ಅಗ್ಗದ ದರದ ಮೆಮು ರೈಲು ಸೇವೆಗೆ ಚಾಲನೆ
ರೈಲು ಸಂಚಾರಕ್ಕೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ • ಬೆಂ-ಮೈಸೂರು ಟಿಕೆಟ್ ದರ 30 ರೂ.ನಿಗದಿ • ಪ್ರಯಾಣ ಅವಧಿ 2.40 ಗಂಟೆ
Team Udayavani, Jul 28, 2019, 12:29 PM IST
ಮೈಸೂರು-ಬೆಂಗಳೂರು ನಡುವೆ ವಾರದ ಆರು ದಿನವೂ ಸಂಚರಿಸುವ ಮೆಮು ರೈಲು ಸೇವೆಗೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿದರು.
ಮೈಸೂರು: ಮುಂದಿನ ಒಂದು ವರ್ಷದೊಳಗೆ ದೇಶದ ಐದು ಪ್ರಮುಖ ನಗರಗಳಿಗೆ ನೇರ ರೈಲು ಸಂಪರ್ಕ ಸೇವೆ ಕಲ್ಪಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರ ರೈಲು ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು ನಡುವೆ ವಾರದ ಆರು ದಿನ ಸಂಚರಿಸುವ ಮೆಮು ರೈಲು ಸೇವೆಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.
ಮೈಸೂರಿನಿಂದ ಚೆನ್ನೈಗೆ ಈಗಾಗಲೇ ನೇರ ರೈಲು ಸೇವೆ ಕಲ್ಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಮೈಸೂರು-ಮುಂಬೈ, ಮೈಸೂರು-ಹೈದರಾಬಾದ್, ಮೈಸೂರು-ತಿರುವನಂತಪುರ ನಗರಗಳಿಗೆ ನೇರ ರೈಲು ಸೇವೆ ಒದಗಿಸಲಾಗುವುದು ಎಂದರು.
ಜಾಗದ ಕೊರತೆ: ಮೈಸೂರು ರೈಲು ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಜಾಗದ ಕೊರತೆಯಿಂದ ನಗರ ರೈಲು ನಿಲ್ದಾಣದ ವಿಸ್ತರಣೆ ಸಾಧ್ಯವಾಗದು, ಆದರೆ, ಮೈಸೂರಿನಿಂದ ಬೆಂಗಳೂರಿಗೆ ಹೋಗುವ ರೈಲುಗಳು ಕೆಂಗೇರಿ ತಲುಪಿದ ನಂತರ ಕೆಎಸ್ಆರ್ ಬೆಂಗಳೂರು ನಿಲ್ದಾಣಕ್ಕೆ ತಲುಪಲು ಸಾಕಷ್ಟು ಸಮಯಾವಕಾಶ ತೆಗೆದುಕೊಳ್ಳುತ್ತಿದೆ. ಇಂತಹ ಸಮಸ್ಯೆ ಮೈಸೂರಿನಲ್ಲಿ ಎದುರಾಗದಂತೆ ತಡೆಯಲು ನಾಗನಹಳ್ಳಿಗೆ ಸ್ಯಾಟಲೈಟ್ ರೈಲ್ವೆ ಟರ್ಮಿನಲ್ ಮಂಜೂರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ನಡೆ ಯುತ್ತಿದೆ. ಈ ಯೋಜನೆ ಪೂರ್ಣಗೊಂಡರೆ ರೈಲು ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ರೈಲ್ವೆಯ ಎಲ್ಲಾ ಯೋಜನೆಗಳ ಪ್ರಸ್ತಾವನೆಗಳಿಗೆ ಮಂಜೂರಾತಿ ಪಡೆದುಕೊಂಡು ಕಾಮಗಾರಿ ಪೂರ್ಣಗೊಳಿಸಲಾಗು ವುದು ಎಂದು ಭರವಸೆ ವ್ಯಕ್ತಪಡಿಸಿದರು.
