ಲಕ್ಷ ಲಕ್ಷ ಭಕ್ತರ ಸಮ್ಮುಖ ಶ್ರೀಕಂಠೇಶ್ವರ ರಥೋತ್ಸವ


Team Udayavani, Mar 20, 2019, 7:23 AM IST

m4-laksha.jpg

ನಂಜನಗೂಡು: ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿ, ವೈಭವಯುತವಾಗಿ ಜರುಗಿತು. 

ಚೈತ್ರ ಮಾಸ ಮಂಗಳವಾರ ಬೆಳಗ್ಗೆ ಮೀನ ಲಗ್ನದಲ್ಲಿ ನಂಜುಂಡೇಶ್ವರನನ್ನು ಲಲಿತಾ ಚಂದ್ರಶೇಖರ ನಾಮಧೇಯದೊಂದಿಗೆ ರಥಾರೂಢನಾಗಿಸಿದ ಭಕ್ತರು 110 ಟನ್‌ ಭಾರದ 76 ಅಡಿ ಎತ್ತರದ ಭವ್ಯ ರಥವನ್ನು ಸಾವಧಾನವಾಗಿ ಎಳೆದು ರಥದಲ್ಲಿ ಪವಡಿಸಿದ ಭವರೋಗ ವೈದ್ಯನಿಗೆ ಹಣ್ಣು-ಜವನ ಎಸೆದು ಭಕ್ತಿ ಮೆರೆದರು.

ಚತುರ್ಮುಖ ಬ್ರಹ್ಮನನ್ನೇ ಸಾರಥಿಯನ್ನಾಗಿಸಿದ ರಥದ ಹಗ್ಗ ಹಿಡಿದು ಜಯಘೋಷದ ನಡುವೆ ಎಳೆದಾಗ ಆರಾಧ್ಯ ದೈವ ರಚ್ಚೆ ಹಿಡಿದಂತಾಗಿ ರಥ ಎಷ್ಟು ಎಳೆದರೂ ಮುಂದೆ ಸಾಗದೆ ಭಕ್ತರೆಲ್ಲ ಚಿಂತಾಕ್ತಾಂತರಾಗಿದ್ದರು.

ತುಂಡಾದ ಹಗ್ಗ: ಶ್ರೀಕಂಠಪ್ಪ ಪವಡಿಸಿದ ರಥವನ್ನು ಭಕ್ತರು ರಭಸದಿಂದ ಎಳೆದಾಗ ತೇರಿಗೆ ಕಟ್ಟದ ಭಾರಿ ಗಾತ್ರದ ಹಗ್ಗವೇ ತುಂಡಾಗಿ ಎಳೆಯುತ್ತಿದ್ದ ಭಕ್ತರು ಒಬ್ಬರ ಮೇಲೊಬ್ಬರು ಉರುಳಿ ಬಿದ್ದರು.

ರಥ ಏನಾಯಿತು ಎಂದು ನೋಡಿದವರಿಗೆ ಹಗ್ಗ ತುಂಡಾಗಿರುವುದು ಗೊತ್ತಾಗಿ ನಕ್ಕು ಸಂಭ್ರಮಿಸಿದರು. ದೇವಾಲಯದ ಅರ್ಚಕವೈಂದವರಲ್ಲೊಬ್ಬರಾದ ಮಂಜು ಹಾಗೂ ದೇವಾಲಯದ ಅಧಿಕಾರಿ ಗಂಗಯ್ಯ ಅವರಿಗೆ ತುಂಡಾದ ಹಗ್ಗವೇ ಮುಖಕ್ಕೆ ಹೊಡೆದು ಗಾಯಗೊಂಡರು.

