“ಶ್ರೀನಿವಾಸ ಪ್ರಸಾದರನ್ನು ಸೋಲಿಸುವುದೇ ನಮ್ಮೆಲ್ಲರ ಗುರಿ’


Team Udayavani, Feb 13, 2017, 12:47 PM IST

mys3.jpg

ನಂಜನಗೂಡು: ಮಾಜಿ ಸಚಿವ ವಿ. ಶ್ರೀನಿವಾಸ್‌ ಪ್ರಸಾದರನ್ನು ಸೋಲಿಸುವುದೇ ನಮ್ಮೆಲ್ಲರ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಭಾನುವಾರ ಗುಂಡ್ಲುಪೇಟೆಗೆ ತೆರಳಬೇಕಾಗಿದ್ದ ಮುಖ್ಯಮಂತ್ರಿಗಳು ನಗರದ ವಿಶ್ವಕರ್ಮ ಸಂಘದ ಜಿಲ್ಲಾಧ್ಯಕ್ಷ, ಗುತ್ತಿಗೆದಾರ ನಂದಕುಮಾರ್‌ ಮನೆಗೆ ಭೇಟಿ ನೀಡಿ ಅಲ್ಲಿ ಸೇರಿದ್ದ ಜನತೆಯನ್ನುದ್ದೇಶಿಸಿ ಮಾತನಾಡಿದರು.

ಚುನಾವಣೆ ಬೇಕಾಗಿರಲಿಲ್ಲ. ನಾವೇನು ಶ್ರೀನಿವಾಸ್‌ ಪ್ರಸಾದರನ್ನು ಶಾಸಕತ್ವಕ್ಕೆ ರಾಜೀನಾಮೆ ನೀಡಿ ಎಂದು ಹೇಳಿರಲಿಲ್ಲ. ಪಕ್ಷದಿಂದಲೂ ಹೊರ ಹಾಕಿರಲಿಲ್ಲ ಎಂದ ಮುಖ್ಯಮಂತ್ರಿಗಳು, ಯಾರ ಪಾಲಿಗೂ ಬೇಡವಾದ ಚುನಾವಣೆಯನ್ನು ತಂದಿಟ್ಟವರು ಪ್ರಸಾದ್‌ ಎಂದು ದೂಷಿಸಿದರು.

ಈ ಮಹಾಶಯರನ್ನು ಮಂತ್ರಿ ಮಾಡುವಾಗ ಬಿಜೆಪಿಯವರು ಎಲ್ಲಿದ್ದರು? ಮಾಡಿದ್ದೂ ನಾವೇ ಕೈ ಬಿಟ್ಟಿದ್ದೂ ನಾವೇ. ಆದರೆ ಇವರು ಶಾಸಕತ್ವ ಹಾಗೂ ಪಕ್ಷಕ್ಕೆ ರಾಜೀನಾಮೆ ಇತ್ತು ಈಗ ಬಿಜೆಪಿ ಸೇರಿದ್ದಾರೆ ಎಂದು ಕಿಡಿಕಾರಿದರು. ಹಾಗಂತ ಯಾರೂ ಅವರನ್ನು ಬಯ್ಯಬೇಡಿ. ಅವರ ಆರೋಪಗಳಿಗೆಲ್ಲ ಅವರನ್ನು ಸೋಲಿಸುವುದರ ಮುಖಾಂತರವೇ ಉತ್ತರ ನೀಡೋಣ. ಅದೇ ಈಗ ತನ್ನ ಹಾಗೂ ನಿಮ್ಮೆಲ್ಲರ ಗುರಿಯಾಗಬೇಕಿದೆ ಎಂದರು.

ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಘೋಷಣೆ ಯಾವುದೇ ಕ್ಷಣದಲ್ಲಿ ಹೊರಬೀಳ ಬಹುದು. ನಾವೀಗ ಇಲ್ಲಿನ ಸ್ಥಾನಗಳನ್ನು ಉಳಿಸಿಕೊಳ್ಳಬೇಕು. ಅದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಂತು ಕೆಲಸ ಮಾಡಬೇಕಿದೆ. ಈ ವಿಷಯದಲ್ಲಿ ಅಪಸ್ವರ ಬೇಡ ಎಂದು ಹೇಳಿದರು.

ಸರ್ಕಾರವೇ ಇಲ್ಲಿ ಠಿಕ್ಕಾಣಿ: ಚುನಾವಣೆ ಘೋಷಣೆಯಾದ ನಂತರ ತಾನು, ತನ್ನ ಸಚಿವರು, ಪಕ್ಷದ ರಾಜಾÂಧ್ಯಕ್ಷರು, ಕಾರ್ಯಾಧ್ಯಕ್ಷರು, ಪದಾಧಿಕಾರಿಗಳೆಲ್ಲ ವಾರಗಟ್ಟಲೇ ಇಲ್ಲೇ ಠಿಕ್ಕಾಣಿ ಹೂಡಿ ರಣ ಕಹಳೆ ಮೊಳಗಿಸುತ್ತೇವೆ. ಇದೇನು ಪ್ರತಿಷ್ಠಿತ ಚುನಾವಣೆ ಆಗಿರಲಿಲ್ಲ. ಆದರೆ ಆ ಮಹಾಶಯ ಬಿಜೆಪಿ ಸೇರಿ ಇದನ್ನು ಪ್ರತಿಷ್ಠೆಯ ಚುನಾವಣೆಯಾಗಿಸಿದ್ದಾರೆ. ಇಷ್ಟೆಲ್ಲಾ ರದ್ಧಾಂತಕ್ಕೆ ಕಾರಣರಾದ ಪ್ರಸಾದರನ್ನು ಸೋಲಿಸದೇ ಇರಲಾಗುತ್ತಾ? ನೋಡಿಯೇ ಬಿಡೋಣ.

ಉಪ ಚುನಾವಣೆ ತಂದಿಕ್ಕಿದ ಅವರಿಗೊಂದು ಸೋಲುಣಿಸಿ ಉತ್ತರ ನೀಡಿಯೇ ವಿರಮಿಸೋಣ ಎಂದು ಅವರು ನೆರದಿದ್ದ ಕಾರ್ಯಕರ್ತರಿಗೆ ಕರೆ ನೀಡಿದರು. ನಂದಕುಮಾರ ತನ್ನ ಹಳೆಯ ಸ್ನೇಹಿತ. ಹಾಗಾಗಿ ಇಲ್ಲಿಗೆ ಬಂದಿದ್ದೇನೆ. ಸದ್ಯದಲ್ಲೇ ಈತನಿಗೊಂದು ಅಧಿಕಾರ ಸ್ಥಾನ ನೀಡಲಾಗುತ್ತದೆ ಎಂದು ಘೋಷಿಸಿದ ಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹಾಗೂ ಶಾಸಕ ವೆಂಕಟೇಶರೊಂದಿಗೆ ಗುಂಡ್ಲುಪೇಟೆಯತ್ತ ತೆರಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.