ಪ್ಲೀಸ್‌, ನಿಮ್ಮ ವೋಟು ನೀವೇ ಹಾಕಿಸಿಕೊಳ್ಳಿ…


Team Udayavani, Feb 24, 2023, 5:30 AM IST

ಪ್ಲೀಸ್‌, ನಿಮ್ಮ ವೋಟು ನೀವೇ ಹಾಕಿಸಿಕೊಳ್ಳಿ…

ಮೈಸೂರು: ಪ್ಲೀಸ್‌, ನಿಮ್ಮ ವೋಟು ನೀವು ಹಾಕಿಸಿಕೊಳ್ಳಿ….

ಹಳೆ ಮೈಸೂರು ಭಾಗದ ಕೆಲವು ಅಸೆಂಬ್ಲಿ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಬಿಜೆಪಿ ಮುಖಂಡರಿಗೆ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಮನವಿ ಇದು.

ಇದಕ್ಕೆ ಕಾರಣ ಇಷ್ಟೇ. ಹಳೆಯ ಮೈಸೂರು ಭಾಗದ ಅನೇಕ ಅಸೆಂಬ್ಲಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲ್ಲುವ ಶಕ್ತಿ ಇಲ್ಲದಿರಬಹುದು. ಆದರೆ ಆ ಪಕ್ಷಕ್ಕೆ ಅದರದ್ದೇ ಆದ ಸಾಂಪ್ರದಾಯಕ ಮತದಾರರಿದ್ದಾರೆ. ಅಲ್ಲಿ ಬಿಜೆಪಿ ಗೆಲ್ಲದಿರಬಹುದು. ಆದರೆ ವೋಟುಗಳಿವೆ. ಈಗ ಈ ಕ್ಷೇತ್ರಗಳಲ್ಲಿ ಬಿಜೆಪಿಗರಿಗೆ ಕಾಂಗ್ರೆಸಿಗರ ಮನವಿ ಇಷ್ಟೇ. ನಿಮ್ಮ ಬಿಜೆಪಿ ವೋಟು ನೀವು ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ನಿಮ್ಮ ವೋಟುಗಳನ್ನು ಜೆಡಿಎಸ್‌ಗೆ ವರ್ಗಾಯಿಸಬೇಡಿ. ನಿಮ್ಮ ವೋಟು ಜೆಡಿಎಸ್‌ಗೆ ವರ್ಗಾವಣೆಯಾದರೆ ಕಾಂಗ್ರೆಸ್‌ ಸೋಲುತ್ತದೆ. ಇದರಿಂದ ಬಿಜೆಪಿ ಬೆಳೆಯುವುದಿಲ್ಲ. ಕಾಂಗ್ರೆಸ್‌ಗೂ ಅನುಕೂಲವಿಲ್ಲ. ಜೆಡಿಎಸ್‌ಗೆ ಲಾಭವಾಗುತ್ತದೆ. ಅತಂತ್ರ ವಿಧಾನಸಭೆ ರಚನೆಯಾದರೆ  ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿಯನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸಲು ಜೆಡಿಎಸ್‌ ಪ್ರಾರಂಭಿಸುತ್ತದೆ. ಹೀಗೆ ಮಾಡ್ಬೇಡಿ ಎಂಬುದು ಈಗ ಕಾಂಗ್ರೆಸಿಗರು ಬಿಜೆಪಿಯ ಸ್ಥಳೀಯ ನಾಯಕರ ಮುಂದಿಡುತ್ತಿರುವ ಬಿನ್ನಹ.

ಕಳೆದ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಹಳೇ ಮೈಸೂರಿನ ಅನೇಕ ಅಸೆಂಬ್ಲಿ ಕ್ಷೇತ್ರಗಳಲ್ಲಿ ಬಿಜೆಪಿ ಡಮ್ಮಿ ಅಭ್ಯರ್ಥಿಗಳನ್ನು ಹೂಡಿ ಪರೋಕ್ಷವಾಗಿ ಜೆಡಿಎಸ್‌ ಗೆಲುವಿಗೆ ಕಾರಣವಾಯಿತು. ಕಾಂಗ್ರೆಸ್‌ ಸೋಲಿಸಬೇಕೆಂಬ ಏಕೈಕ ಉದ್ದೇಶದಿಂದ ಬಿಜೆಪಿಯ ಸಾಂಪ್ರದಾಯಕ ಮತಗಳು ಜೆಡಿಎಸ್‌ಗೆ ಟ್ರಾನ್ಸ್‌ಫ‌ರ್‌ ಆಯಿತು. ಇದರಿಂದ ಕಾಂಗ್ರೆಸ್‌ ಸೋತಿತು. ಮೈಸೂರು  ಸೇರಿದಂತೆ ಹಳೆಯ ಮೈಸೂರು ಭಾಗದ ಅನೇಕ ಅಸೆಂಬ್ಲಿ ಕ್ಷೇತ್ರಗಳಲ್ಲಿ ಹೀಗಾಯಿತು. ಇದನ್ನು ಕಾಂಗ್ರೆಸಿಗರು ಈಗ ಉದಾಹರಣೆಯಾಗಿ ನೀಡುತ್ತಿದ್ದಾರೆ.