ರೈಲ್ವೆ ಸಂಪರ್ಕ: ನರೇಂದ್ರ ಮೋದಿ ಪ್ರಧಾನಮಂತ್ರಿ ಯಾದ ಮೇಲೆ ರೈಲುಗಳ ಸಂಪರ್ಕ ಹೆಚ್ಚಿದೆ. 2004 ರಿಂದ 2014ರವರೆಗೆ ಮೈಸೂರಿಗೆ ಒಂದೇ ಒಂದು ಹೊಸ ರೈಲು ಸೇರ್ಪಡೆಯಾಗಿರಲಿಲ್ಲ. ಆದರೆ, ಕಳೆದ ಐದು ವರ್ಷಗಳಲ್ಲಿ ಸಾಕಷ್ಟು ಹೊಸ ರೈಲು ಸೇರಿದೆ ಎಂದರು. ಹಿಂದಿನ ಸರ್ಕಾರದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರು ನಮ್ಮ ಸಾಕಷ್ಟು ಪ್ರಸ್ತಾವನೆಗಳಿಗೆ ಒಪ್ಪಿಗೆ ಕೊಟ್ಟು ಮಂಜೂರು ಮಾಡಿ ದ್ದರು. ಈಗ ಕರ್ನಾಟಕದವರೇ ಆದ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರು ಈಗ ಹಲವು ಯೋಜನೆಗಳನ್ನು ಮಂಜೂರು ಮಾಡಿ ಕೊಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ವಿಸ್ತರಣೆ: ಮೈಸೂರು-ಬೆಂಗಳೂರು ನಡುವೆ ಪ್ರಯಾ ಣಿಕರ ಒತ್ತಡ ಹೆಚ್ಚಿದ್ದರೂ ಸಾಕಷ್ಟು ರೈಲುಗಳ ಸೇವೆ ಇರಲಿಲ್ಲ. ಹೀಗಾಗಿ, ಬೆಂಗಳೂರಿನಿಂದ ರಾಮನಗರದ ವರೆಗಿದ್ದ ಮೆಮು ರೈಲನ್ನು ಮೈಸೂರಿಗೆ ವಿಸ್ತರಿಸ ಲಾಗಿತ್ತು. ಈಗ ಈ ರೈಲು ಸೇವೆಯನ್ನು ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಿಗೂ ವಿಸ್ತರಿಸಲಾಗಿದೆ ಎಂದು ಹೇಳಿದರು.
ಅಖೀಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗೆ ಕೇಂದ್ರ ಸರ್ಕಾರ 137 ಕೋಟಿ ರೂ. ಅನುದಾನ ನೀಡಿದ್ದು, ಈ ಅನುದಾನದಿಂದ ಕೈಗೆತ್ತಿಕೊಳ್ಳಲಾಗಿರುವ ಕಟ್ಟಡ ಕಾಮಗಾರಿ ಪೂರ್ಣವಾಗುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು. ಹಾಗೆಯೇ ಹೆಬ್ಟಾಳ್ನಲ್ಲಿ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಕೆಲಸ ಕೂಡ ಶೀಘ್ರ ಪೂರ್ಣಗೊಳ್ಳಲಿದೆ ಎಂದರು.
ಕಡಿಮೆ ದರ: ವಿಧಾನಪರಿಷತ್ ಸದಸ್ಯ ಮರಿತಿಬ್ಬೇ ಗೌಡ ಮಾತನಾಡಿ, ಬೆಂಗಳೂರಿನಿಂದ ರಾಮನಗರದ ವರೆಗಿದ್ದ ಮೆಮು ರೈಲು ಸೇವೆಯನ್ನು ವಾರದ ಆರು ದಿನಗಳ ಕಾಲ ಮೈಸೂರಿಗೆ ವಿಸ್ತರಿಸುವುದರಿಂದ ಕಡಿಮೆ ದರದಲ್ಲಿ ಮೈಸೂರು-ಬೆಂಗಳೂರು ನಡುವೆ ಸಂಚರಿಸಲು ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಮೈಸೂರು-ವಾರಾಣಸಿ ರೈಲನ್ನು ವಾರದ ಆರು ದಿನಗಳಿಗೆ ವಿಸ್ತರಿಸಬೇಕು. ಬೆಂಗಳೂರಿನಿಂದ ಮೈಸೂರಿಗೆ ಮಧ್ಯಾಹ್ನ 3.30ರ ಟಿಪ್ಪು ಎಕ್ಸ್ಪ್ರೆಸ್ ಬಿಟ್ಟರೆ ಸಂಜೆ 5.20ರವರೆಗೆ ಬೇರೆ ರೈಲು ಇಲ್ಲ. ಹಾಗಾಗಿ, ಸಂಜೆ 4 ರಿಂದ 4.30ರ ನಡುವೆ ಮತ್ತೂಂದು ರೈಲು ಸೇವೆ ಒದಗಿಸುವಂತೆ ಒತ್ತಾಯಿಸಿದರು.
ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ರೈಲುಗಳು ನಿಗದಿತ ಸಮಯಕ್ಕೆ ಕೆಂಗೇರಿ ತಲುಪಿದರೂ ಅಲ್ಲಿಂದ ಕೇಂದ್ರ ನಿಲ್ದಾಣಕ್ಕೆ ತಲುಪಲು ಅರ್ಧ ಗಂಟೆ ಕಾಯಬೇಕು. ಈ ಬಗ್ಗೆ ಗಮನಹರಿಸಿ ಸೇವೆ ವ್ಯತ್ಯಯವಾಗದಂತೆ ಸುಧಾರಣೆ ತರುವಂತೆ ಅವರು ಹೇಳಿದರು.
ಮೇಯರ್ ಪುಷ್ಪಲತಾ ಜಗನ್ನಾಥ್ ಮಾತನಾಡಿ ದರು. ಶಾಸಕ ಎಲ್.ನಾಗೇಂದ್ರ, ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್, ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗರ್ಗ್, ಎಡಿಆರ್ಎಂ ದೇವಸ್ವಯಂ, ರೈಲ್ವೆ ಸಲಹಾ ಸಮಿತಿ ಸದಸ್ಯ ಗಿರಿಧರ್ ಈ ವೇಳೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