ಬೇಸಿಗೆ ಕ್ರೀಡಾ ಶಿಬಿರಗಳು ಹೌಸ್‌ಪುಲ್‌


Team Udayavani, Apr 28, 2019, 3:00 AM IST

besige

ಮೈಸೂರು: ಮಕ್ಕಳು ನಾಟಕ, ಸಂಗೀತ, ನೃತ್ಯ ಕಲಿಕಾ ತರಬೇತಿಯಲ್ಲಿ ತಲ್ಲೀನರಾಗುವುದರ ಜೊತೆಗೆ ಕ್ರೀಡಾ ತರಬೇತಿಯಲ್ಲಿ ಪಾಲ್ಗೊಂಡು ಕಲಿಕೆಯೊಂದಿಗೆ ದೈಹಿಕ ಸದೃಢತೆಗೆ ಮುಂದಾಗಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ನ್ಪೋರ್ಟ್ಸ್ ಪೆವಿಲಿಯನ್‌, ಮಹಾರಾಜ, ಯುವರಾಜ ಕಾಲೇಜಿನ ಒಳಾಂಗಣ ಕ್ರೀಡಾಂಗಣ, ಓವೆಲ್‌ ಮೈದಾನದಲ್ಲಿ ಮಕ್ಕಳಿಗಾಗಿ ವಿವಿಧ ಕ್ರೀಡೆಗಳ ಬೇಸಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಎಲ್ಲಾ ಮೈದಾನಗಳಲ್ಲಿ ನಡೆಯುವ ಶಿಬಿರಗಳು ಮಕ್ಕಳಿಂದ ಭರ್ತಿಯಾಗಿವೆ

ವಿವಿಧ ಕ್ರೀಡೆ: ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗವು ಪ್ರತಿ ಬಾರಿಯಂತೆ ಈ ಬಾರಿಯೂ ಕ್ರಿಕೆಟ್‌, ಬ್ಯಾಡ್ಮಿಂಟನ್‌, ವಾಲಿಬಾಲ್‌, ಬಾಸ್ಕೆಟ್‌ಬಾಲ್‌, ಫ‌ುಟ್‌ಬಾಲ್‌, ಅಥ್ಲೆಟಿಕ್ಸ್‌ , ಹಾಕಿ, ಖೋ-ಖೋ, ಜಿಮ್ನಾಸ್ಟಿಕ್‌, ಯೋಗ ಸೇರಿದಂತೆ ಈ ವರ್ಷ ಹೊಸದಾಗಿ ಹ್ಯಾಂಡ್‌ಬಾಲ್‌ ತರಬೇತಿಯನ್ನು ಆಯೋಜಿಸಿದೆ. ಜೊತೆಗೆ ಮೈಸೂರು ವಿವಿ ಈಜುಕೊಳದಲ್ಲಿ ಆಯೋಜಿಸಿರುವ ಈಜು ತರಬೇತಿ ಶಿಬಿರದಲ್ಲಿ ಮಕ್ಕಳ ದಂಡೇ ಇದೆ.

ವಿಷಯಾಧಾರಿತ ತರಬೇತಿ: ಬೇಸಿಗೆ ರಜೆಯಲ್ಲಿ ಪ್ರವಾಸ, ಇಲ್ಲವೇ ಅಜ್ಜಿ, ನೆಂಟರಿಷ್ಟರ ಮನೆಗೆ ಹೋಗುವುದು ಅಥವಾ ಪೋಷಕರು ತಮ್ಮ ಮಕ್ಕಳನ್ನು ಡ್ಯಾನ್ಸ್‌, ಚಿತ್ರಕಲೆ, ಸಂಗೀತ, ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಷಯಾಧಾರಿತ ತರಬೇತಿಗೆ ಸೇರಿಸುವುದು ಸಾಮಾನ್ಯವಾಗಿತ್ತು. ಆದರೆ, ಈಗ ಕಾಲ ಬದಲಾಗಿದ್ದು, ಬಹುತೇಕ ಪಾಲಕರು ಮಕ್ಕಳ ಆರೋಗ್ಯ ಮತ್ತು ಕ್ರೀಡೆಯಿಂದ ಸಿಗುವ ಉಪಯೋಗಗಳ ಬಗ್ಗೆ ಜಾಗೃತಿಗೊಂಡಿದ್ದಾರೆ.

