ಇಂತಹ ಮೃಗೀಯ ಆಚರಣೆ ನೋಡಿದ್ದೀರಾ?


Team Udayavani, Jan 31, 2020, 4:08 PM IST

mysuru-tdy-2

ಎಚ್‌.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆಯಲ್ಲಿ ಹುಲಿಕೆರೆ ವೇಣುಗೋಪಾಲಸ್ವಾಮಿ ಜಾತ್ರೆಯಲ್ಲಿ ನರಿಯೊಂದನ್ನು ಬಂಧಿಸಿ ಬೀದಿ ನಾಯಿಗಳಿಂದ ದಾಳಿ ನಡೆಸುತ್ತಿರುವ ಮೌಡ್ಯ ಸಂಪ್ರದಾಯದ ವಿವಿಧ ದೃಶ್ಯಾವಳಿಗಳು.

ಎಚ್‌.ಡಿ.ಕೋಟೆ: ಜಾತ್ರೆ, ಭಕ್ತಿಯ ಹೆಸರಿನಲ್ಲಿ ಇಂತಹ ಅಮಾನವೀಯ ಹಾಗೂ ಮೌಡ್ಯದ ಆಚರಣೆ ಯನ್ನು ಸಾಮಾನ್ಯವಾಗಿ ನೀವು ನೋಡಿಯೇ ಇರುವುದಿಲ್ಲ.

ನರಿಯನ್ನು ಬೇಟೆಯಾಡಿ, ಗ್ರಾಮಕ್ಕೆ ತಂದು ಅದರ ಬಾಯಿಯನ್ನು ಹಗ್ಗದಿಂದ ಕಟ್ಟಿಹಾಕಲಾಗುತ್ತದೆ. ಬಳಿಕ ಬಂಧಿಯಾಗಿರುವ ಆ ನರಿಯನ್ನು ಬೀದಿ ನಾಯಿ ಗಳೊಂದಿಗೆ ಕಾಳಗಕ್ಕೆ ಬಿಡಲಾಗುತ್ತದೆ. ಬಂಧಿಯಾಗಿರುವ ಮೂಕಪ್ರಾಣಿ ನರಿಯನ್ನು ನಾಯಿಗಳು ಅಟ್ಟಾಡಿಸಿಕೊಂಡು ಕಚ್ಚುತ್ತವೆ. ಒಂದೆಡೆ ನರಿಯು ಹಿಂಸೆಯಿಂದ ನರಕಯಾತನೆ ಅನುಭವಿಸಿದರೆ, ಗ್ರಾಮಸ್ಥರು ಮಾತ್ರ ಮಜಾ ತೆಗೆದುಕೊಳ್ಳುತ್ತಾರೆ. ಇಂತಹ ಮೃಗೀಯ ಆಚರಣೆಯು, ಎಚ್‌.ಡಿ. ಕೋಟೆ ತಾಲೂಕು ಕೇಂದ್ರ ಸ್ಥಾನದಿಂದ ಸುಮಾರು 8 ಕಿ.ಮೀ. ಅಂತರದಲ್ಲಿರುವ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆಸಲಾಗಿದೆ. ಇದೇ ತಿಂಗಳ 16ರಂದು ನಡೆದಿದೆ ಎನ್ನಲಾಗಿದೆ.

ಈ ಅಮಾನವೀಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಈ ಬಗ್ಗೆ ನೆಟ್ಟಿಗರು ಭಾರೀ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಬ್ಬಲಗುಪ್ಪೆ ಗ್ರಾಮದಲ್ಲಿ ಹುಲಿಕೆರೆ ವೇಣುಗೋಲ ಸ್ವಾಮಿ ಜಾತ್ರೆಯಲ್ಲಿ ಗ್ರಾಮಸ್ಥರು ಈ ರೀತಿ ಮೂಕ ಪ್ರಾಣಿಗೆ ಹಿಂಸೆ ಕೊಡುವ ಆಚರಣೆ ನಡೆಸಲಾಗಿದೆ.

