರು: ಈ ಬಾರಿ ಕೊರೊನಾ ನಡುವೆ ತಾಲೂಕಿನ ಸರ್ಕಾರಿ ಶಾಲೆಗಳಿಗೆ 344 ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ಪ್ರವೇಶ ಪಡೆದಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 4054 ವಿದ್ಯಾರ್ಥಿಗಳಿದ್ದು, ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ವಿಶೇಷ ತರಗತಿ ನಡೆಸುವ ಮೂಲಕ ಫಲಿತಾಂಶ ವೃದ್ಧಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ ತಿಳಿಸಿದರು.

ತಾಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷೆ ಪದ್ಮಮ್ಮ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ವೇಳೆ ಮಾತನಾಡಿದ ಅವರು, ಕಳೆದ ಬಾರಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದ ಶಾಲೆಗೆ ವಿಶೇಷ ಗಮನ ಹರಿಸಲಾಗಿದೆ ಎಂದರು.

ತಾಪಂ ಇಒ ಮಾತನಾಡಿ, ಶಾಲೆಗಳ ಗುರುತಿಸಿ, ಉದ್ಯೋಗ ಖಾತರಿ ಯೋಜನೆಯಡಿ ಅಭಿವೃದ್ಧಿಗೊಳಿಸುವ ಸಲುವಾಗಿ ಕ್ರಿಯಾಯೋಜನೆ ರೂಪಿಸುವಂತೆ ಸೂಚಿಸಿದರು. ತಾಲೂಕಿನ ವಿವಿಧ ಹಾಡಿಗಳಿಂದ 80 ಲಕ್ಷರೂ ವಿದ್ಯುತ್‌ ಬಿಲ್‌ ಬಾಕಿ ಇದೆ. ಆರೋಗ್ಯ ಇಲಾಖೆಯಲ್ಲಿ ಸೌಲಭ್ಯ ನೀಡಲು ಸಿಬ್ಬಂದಿಗಳಿಲ್ಲ, ಪ್ರಸೂತಿ ತಜ್ಞರ ಕೊರತೆಯಿಂದ ಶಸ್ತ್ರಚಿಕಿತ್ಸೆ ನಡೆಯುತ್ತಿಲ್ಲ, ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಪರಿಶಿಷ್ಟವರ್ಗಗಳ ಕಲ್ಯಾಣಾಧಿಕಾರಿ ಬಸವರಾಜು, ಆಶ್ರಮಶಾಲೆಗಳಲ್ಲಿ,6 ಮತ್ತು 7 ತರಗತಿಗಳು ಮಾತ್ರ ವಿದ್ಯಾಗಮ ಯೋಜನೆಯಡಿ ವ್ಯಾಸಂಗ ನಡೆಯುತ್ತಿದ್ದು, ಆಶ್ರಮಶಾಲೆ ಮಕ್ಕಳಿಗೆ ಊಟೋಪಚಾರ ವ್ಯವಸ್ಥೆ ಸರ್ಕಾರದ ಮಟ್ಟದಲ್ಲೇ ನಿರ್ಣಯ ಆಗಬೇಕಿದೆ ಎಂದರು. ಎಇಇ ಸಿದ್ದಪ್ಪ ಮಾತನಾಡಿ, ವಿವಿಧ ಹಾಡಿಗಳಿಂದ ಒಬ್ಬೊಬ್ಬರು 4-5 ಸಾವಿರ ರೂ. ನಂತೆ ಒಟ್ಟು 80 ಲಕ್ಷ ರೂ.ವಿದ್ಯುತ್‌ ಶುಲ್ಕ ಬಾಕಿ ಇದೆ. ಮನೆಯವರು ಕನಿಷ್ಠ 500 ರೂ.ನೀಡಿದರೂ ಮರು ಸಂಪರ್ಕ ನೀಡುತ್ತೇವೆ ಎಂದು ತಿಳಿಸಿದರು.

ತಾಪಂ ಇಒ ಗಿರೀಶ್‌, ಬಾಕಿ ಪಟ್ಟಿ ನೀಡಿದಲ್ಲಿ ತಾಪಂನ ಎಸ್ಸಿ ಎಸ್ಟಿ ಅನುದಾನದಡಿ ಪ್ರತಿ ಮನೆಗೆ ಕನಿಷ್ಠ 500 ರೂ. ಒದಗಿಸಲಾಗುವುದು. 40 ಲಕ್ಷ ರೂ. ಅನುದಾನದಲ್ಲಿ ಹಾಸ್ಟೆಲ್‌ಗ‌ಳ ಅಭಿವೃದ್ಧಿಗೆ ಅಗತ್ಯವಿರುವ ಸೌಲಭ್ಯ, ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಟಿಎಚ್‌ಒ ಡಾ.ಕೀರ್ತಿಕುಮಾರ್‌ ಮಾತನಾಡಿ, ತಜ್ಞ ವೈದ್ಯರ ಕೊರತೆಯಿಂದ ಶಸ್ತ್ರಚಿಕಿತ್ಸೆ ನಡೆಯುತ್ತಿಲ್ಲ, ಅಲ್ಲದೆ ತಾಲೂಕಿನ 19 ಆರೋಗ್ಯ ಸಹಾಯಕರು ವರ್ಗಾವಣೆಗೊಂಡಿದ್ದು, ಕೆಲಸ ಮಾಡುವುದೇ ದುಸ್ತರವಾಗಿದೆ ಎಂದು ಅಸಹಾಯಕತೆ ತೋಡಿಕೊಂಡರು. ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಸನ್ನ, ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.