ಕುಂಭಮೇಳಕ್ಕೆ ಐಆರ್‌ಸಿಟಿಸಿಯಿಂದ ವಿಶೇಷ ರೈಲು ಪ್ರವಾಸ


Team Udayavani, Dec 20, 2018, 11:43 AM IST

m4kumba.jpg

ಮೈಸೂರು: ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಅರ್ಧ ಕುಂಭಮೇಳಕ್ಕೆ ಹೋಗುವ ಯಾತ್ರಿಕರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಕ್ಯಾಟರಿಂಗ್‌ ಮತ್ತು ಟೂರಿಸಂ ಕಾರ್ಪೋರೇಷನ್‌ ಲಿ. (ಐಆರ್‌ಸಿಟಿಸಿ) ವಿಶೇಷ ಪ್ರವಾಸಿ ರೈಲಿನ ವ್ಯವಸ್ಥೆ ಮಾಡಿದೆ. ಈ ವಿಶೇಷ ರೈಲು ಮಧುರೈ ರೈಲು ನಿಲ್ದಾಣದಿಂದ ಹೊರಟು ಫೆ.15ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ರೈಲು ನಿಲ್ದಾಣದ ಮೂಲಕ ಹಾದು ಹೋಗಲಿದೆ ಎಂದು ಐಆರ್‌ಸಿಟಿಸಿ ಪ್ರಾದೇಶಿಕ ಅಧಿಕಾರಿ ಡಿ.ಶಿವಕುಮಾರ್‌ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರವಾಸಿ ಪ್ಯಾಕೇಜ್‌ನಲ್ಲಿ ಪ್ರತಿ ವ್ಯಕ್ತಿಗೆ 12,230 ರೂ. ನಿಗದಿಪಡಿಸಲಾಗಿದ್ದು, ಈ ಪ್ಯಾಕೇಜ್‌ನಲ್ಲಿ ಧರ್ಮಶಾಲಾ, ಹಾಲ್‌, ಡಾರ್ಮಿಟೊರೀಸ್‌ ವ್ಯವಸ್ಥೆ, ಊಟ, ವಸತಿ, ರಸ್ತೆ ಮಾರ್ಗದಲ್ಲಿ ಪ್ರಯಾಣ, ಭದ್ರತಾ ವ್ಯವಸ್ಥೆ, ಗೈಡ್‌ ವ್ಯವಸ್ಥೆಯನ್ನೂ ಒಳಗೊಂಡಿದೆ ಎಂದು ತಿಳಿಸಿದರು. 

ಫೆ.15ರಂದು ಮದ‌ುರೈನಿಂದ ಹೊರಡುವ ಈ ರೈಲು ಬೆಂಗಳೂರಿನ ವೈಟ್‌ಫೀಲ್ಡ್‌ ರೈಲು ನಿಲ್ದಾಣದ ಮೂಲಕ ಹಾದು ಹೋಗಿ 17ರಂದು ಸಂಜೆ ವಾರಾಣಸಿ ತಲುಪಲಿದ್ದು, ಯಾತ್ರಿಕರು ಅಂದು ರಾತ್ರಿ ವಾರಾಣಸಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. 18ರಂದು ಪವಿತ್ರ ಗಂಗಾ ಸ್ನಾನ, ಕಾಶಿ ವಿಶ್ವನಾಥ, ಕಾಶಿ ವಿಶಾಲಾಕ್ಷಿ ದರ್ಶನ ಪಡೆದು ವಾರಾಣಸಿಯಲ್ಲೇ ತಂಗಲಿದ್ದಾರೆ.