ಈ ನಿಟ್ಟಿನಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕ್ರೀಡಾ ತರಬೇತಿಗೂ ಸೇರಿಸಲು ಪೋಷಕರು ಮುಂದಾಗುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನ್ಪೋರ್ಟ್ಸ್ ಪೆವಿಲಿಯನ್‌ನಲ್ಲಿ 8 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸುತ್ತಿರುವ ವಿವಿಧ ಕ್ರೀಡೆಗಳ ಬೇಸಿಗೆ ತರಬೇತಿ ಶಿಬಿರಕ್ಕೆ ವರ್ಷದಿಂದ ವರ್ಷಕ್ಕೆ ಬೇಡಿಕೆ ಹೆಚ್ಚುತ್ತಿದೆ.

ಬಾಲಕಿಯರೂ ಭಾಗಿ: ಈ ವರ್ಷದ ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಶಿಬಿರಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಅದರಲ್ಲಿ 200ಕ್ಕೂ ಹೆಚ್ಚು ಬಾಲಕಿಯರಿರುವುದು ವಿಶೇಷ. ಶಾಲಾ ಹಂತದಿಂದಲೇ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಪರಿಪೂರ್ಣ ಕ್ರೀಡಾಪಟುವನ್ನಾಗಿಸಬೇಕೆಂಬ ಉದ್ದೇಶದಿಂದ ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗ ಆಯೋಜಿಸಿರುವ ಬೇಸಿಗೆ ಕ್ರೀಡಾ ಶಿಬಿರ ಯಶಸ್ವಿಯಾಗುತ್ತಿದೆ.

ಕ್ರೀಡಾ ತರಬೇತಿ ಶಿಬಿರದಲ್ಲಿ 850 ವಿದ್ಯಾರ್ಥಿಗಳು ಭಾಗವಹಿಸಿದ್ದು, 15ಕ್ಕೂ ಹೆಚ್ಚು ಕ್ರೀಡೆಗಳ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಏ.8 ರಂದು ಪ್ರಾರಂಭವಾಗಿರುವ ಈ ಶಿಬಿರ ಮೇ 8ರ ವರಗೂ ಪ್ರತಿದಿನ ಬೆಳಗ್ಗೆ 6.30 ರಿಂದ 9.30 ವರೆಗೂ ಪೆವಿಲಿಯನ್‌ನಲ್ಲಿ ನಡೆಯಲಿದೆ.

ವಾಲಿಬಾಲ್‌ ತರಬೇತಿಯಲ್ಲಿ 20, ಫ‌ುಟ್‌ಬಾಲ್‌ ತರಬೇತಿಯಲ್ಲಿ 140, ಯೋಗ ತರಬೇತಿಯಲ್ಲಿ 20, ತರಬೇತಿಯಲ್ಲಿ 30, ಕಬಡ್ಡಿ ತರಬೇತಿಯಲ್ಲಿ 40, ಕುಸ್ತಿ ಹಾಕಿಯಲ್ಲಿ 20 ಮಕ್ಕಳ ಭಾಗವಹಿಸಿರುವುದು ವಿಶೇಷ. ಕ್ರಿಕೆಟ್‌, ಹ್ಯಾಂಡ್‌ಬಾಲ್‌, ಜಿಮ್ನಾಸ್ಟಿಕ್‌, ಬ್ಯಾಸ್ಕೆಟ್‌ಬಾಲ್‌ ಹಾಗೂ ಅಥ್ಲೆಟಿಕ್ಸ್‌ ಶಿಬಿರಗಳಲ್ಲಿ ತಲಾ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿರುವುದು ಗಮನಾರ್ಹ.

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು, ಅನೇಕ ವರ್ಷಗಳಿಂದ ಕ್ರೀಡಾ ತರಬೇತಿ ಬೇಸಿಗೆ ಶಿಬಿರ ಆಯೋಜನೆ ಮಾಡುತ್ತಿದೆ. ಶಿಬಿರದಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸುತ್ತಿದ್ದು, ಅದೇ ಉತ್ಸಾಹ ಮತ್ತು ಶ್ರಮವನ್ನು ಮುಂದುವರಿಸಿದರೆ ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಬಹುದು.
-ಡಾ.ಪಿ.ಕೃಷ್ಣಯ್ಯ, ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ನಿರ್ದೇಶಕ

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.