2 ಗಂಟೆಗಳ ಕಾಲ ರಥ ಸ್ತಬ್ಧ: ಹಗ್ಗ ತುಂಡಾದಾಗ ಹೊಸ ಹಗ್ಗ ಕಟ್ಟಲು ಶ್ರಮ ಪಡಬೇಕಾಯಿತು. ಅಂತು ಹಗ್ಗ ಕಟ್ಟಿ ಎಳೆದಾಗ ಅದೂ ತುಂಡಾಯಿತು. ಹಗ್ಗ ಕಟ್ಟುವುದು ಅದು ತುಂಡಾಗುವುದು ಪದೇ ಪದೆ ನಡೆದು ಇತ್ತು ಏಳು ಗಂಟೆಗೆರಥ ಏರಿದ ಶ್ರೀಕಂಠೇಶ್ವರ ಕೊನೆಗೆ ಅಲ್ಲಿಂದ ಚಲಿಸಿದ್ದು 9.45 ಕ್ಕೆ ನಂತರ ದೇವಾಲಯದ ಬಲಭಾಗಕ್ಕೆ ಬಂದ ರಥ ಮತ್ತೆ ಮೊಂಡಾಟ ನಡೆಸಿ ಮುಂದೆ ಸಾಗಿ  11.5 ಕ್ಕೆ ಸರಿಯಾಗಿ ದೇವಾಲಯದ ಎಡಭಾಗದ ಸ್ವಸ್ಥಾನ ಸೇರಿತು.

ಬೆಳಗ್ಗೆ 6.45 ಗಂಟೆಗೆ ಆಗಮಿಕ ನಾಗಚಂದ್ರ ದೀಕ್ಷಿತರು ಸ್ಥಳ ಪುರೋಹಿತ ಸಪ್ತರ್ಷಿ ಜೋಯಿಸರ ನೇತೃತ್ವದಲ್ಲಿ ನಡೆದ ವೇದಘೋಷ ಹಾಗೂ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ರಥಾರೂಢನಾಗಿರುವ ಶ್ರೀಕಂಠೇಶ್ವರನ ಗೌತಮ ರಥಕ್ಕೆ  ಉಪವಿಭಾಗಾಧಿಕಾರಿ ಶಿವೇಗೌಡ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕುಮಾರಸ್ವಾಮಿ ಹಾಗೂ ಗಂಗಯ್ಯನವರ ನೇತೃತ್ವದಲ್ಲಿ  ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಈ ಬಾರಿ ಅರವಟ್ಟಿಗೆ ಹಾಗೂ ಪ್ರಸಾದ ವಿತರಣೆಗೆ ಜಿಲ್ಲಾಡಳಿತ ಸಾಕಷ್ಟು ನಿಬಂಧನೆಗಳನ್ನು ವಿಧಿಸಿದ್ದರೂ ಭಕ್ತರು ಅದನ್ನು ಗಣನೆಗೆ ತೆಗೆದುಕೊಳ್ಳದೇ ಮಾರು ಮಾರಿಗೆ ನೀರು, ಮಜ್ಜಿಗೆ, ಉಪಾಹಾರ, ಹಣ್ಣು ಹಂಪಲುಗಳ ಸಮೇತ  ಪ್ರಸಾದ ವಿತರಿಸಿದರು.

ಜೆಸಿಬಿ, ಕ್ರೇನ್‌ ನೆರವು: ರಥ ಮೇಲೇಳದೆ ಮೊಡಾಟ ಮಾಡಿದಾಗ ಗೌತುಮ ರಥವನ್ನು ಮೇಲೆತ್ತಲು ಜೆಸಿಬಿ ಹಾಗೂ ಕ್ರೇನ್‌ ಬಳಸಿದಾಗ ರಥ ಮೇಲೇಳುವ ಬದಲು ರಥದ ಒಂದು ಭಾಗಗಕ್ಕೆ ಜೆಸಿಬಿ ಯಿಂದ ಸ್ವಲ್ಪ ಹಾನಿಯೂ ಆದ ಘಟನೆಯೂ ನಡೆಯಿತು. ಬಿಸಿಲೇರುವ ಮೊದಲೇ ಗಣಪತಿ ರಥ ಹೊರಟು ಕೆಲವೇ ನಿಮಷಗಳಲ್ಲಿ ಸ್ವಸ್ಥಾನಕ್ಕೆ ಬಂದರೂ ಅಪ್ಪ ನಂಜುಂಡಪ್ಪ‌ ಮಾತ್ರ ಸ್ಥಳ ಕದಲಲೇ ಇತರಲಿಲ್ಲ.

