ಹುಣಸೂರಿನಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್: ಬೀದಿಗಿಳಿದ ವಾಹನಗಳು ಸೀಜ್
Team Udayavani, May 10, 2021, 9:07 AM IST
ಹುಣಸೂರು: ರಾಜ್ಯದಾದ್ಯಂತ ಇಂದಿನಿಂದ ( ಮೇ.10) 14 ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಆದೇಶಿಸಿದೆ. ಹೀಗಾಗಿ ನಗರದಲ್ಲಿ ಬೆಳ್ಳಂಬೆಳಗ್ಗೆ ತಹಸೀಲ್ದಾರ್ ಹಾಗೂ ಪೊಲೀಸರು ಫೀಲ್ಡ್ಗಿಳಿದಿದ್ದು, ಪ್ರತಿ ವಾಹನ ತಪಾಸಣೆ ಮಾಡುತ್ತಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದ್ದು, ಅವಶ್ಯಕತೆ ಹೊರತು ಪಡಿಸಿ ಅನಗತ್ಯವಾಗಿ ರಸ್ತೆಗಳಿಯುತ್ತಿರುವ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ.
ಕೋವಿಡ್ ಮಹಾಮಾರಿ ಸರಪಳಿ ತುಂಡರಿಸಲು ಸರಕಾರ ಕಠಿಣ ಕ್ರಮ ಕೈಗೊಂಡಿದ್ದರೂ ಬೇಕಾಬಿಟ್ಟಿಯಾಗಿ ಬೈಕ್ ಓಡಿಸುತ್ತಿದ್ದವರಿಗೆ ತಹಸೀಲ್ದಾರ್ ಬಸವರಾಜು ನೆತೃತ್ವದ ತಂಡ ಬೈಕ್ ವಶಕ್ಕೆ ಪಡೆದು ಖಡಕ್ ಎಚ್ಚರಿಕೆ ನೀಡಿದೆ.
ಹುಣಸೂರು ನಗರ ಸೇರಿದಂತೆ ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ಬೈಕ್ ವಶಕ್ಕೆ ಪಡೆದು ದಂಡ ವಿಧಿಸಿ ಕಳುಹಿಸಿದ್ದ ಪೊಲೀಸರು ಇದೀಗ ತಹಸೀಲ್ದಾರ್ ಐ.ಇ. ಬಸವರಾಜ್ ನೇತೃತ್ವದಲ್ಲಿ ಮುಂಜಾನೆಯೇ ಕಾರ್ಯಚರಣೆ ನಡೆಸಿ ನಗರ ಸೇರಿದಂತೆ ಗ್ರಾಮಾಂತರ. ಬಿಳಿಕೆರೆ ಠಾಣೆಗಳಿಂದ ನೂರಕ್ಕೂ ಹೆಚ್ಚು ಬೈಕ್ ಗಳನ್ನು ಸೀಜ್ ಪಡೆದರು.
ಕಾರ್ಯಾಚರಣೆಯಲ್ಲಿ ಸಿಪಿಐ ರವಿ, ಎಸ್ಐ ಲತೇಶ್ ಕುಮಾರ್ ಸೇರಿದಂತೆ 15ಕ್ಕೂ ಹೆಚ್ಚು ಪೋಲೀಸರು, ಗೃಹರಕ್ಷಕರು, ನಗರಸಭೆ ಆರೋಗ್ಯ ನಿರೀಕ್ಷಕರಾದ ಸತೀಶ್ ಶಶಿ ಹಾಗೂ ಸುಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