ಮಾನ ಮರ್ಯಾದೆ ಇದ್ದರೆ ರಾಮುಲು ರಾಜಿನಾಮೆ ನೀಡಬೇಕು: ಸಿದ್ದರಾಮಯ್ಯ
Team Udayavani, Nov 19, 2019, 10:27 AM IST
ಮೈಸೂರು: ಸಚಿವ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಸವಾಲು ಹಾಕಿದ ವಿಚಾರಕ್ಕೆ ಇಂದು ಉತ್ತರಿಸಿದ ಸಿದ್ದರಾಮಯ್ಯ, ಸ್ವಾರ್ಥಕ್ಕೆ ಮಾತನಾಡುವವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಪಾಪ ಅವರು ನನ್ನ ಮೇಲೆ ಸೋತಿದ್ದಾರೇ ಅದಕ್ಕೆ ಈ ರೀತಿ ಮಾತನಾಡುತ್ತಾರೆ. ಶ್ರಿರಾಮುಲು ಹತಾಶರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಮುಲು ಅವರಿಗೆ ಮಾನ ಮರ್ಯಾದೆ ಇದ್ದರೆ ಆಗಲೇ ರಾಜೀನಾಮೆ ಕೊಡಬೇಕಿತ್ತು. ಡಿಸಿಎಂ ಮಾಡುತ್ತೇವೆ ಅಂತಾ ಪ್ರಚಾರ ಮಾಡಿದರು ಕೊಟ್ಟರಾ? ಎಂ.ಎಲ್.ಎ ಅಲ್ಲದವರಿಗೆ ಡಿಸಿಎಂ ಕೊಟ್ಟಿದ್ದಾರೆ. ಎಸ್.ಟಿ ಗೆ 7% ಮೀಸಲಾತಿ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಅಂದಿದ್ದರು. ಒಂದು ನಿಮಿಷ ಇರಲ್ಲ ಅಂದರು. ಏನಾಯ್ತು? ಎಂದು ಪ್ರಶ್ನಿಸಿದರು.
‘’ಪಾಪ ಶ್ರೀರಾಮುಲು ಬಗ್ಗೆ ಏನು ಮಾತನಾಡೋದು. ಸ್ವಾರ್ಥ ಮಾಡುವವರೆಲ್ಲಾ ಒಂದು ಕಡೆ ಸೇರಿಕೊಂಡಿದ್ದಾರೆ. ಮೌಲ್ಯ ಸಿದ್ದಾಂತ ಏನೂ ಇಲ್ಲ. ಇವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ’’ ಎಂದರು.
ಬಿಜೆಪಿ-ಜೆಡಿಎಸ್ನಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಮಾಡಿದ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ಪರ ಜನ ಇಲ್ಲ. ಹೀಗಾಗಿ ದುಡ್ಡಿನ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ. 30 ಸಾವಿರ ಸೀರೆ ಸಿಕ್ಕಿದ್ದು ಯಾರದು ?
ಅದು ಯಾರ ದುಡ್ಡು, ಎಲ್ಲಿಂದ ಬಂತು ? ಇದು ಅಕ್ರಮ ಅಲ್ವಾ? ಕಾನೂನಿನಲ್ಲಿ ಸೀರೆ ಹಂಚುವುದಕ್ಕೆ ಅವಕಾಶ ಇದೆಯಾ, ಸರ್ಕಾರದಲ್ಲಿ ಇದ್ದುಕೊಂಡು ಅಕ್ರಮ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