19ರಂದು ಮುಂಜಾನೆ ವಾರಾಣಸಿಯಿಂದ ರಸ್ತೆ ಮಾರ್ಗವಾಗಿ ಹೊರಟು ಅಲಹಾಬಾದ್‌ ತಲುಪಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಅರ್ಧ ಕುಂಭಮೇಳದಲ್ಲಿ ಪಾಲ್ಗೊಂಡ ಬಳಿಕ ರಾತ್ರಿ ವಾರಣಸಿ ತಲುಪಲಿದ್ದಾರೆ. 20ರಂದು ಮುಂಜಾನೆ ಗಯಾ ತಲುಪಲಿದ್ದು, ಅಲ್ಲಿಂದ ರಾತ್ರಿ 21ರಂದು ರಾತ್ರಿ ಹರಿದ್ವಾರ ತಲುಪಿ ವಾಸ್ತವ್ಯ ಹೂಡಲಿದ್ದಾರೆ. 22ರಂದು ಗಂಗಾ ಸ್ನಾನದೊಂದಿಗೆ ಮಾನಸ ದೇವಿ ಮಂದಿರಕ್ಕೆ ಭೇಟಿ ನೀಡಿ, ಸಂಜೆ ಆರತಿ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ.  

ರಾತ್ರಿ ಹರಿದ್ವಾರದಿಂದ ಹೊರಟು 23ರಂದು ಮುಂಜಾನೆ ದೆಹಲಿ ತಲುಪಿ ನಗರ ವೀಕ್ಷಣೆ ನಂತರ ರಾತ್ರಿ ವಾಸ್ತವ್ಯ ಹೂಡಲಿದ್ದು, 24ರಂದು ಮುಂಜಾನೆ ಹೊರಟು ಮಥುರೆಯ ಶ್ರೀಕೃಷ್ಣ ಜನ್ಮ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಧ್ಯಾಹ್ನ ವಾಪಸ್‌ ಹೊರಟು 26ರ ರಾತ್ರಿ ಮದುರೈ ರೈಲು ನಿಲ್ದಾಣ ತಲುಪಲಿದ್ದಾರೆ ಎಂದು ಅವರು ವಿವರಿಸಿದರು.  ಪತ್ರಿಕಾಗೋಷ್ಠಿಯಲ್ಲಿಟೂರಿಸಂ ವ್ಯವಸ್ಥಾಪಕ ಕಿಶೋರ್‌ ಸತ್ಯ, ಇಮ್ರಾನ್‌ ಇತರರು ಉಪಸ್ಥಿತರಿದ್ದರು.

ಮಾಹಿತಿ: ಕುಂಭಮೇಳ ಯಾತ್ರೆ ಸಂಬಂಧ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2426001,ಮೊಬೈಲ್‌ ಸಂಖ್ಯೆ 9741421486, 080-22960014, ಮೊ.9686575203 ಸಂಪರ್ಕಿಸಬಹುದು. 

ವಿದೇಶ ಪ್ರವಾಸಕ್ಕೆ ಪ್ಯಾಕೇಜ್‌: ದೇಶಿಯವಾಗಿ ರೈಲು ಹಾಗೂ ರಸ್ತೆ ಮಾರ್ಗದ ಪ್ರವಾಸದ ಜೊತೆಗೆ ಐಆರ್‌ಸಿಟಿಸಿವತಿಯಿಂದ ಅಂತಾರಾಷ್ಟ್ರೀಯ ಏರ್‌ ಪ್ಯಾಕೇಜ್‌ನಡಿ ಜನವರಿ 22 ರಿಂದ 27ರವರೆಗೆ ಥೈಲ್ಯಾಂಡ್‌, ಬ್ಯಾಂಕಾಕ್‌, ಪಟ್ಟಾಯ ಪ್ರವಾಸ ಆಯೋಜಿಸಿದ್ದು, ಪ್ರತಿ ವ್ಯಕ್ತಿಗೆ 44,910 ರೂ. ನಿಗದಿಪಡಿಸಲಾಗಿದೆ. ಫೆ.2ರಿಂದ 6ರವರೆಗೆ ದುಬೈ ಮತ್ತು ಅಬುಧಾಬಿ ಪ್ರವಾಸ ಆಯೋಜಿಸಿದ್ದು, ಪ್ರತಿ ವ್ಯಕ್ತಿಗೆ 55,950 ರೂ. ನಿಗದಿಪಡಿಸಲಾಗಿದೆ ಎಂದು ಐಆರ್‌ಸಿಟಿಸಿ ಪ್ರಾದೇಶಿಕ ಅಧಿಕಾರಿ ಡಿ.ಶಿವಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.