ಕೆಂಡಗಣ್ಣೇಶ್ವರಸ್ವಾಮಿ ಮತ್ತು ಮಹದೇಶ್ವರರರಿಗೆ ಉಘೇ..ಉಘೇ..


Team Udayavani, Mar 13, 2022, 7:07 PM IST

Untitled-1

ಹುಣಸೂರು:  ಮೈಸೂರು ಮಹರಾಜರ ಮನೆತನದ ಆರಾಧ್ಯಧೈವ ಹುಣಸೂರು ತಾಲೂಕಿನ ತಾಲೂಕಿನ ಬಿಳಿಕೆರೆ ಹೋಬಳಿಯ ಶ್ರೀಕ್ಷೇತ್ರ ಗದ್ದಿಗೆಯಲ್ಲಿ ಶ್ರೀ ಕೆಂಡಗಣ್ಣೇಶ್ವರ ಹಾಗೂ ಮಹದೇಶ್ವರ ವೈಭವದ ಜೋಡಿ ರಥೋತ್ಸವ ಹಾಗೂ ಕೊಂಡೋತ್ಸವವು ಸಾವಿರಾರು ಭಕ್ತರ ಉಧ್ಘೋಷಗಳ ನಡುವೆ ಭಾನುವಾರ ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ 11.30ಕ್ಕೆ ಮಾದಳ್ಳಿ ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ, ದಿವ್ಯಸಾನಿದ್ಯದಲ್ಲಿ ರಥಕ್ಕೆ ಪೂಜೆಸಲ್ಲಿಸಿ ಚಾಲನೆ ನೀಡಿದ ನಂತರ ಅಲಂಕೃತ ದೊಡ್ಡರಥದಲ್ಲಿ ಶ್ರೀ ಕೇಂಡಗಣ್ಣೇಶ್ವ ರಸ್ವಾಮಿ ಹಾಗೂ ಚಿಕ್ಕರಥದಲ್ಲಿ ಮಹದೇಶ್ವರ ಸ್ವಾಮಿ ದೇವರ ಉತ್ಸವ ಮೂರ್ತಿಗಳನ್ನಿಟ್ಟು  ಕುಟ್ಟವಾಡಿ ಗೇಟ್‌ವರೆಗೆ ನೆರೆದಿದ್ದ ಸಾವಿರಾರು ಮಂದಿ ಭಕ್ತರು ಜೈಕಾರ ಹಾಕುತ್ತಾ ಒಂದರ ಹಿಂದೊಂದು ರಥವನ್ನೆಳೆದು ಪುನಿತರಾದರು. ಮತ್ತೆ ಸ್ವಸ್ಥಾನಕ್ಕೆ ರಥಗಳನ್ನು ತಂದು ನಿಲ್ಲಿಸಿದರು. ನವ ದಂಪತಿಗಳು, ಭಕ್ತರು ಹಣ್ಣು-ಜವನ ಎಸೆದು ಪುನಿತರಾದರೆ, ಹರಕೆ ಹೊತ್ತ ಭಕ್ತರು ಈಡುಗಾಯಿ ಒಡೆದು ಭಕ್ತಿ ಭಾವ ಮೆರೆದರು

ಶನಿವಾರ ರಾತ್ರಿ ದೇವರಿಗೆ ಹಾಲರವಿ ಸೇವೆ, ಭಾನುವಾರ ಮುಂಜಾನೆಯಿAದಲೇ ದೇವರಿಗೆ ಅಭಿಷೇಕ ಹಾಗೂ ಪ್ರಾರಂಭವಾದ ಜಾತ್ರಾ ಮಹೋತ್ಸವ ಅಂಗವಾಗಿ ದೇವರಿಗೆ ವಿವಿಧ ವಿಶೇಷ ಪೂಜಾ ಕೈಕರ್ಯಗಳನ್ನು ನೆರವೇರಿಸಿದರು.

ಕೊಂಡೋತ್ಸವ:ರಥೋತ್ಸವಕ್ಕೂ ಮುನ್ನ ಮುಂಜಾನೆ ದೇವಸ್ಥಾನದ ಆವರಣದಲ್ಲಿನ ಲಕ್ಷಣತೀರ್ಥ ನದಿ ದಂಡೆಯಲ್ಲಿ  ನಡೆದ ಕೊಂಡೊತ್ಸವಕ್ಕೆ ಮಾದಳ್ಳಿ ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ ಚಾಲನೆ ನೀಡಿದರು.   ನೆರೆದಿದ್ದ ಭಕ್ತರು  ಕೆಂಡಗಣ್ಣೇಶ್ವರ ಸ್ವಾಮಿ ಮತ್ತು ಮಹದೇಶ್ವರ ಸ್ವಾಮಿಗೆ ಉಘೇ..ಉಘೇ.. ಎಂದು ಜಯಘೋಷಗಳ ನಡುವೆ ದೇವಾಲಯದ ಅರ್ಚಕ ಮಹದೇವಸ್ವಾಮಿರವರ ಪುತ್ರ ಮಹೇಶ್ ಕೊಂಡಹಾಯ್ದರು. ನಂತರ ಭಕ್ತರು ಅರಳು, ವಿವಿಧ ಧಾನ್ಯಗಳು, ಉಪ್ಪು, ಗಂಧದಕಡ್ಡಿ, ಕರ್ಪೂರವನ್ನು ಕೊಂಡಕ್ಕೆ ಸಮರ್ಪಿಸಿದರು. ಹರಕೆ ಹೊತ್ತವರು ಜಾನುವಾರುಗಳನ್ನು ಕೊಂಡದ ಸುತ್ತ ಪ್ರದಕ್ಷಿಣೆ ಹಾಕಿಸಿ ಹರಕೆ ತೀರಿಸಿದರು. ಭಕ್ತರಿಗೆ ಅನ್ನದಾಸೋಹ ಏರ್ಪಡಿಸಿದ್ದರು.

ಇಡೀ ಜಾತ್ರೆಗೆ ಸಿಹಿತಿಂಡಿ ಅಂಗಡಿ, ಐಸ್‌ಕ್ರೀಮ್, ಮಹಿಳೆಯರ ಸೌಂದರ್ಯ ಸಾಧನ ಅಂಗಡಿ ಗಮನ ಸೆಳೆಯಿತು.

ಬಸವಾಪಟ್ಟಣದ ತೊಟ್ಟಿಮನೆ ಸಹೋದರರ ಕುಟುಂಬ ವರ್ಗ, ರಿಸೀವರ್‌ಗಳಾದ ಪುಣ್ಯಶೀಲ, ಮಹದೇವಪ್ಪ ಹಾಗೂ ಯಾಜಮಾನರಾದ ಶಿವಲಿಂಗೇಗೌಡ, ಕುಟ್ಟವಾಡಿ ನಾಗಣ್ಣೆಗೌಡ, ಬಸವನಹಳ್ಳಿ ಪುಟ್ಟೆಗೌಡ, ಗ್ರಾ.ಪಂ.ಸದಸ್ಯ ವೆಂಕಟೇಶ್, ಪ್ರಕಾಶ್, ತಾ.ಪಂ.ಮಾ.ಸದಸ್ಯ ಗದ್ದಿಗೆದೇವರಾಜ್ ಸೇರಿದಂತೆ ಐದು ಸಾವಿರಕ್ಕೂ ಹೆಚ್ಚು ಮಂದಿ ಭಕ್ತರು ಸಂಭ್ರಮ-ಭಕ್ತಿಭಾವದಿಂದ ಭಾಗವಹಿಸಿದ್ದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.