ಇತ್ತ ಬಿಜೆಪಿಯ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರಿಗೂ ಅಸೆಂಬ್ಲಿ ಚುನಾವಣೆ ಬಂತೆಂದರೆ ಜೆಡಿಎಸ್‌ ಜತೆ ಹೈಕಮಾಂಡ್‌ ಮಟ್ಟದಲ್ಲೇ ಒಳ ಒಪ್ಪಂದ ಏರ್ಪಡುವ ಬಗ್ಗೆ ಬೇಸರವಿದೆ. ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಬೇಕೆಂದು ಜೆಡಿಎಸ್‌ಗೆ  ಅನುಕೂಲ ಮಾಡಿಕೊಡಲು ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನವಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಳೆಯದಿರಲು ಇದೇ ಮುಖ್ಯ ಕಾರಣವಾಗಿದೆ ಎಂಬುದು ಅವರ ವಾದವಾಗಿದೆ.

ಪಕ್ಷದ ಹೈಕಮಾಂಡ್‌ಗೂ ಅವರು ಈ ಕುರಿತು  ಮನವರಿಕೆ ಮಾಡಿಕೊಟ್ಟಿದ್ದಾರೆ. ಬಿಜೆಪಿ ತನ್ನ ನೆಲೆ ಗಟ್ಟಿ ಇಲ್ಲದ ಅಸೆಂಬ್ಲಿ ಕ್ಷೇತ್ರಗಳಲ್ಲಿ ಸೋತರೂ ಪರವಾಗಿಲ್ಲ, ಯಾವುದೇ ಕಾರಣಕ್ಕೂ ಬಿಜೆಪಿ ಮತಗಳನ್ನು ಜೆಡಿಎಸ್‌ಗೆ ಟ್ರಾನ್ಸ್‌ಫ‌ರ್‌ ಮಾಡುವುದು ಬೇಡ. ಕೆಲವು ಚುನಾವಣೆಗಳಲ್ಲಿ ಸೋಲಬಹುದು. ಆದರೆ ಚುನಾವಣೆಯಿಂದ ಚುನಾವಣೆಗೆ ಪಕ್ಷದ ನೆಲೆಯನ್ನು ಗಟ್ಟಿ ಮಾಡಿ  ಮುಂಬರುವ ವರ್ಷಗಳಲ್ಲಿ ಜಯ ಸಾಧಿಸಬಹುದು ಎಂಬುದು ಬಿಜೆಪಿಯ ಸ್ಥಳೀಯ ಕಾರ್ಯಕರ್ತರ ವಾದವಾಗಿದೆ. ಉದಾಹರಣೆಯಾಗಿ ಅವರು ಅನೇಕ ವಿಧಾನಸಭಾ ಕ್ಷೇತ್ರಗಳ ಹೆಸರನ್ನು ಉಲ್ಲೇಖೀಸುತ್ತಾರೆ. ಇದರಲ್ಲಿ ಈ ಹಿಂದೆ ಬಿಜೆಪಿ ಜಯ ಸಾಧಿಸಿದ್ದ ಕೆಲವು ಅಸೆಂಬ್ಲಿ ಕ್ಷೇತ್ರಗಳೂ ಇವೆ.

ಕಳೆದ ಚುನಾವಣೆ ವೇಳೆ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಅವರು ಹಳೇ ಮೈಸೂರು ಭಾಗದ ಬಹಿರಂಗ ಸಭೆಗಳಲ್ಲಿ ಮಾತಾಡುತ್ತಾ ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂದು ಜರಿದಿದ್ದರು. ಆಗ ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಕಾಂಗ್ರೆಸ್‌ ಮಣಿಸಲು ಜೆಡಿಎಸ್‌ಗೆ ಸಾಥ್‌ ನೀಡಿದ್ದನ್ನು ಗಮನಿಸಿಯೇ ರಾಹುಲ್‌ ಈ ಮಾತು ಆಡಿದ್ದರು. ಆದರೆ ಚುನಾವಣೆ ಬಳಿಕ ಅತಂತ್ರ ವಿಧಾನಸಭೆ ರಚನೆಯಾದಾಗ ಜೆಡಿಎಸ್‌ ಪಕ್ಷವು ಕಾಂಗ್ರೆಸ್‌ ಬೆಂಬಲವನ್ನು ಪಡೆದು ಸಮ್ಮಿಶ್ರ ಸರಕಾರ ರಚಿಸಿದ್ದು ಈಗ ಇತಿಹಾಸ.

– ಕೂಡ್ಲಿ ಗುರುರಾಜ 

ಟಾಪ್ ನ್ಯೂಸ್

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.