ಪ್ರಾಮಾಣಿಕ ಕಾರ್ಯದಿಂದ ಯಶಸ್ಸು ಸಾಧ್ಯ


Team Udayavani, Jul 22, 2019, 3:00 AM IST

pramanika

ಮೈಸೂರು: ಜೆ.ಪಿ.ನಗರದ ಅರಿವಿನ ಮನೆ ಮಹಿಳಾ ಬಳಗವು ಮಾಜಿ ಸೈನಿಕರು ಮತ್ತು ರೈತರನ್ನು ಸನ್ಮಾನಿಸುವ ಮೂಲಕ ದಶಮಾನೋತ್ಸವವನ್ನು ಆಚರಿಸಿಕೊಂಡಿತು.

ಮೈಸೂರಿನ ಜೆ.ಪಿ.ನಗರದ ಪುಟ್ಟರಾಜ ಗವಾಯಿಗಳ ಕ್ರೀಡಾಂಗಣದ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಬಳಗದ 10ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾಜಿ ಯೋಧ ಎಲ್‌.ಸಿದ್ದಪ್ಪಾಜಿ, ಮಾಜಿ ಹವಾಲ್ದಾರ ಮೆಚಂಡ ಜಿ.ಚಿಟ್ಟಿಯಪ್ಪ, ಮಾಜಿ ನಾಯಕ್‌ ಎಂ.ಜಿ.ಹಿರಿಯಣ್ಣ ಹಾಗೂ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಪ್ರಗತಿಪರ ರೈತ ಮಹಿಳೆ ಸುನೀತಾ ಅಂದಾನಿ ಅವರನ್ನು ಸನ್ಮಾನಿಸಲಾಯಿತು.

ಬಳಗದಿಂದ ನಿಸ್ವಾರ್ಥ ಸೇವೆ: ಸಮಾರಂಭ ಉದ್ಘಾಟಿಸಿದ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಆರ್‌.ಮಲ್ಲಿಕಾರ್ಜುನಪ್ಪ ಮಾತನಾಡಿ, ಯಾವ ಆಪೇಕ್ಷೆಯೂ ಇಲ್ಲದೇ ನಿಸ್ವಾರ್ಥವಾಗಿ 10 ವರ್ಷಗಳಿಂದ ಅರಿವಿನ ಮನೆ ಮಹಿಳಾ ಬಳಗ ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ ಕಾರ್ಯ.

ತಮ್ಮ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಿದರೆ ಯಶಸ್ಸು ಖಂಡಿತ ಸಿಗುತ್ತದೆ. ಯಾವುದೇ ಸಂಘ- ಸಂಸ್ಥೆಗಳು ಸಮಾಜಮುಖೀಯಾಗಿ ಕಾರ್ಯೋನ್ಮುಖವಾದರೆ, ಸಮಾಜದಲ್ಲಿ ಪರಿವರ್ತನೆ ತರಬಹುದು. ಸದೃಢ ಸಮಾಜ ನಿರ್ಮಿಸಬಹುದು. ಅದಕ್ಕೆ ನಿಸ್ವಾರ್ಥ ಸೇವೆ ಮಾಡಬೇಕು ಎಂದರು.

ಸೈನಿಕ, ರೈತರ ಸನ್ಮಾನಕ್ಕೆ ಪ್ರಶಂಸೆ: ವಿಕೇರ್‌ ಎಕ್ಸ್‌-ಸರ್ವಿಸ್‌ಮೆನ್‌ ಟ್ರಸ್ಟ್‌ ಅಧ್ಯಕ್ಷ ಮಂಡೇಟಿರ ಎನ್‌.ಸುಬ್ರಮಣಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳಲ್ಲಿ ಸೈನಿಕರನ್ನು ಸನ್ಮಾನಿಸಲಾಗುತ್ತದೆ. ರೈತರನ್ನು ಸನ್ಮಾನಿಸುವುದು ವಿರಳ.

ಸಾಮಾಜಿಕ ಕಾರ್ಯಗಳಲ್ಲಿ ನಿರತವಾಗಿರುವ ಅರಿವಿನ ಮನೆ ಮಹಿಳಾ ಬಳಗದ ಸದಸ್ಯೆರು ದೇಶದ ಆಧಾರ ಸ್ತಂಭಗಳಾಗಿರುವ ಸೈನಿಕರು ಮತ್ತು ರೈತರನ್ನು ಸನ್ಮಾನಿಸುತ್ತಿರುವುದು ಪ್ರಶಂಸನೀಯವಾದ ಕಾರ್ಯ ಎಂದು ಹೇಳಿದರು.

ಅರಿವಿನ ಮನೆ ಮಹಿಳಾ ಬಳಗದ ಅಧ್ಯಕ್ಷೆ ಧನ್ಯ ಸತ್ಯೇಂದ್ರಮೂರ್ತಿ ಮಾತನಾಡಿ, ಕಳೆದ 10 ವರ್ಷಗಳಿಂದ ನಮ್ಮ ಬಳಗವು ಪ್ರತಿಭಾ ಪುರಸ್ಕಾರ, ಬಸವ ಜಯಂತಿಗಳ ಆಚರಿಸುವುದು ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬರಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಎನ್‌ಎಂಪಿ ಅಕಾಡೆಮಿ ವ್ಯವಸ್ಥಾಪಕಿ ಡಾ.ಸಿ.ತೇಜೋವತಿ, ಮಾಜಿ ಮಹಾಪೌರ ಬಿ.ಎಲ್‌.ಭೈರಪ್ಪ, ನಗರ ಪಾಲಿಕೆ ಸದಸ್ಯೆ ಶಾರದಮ್ಮ ಈಶ್ವರ್‌ ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.