ಕಡೆಗೂ ಗೌತಮ ರಥದ ಚಲನೆ ಆರಂಭಗೊಂಡ ನಂತರ ಒಂದೊಂದಗಾಗಿ ಚಂಡಿಕೇಶ್ವರ, ಷಣ್ಮುಖ, ಪಾರ್ವತಿಯರು ಪವಡಿಸಿದ ಐದೂ ರಥಗಳನ್ನು ಲಕ್ಷಕ್ಕೂ ಹೆಚ್ಚು ಭಕ್ತರ ಸಮ್ಮುಖದಲ್ಲಿ  ಎಳೆದ ಭಕ್ತರು ಪುನೀತರಾದರು. ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌, ಡಿವೈಎಸ್ಪಿ ಜಯವಂತ , ಎಸ್‌ಐಗಳಾದ ಆನಂದ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್ ಆಯೋಜಿಸಲಾಗಿತ್ತು.

ಸಂಘಟನೆಗಳಿಂದ ಪ್ರಸಾದ ವ್ಯವಸ್ಥೆ: ಶ್ರೀಕಂಠೇಶ್ವರ ಸೇವಾ ಸಂಘ ಬೆಂಗಳೂರು, ನಂಜುಂಡೇಶ್ವರ ಸೇವಾ ಸಂಘ ದೊಡ್ಡಬಳ್ಳಾಪುರ, ಓಂ ಯುವಕರ ಸಂಘ ಬೆಂಗಳೂರು,  ಶ್ರೀಕಂಠೇಶ್ವರ ಟೀವಿ  ಸೆಂಟರ್‌ ನಂಜನಗೂಡು. ನೇಸ್ಲೆ ಗೆಳಯರ ಬಳಗ , ನಂಜನಗೂಡು, ಗ್ರಾಮಲೆಕ್ಕಾಧಿಕಾರಿಗಳ ಸಂಘ, ಬ್ರಾಹ್ಮಣ ಯುವಕರ ಸಂಘ, ವೀರಶೈವ ಯುವಕರ ಸಂಘ, ಆರ್ಯವೈಶ್ಯ ಯುವಕರ ಸಂಘ, ಜೈನ ಸಂಘ ಸೇರಿದಂತೆ ನೂರಾರು ಸಂಘ ಸಂಸ್ಥೆಗಳು ಜಾತ್ರೆಗೆ ಆಗಮಿಸಿದ ಭಕ್ತಾದಿಗಳಿಗೆ ಪುಳಿಯೋಗರೆ, ಚಿತ್ರಾನ್ನ, ಮೊಸರನ್ನದ ಪ್ರಸಾದ ವಿತರಿಸಿದರು.

ಬೆಂಗಳೂರಿನ ರಾಂಕುಮಾರ ಎಂಬುವವರು 25 ಲೀಟರ್‌ನ 2.500 ಕ್ಯಾನ್‌ ಶುದ್ಧ ಕುಡಿಯುವ ನೀರನ್ನು  ವಿತರಿಸಿದರೆ, ಬೆಂಗಳೂರಿನ ಶ್ರೀಕಂಠೇಶ್ವರ ಸೇವಾ ಸಂಸ್ಥೆಯವರು ಶುದ್ಧ ತುಪ್ಪದಿಂದ ತಯಾರಿಸಲಾದ ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಭಕ್ತರಿಗೆ ನೀಡಿದರು. ಬೆಂಗಳೂರಿನ ಅಣಂತಸ್ವಾಮಿ ಅವರು ಶ್ರೀಕಂಠೇಶ್ವರನ ರಥದ ಹೂವಿನ ಪೂರ್ಣ ಅಂಲಕಾರದ ಸೇವೆ ಸಲ್ಲಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.