ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸಿದರೆ ಬದುಕಿನಲ್ಲಿ ನೆಮ್ಮದಿಯಿಲ್ಲ: ಪ್ರಹ್ಲಾದ್ ಜೋಷಿ


Team Udayavani, May 30, 2022, 3:14 PM IST

Untitled-1

ಮೈಸೂರು: ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಸರಿಸಿದರೆ ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80ನೇ ಜನ್ಮದಿನೋತ್ಸವದ ಪ್ರಯುಕ್ತ ಸೋಮವಾರ ಚೈತನ್ಯಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳಿಗೆ ಶುಭ ಕಾಮನೆ ಸಲ್ಲಿಸಿ ಅವರು ಮಾತನಾಡಿದರು.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮದೇಶದಲ್ಲಿ ಇಂದಿನ ಕ್ಷೋಭೆಯ ದಿನಮಾನದಲ್ಲೂ ನಾವೆಲ್ಲ ನೆಮ್ಮದಿ,ಶಾಂತಿಯಿಂದ ಇದ್ದೇವೆ ಇದಕ್ಕೆ ನಮ್ಮಲ್ಲಿರುವ ಧಾರ್ಮಿಕ ಸಂಸ್ಕೃತಿಯೇ ಕಾರಣ ಎಂದು ಹೇಳಿದರು.

ಶ್ರೀ ಗಣಪತಿ ‌ಸಚ್ಚಿದಾನಂದ ಸ್ವಾಮೀಜಿಯವರು ಹನುಮಾನ್ ಚಾಲೀಸ ಹಾಗೂ ದತ್ತನ ಆರಾಧನೆಯಿಂದ ಜನರಿಗೆ ಮಾನಸಿಕ ನೆಮ್ಮದಿ ಸಿಗುವಂತೆ ಮಾಡಿದ್ದಾರೆ, ಲಕ್ಷಾಂತರ ಜನರು ಶ್ರೀಗಳನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದರು.

ಶ್ರೀಗಳು ಸಾವಿರಾರು ಗಿಡಮರಗಳನ್ನು ಬೆಳೆಸಿದ್ದಾರೆ ಇದರ ಜತೆಗೆ‌ ನೂರಾರು ಗಿಳಿಗಳನ್ನು ಸಂರಕ್ಷಿಸುತ್ತಾ ಒಂದು ರೀತಿ ಪರಿಸರ ಸಮತೋಲನ ಕಾಪಾಡುತ್ತಿದ್ದಾರೆ ಎಂದು ಜೋಷಿ ಬಣ್ಣಿಸಿದರು.

ಭಕ್ತಿ ವ್ಯಾಪಾರದ ಸರಕಲ್ಲ ಎಂಬುದನ್ನು ತಿಳಿಸಿಕೊಟ್ಟು ಭಕ್ತಿಯನ್ನು ಜಾಗೃತಿ ಗೊಳಿಸುವ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ.ಅವರು ಆಧ್ಯಾತ್ಮ,ಧಾರ್ಮಿಕ ಜೀವನವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಇಂತಹ ಶ್ರೀಗಳು ಇರುವುದರಿಂದಾಗಿ ನಾವೆಲ್ಲ ‌ಮಾನಸಿಕ ನೆಮ್ಮದಿ ಪಡೆದಿದ್ದೇವೆ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ಶ್ರೀಗಳಿಗೆ ಶುಭಾಶಯ ಸಲ್ಲಿಸಿ ಕೊರೊನ ಸಂಕಷ್ಟದ ದಿನಗಳಲ್ಲಿ ಸ್ವಾಮೀಜಿಯವರು ಪ್ರತಿದಿನ ಹತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ‌ ವ್ಯವಸ್ಥೆ ಮಾಡಿಕೊಟ್ಟು‌‌ ನಮಗೆ ಬಹಳವಾಗಿ‌ ನೆರವಾದರು ಎಂದು ಸ್ಮರಿಸಿದರು.

ಕೊರೊನ ಕಾಲದಲ್ಲಿ ಯಾರು ಯಾರನ್ನೂ ಭೇಟಿಯಾಗಲಾರದ ಸಂದರ್ಭದಲ್ಲಿ ಸ್ವತಹಾ ಶ್ರೀಗಳು ತಮ್ಮ ಭೇಟಿಗೆ‌ ಅವಕಾಶ ಕೊಟ್ಟು ಜನರ ಜೀವರಕ್ಷಣೆ ಮಾಡಿದರು ಎಂದು ಬಣ್ಣಿಸಿದರು.

ಯೋಗದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಗೆ ಬರಲು ಒಪ್ಪಿಗೆ ನೀಡುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ‌ ಜೋಷಿ ಅವರು ಪ್ರಮುಖ ಕಾರಣ ಎಂದು ಪ್ರತಾಪ್ ಸಿಂಹ ನುಡಿದರು.

ಈ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ  ಶ್ರೀಚಕ್ರಪೂಜೆ , ನಾರಾಯಣ ಹೋಮ ನೆರವೇರಿಸಲಾಯಿತು.

ಮುಖ್ಯಅತಿಥಿ  ಆಗಮಿಸಿದ್ದ  ‌ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದೀಬೇನ್ ಪಟೇಲ್ ಅವರು ಚೈತನ್ಯಾರ್ಚನೆ  ಕಾರ್ಯಕ್ರಮದಲ್ಲಿ ಅವಧೂತ ದತ್ತ ಪೀಠದ ನಾದನಿಧಿ ಪ್ರಶಸ್ತಿಯನ್ನು ಗಣಪತಿ ಶ್ರೀಗಳೊಂದಿಗೆ   ಕರ್ನಾಟಕ ಸಂಗೀತ ವಿದ್ವಾನರುಗಳಾದ  ಬೆಂಗಳೂರಿನ ಡಾ || ಟಿ.ಎಸ್.ಸತ್ಯವತಿ,   ಚೆನ್ನೈನ ವಿ II ರಾಜ್‌ ಕುಮಾರ್‌ ಭಾರತಿ ,ಪಿಟೀಲು ವಿದ್ವಾನರುಗಳಾದ ಮೈಸೂರು ಬ್ರದರ್ಸ್ ಎಂದೇ ಖ್ಯಾತರಾದ ಮೈಸೂರು ಎಂ.ನಾಗರಾಜು  ಮೈಸೂರು ಎಂ.ಮಂಜುನಾಥ್ , ಚಿತ್ರ ವೀಣೆ ಪ್ರವೀಣರಾದ

ಚೆನ್ನೈ ನ ವಿ.ಎನ್.ರವಿಕಿರಣ್‌  ಅವರುಗಳಿಗೆ‌ ನೀಡಿ ಗೌರವಿಸಿದರು.

ಇದೇ ವೇಳೆ ವಿದ್ಯಾನಿಧಿ ಪ್ರಶಸ್ತಿಯನ್ನು ಸಂಸ್ಕೃತ ವಿದ್ವಾನ್ ಕೇಂದ್ರೀಯ ಸಂಸ್ಕೃತ ವಿವಿ ಉಪಕುಲಪತಿ ಶ್ರೀನಿವಾಸ ವರಖೇಡಿ ಅವರಿಗೆ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.