ಏನಿದು ಆಚರಣೆ?: ಹೆಬ್ಬಲಗುಪ್ಪೆ ಗ್ರಾಮದ ಹುಲಿಕೆರೆ ವೇಣು ಗೋಪಾಲಸ್ವಾಮಿ ಜಾತ್ರೆ ವೇಳೆ, ಪ್ರತಿ ವರ್ಷ ಗ್ರಾಮದ ಒಂದು ತಂಡ ಅರಣ್ಯಕ್ಕೆ ಹೋಗಿ ನರಿ ಯೊಂದನ್ನು ಜೀವಂತವಾಗಿ ಬೇಟೆಯಾಡಿ ಗ್ರಾಮಕ್ಕೆ ತರುತ್ತಾರೆ. ಬಳಿಕ ಜಾತ್ರಾ ಸಂದರ್ಭದಲ್ಲಿ ನರಿಯ ಬಾಯಿಗೆ ಹಗ್ಗ ಕಟ್ಟಲಾಗುತ್ತದೆ. ನಂತರ ಬೀದಿ ನಾಯಿಗಳೊಂದಿಗೆ ಕಾಳಗಕ್ಕೆ ಬಿಡುತ್ತಾರೆ. ಈ ವೇಳೆ, ನರಿ ಹಿಂಸೆ ಅನುಭವಿಸುವುದನ್ನು ತಮಾಷೆಯಾಗಿ ನೋಡುವುದು ಇಲ್ಲಿನ ಸಂಪ್ರದಾಯವಾಗಿದೆ. ಇದು ತಲೆ ಮಾರುಗಳಿಂದ ನಡೆದುಕೊಂಡು ಬರುತ್ತಿದೆ ಎಂದು ತಿಳಿದು ಬಂದಿದೆ.

ಅದರಂತೆಯೇ ಕಳೆದ 15 ದಿನಗಳ ಹಿಂದೆ ನರಿಯನ್ನು ತಂದು ಬೀದಿನಾಯಿ ಗಳಿಂದ ಕಚ್ಚಿಸಿ ಚಿತ್ರಹಿಂಸೆ ನೀಡಲಾಗಿರುವ ವಿಡಿಯೋ ಈಗ ವೈರಲ್‌ ಅಗಿದೆ. ತಾಲೂಕು ಕೇಂದ್ರ ಸ್ಥಾನದಿಂದ 8 ಕಿ.ಮೀ. ಅಂತರದಲ್ಲಿ ಪ್ರತಿವರ್ಷ ಈ ಮೂಢನಂಬಿಕೆ ಪದ್ಧತಿ ಸಂಪ್ರದಾಯ ಬದ್ಧವಾಗಿ ನಡೆದುಕೊಂಡು ಬರುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ಗಮನಕ್ಕೆ ಬಂದಿಲ್ಲ. ಇನ್ನಾದರೂ ಅಧಿಕಾರಿಗಳು ಜಾಗೃತರಾಗಿ ಈ ವೈರಲ್‌ ಆಗಿರುವ ದೃಶ್ಯಾವಳಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿ ಮುಂದಿನ ದಿನಗಳಲ್ಲಿ ಇಂತಹ ಮೂಢನಂಬಿಕೆ, ಕಂದಾಚಾರಗಳು ನಡೆಯದಂತೆ ಕ್ರಮ ಕೈಗೊಳ್ಳುವಂತೆ ಪ್ರಾಣಿ ಪ್ರಿಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

ದೇವಾಲಯಗಳಲ್ಲಿ ಪ್ರಾಣಿ ಬಲಿ ನಿಷೇಧಿಸಿ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ಆದೇಶ ಹೊರಡಿಸಿದೆ. ಇನ್ನು ವನ್ಯಜೀವಿಗಳ ಜೊತೆ ಚಲ್ಲಾಟ ವನ್ಯಜೀವಿಗಳ ಬೇಟೆಯಾಡುವುದು, ವನ್ಯಜೀವಿಗಳನ್ನು ಕಾಡಿನಿಂದ ನಾಡಿಗೆ ತಂದು ಪೋಷಣೆ ಮಾಡುವುದು ಕಾನೂನು ಬಾಹಿರ. ವನ್ಯ ಜೀವಿಗಳ ರಕ್ಷಣೆಗಾಗಿ ವನ್ಯಜೀವಿ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಯಲ್ಲಿದೆ. ಇಷ್ಟಿದ್ದರೂ ಹೆಬ್ಬಲಗುಪ್ಪೆ ಗ್ರಾಮಸ್ಥರು ನರಿಯೊಂದನ್ನು ಜೀವಂತವಾಗಿ ಅರಣ್ಯದಲ್ಲಿ ಬೇಟೆಯಾಡಿ ಬಂಧಿಸಿ ತಂದು ಇಡೀ ಗ್ರಾಮದಲ್ಲಿ ನರಿ ಮೆರವಣಿಗೆ ನಡೆಸಿ ಬಳಿಕ ದೇವಸ್ಥಾನದ ಜಾತ್ರಾ ಆವರಣದಲ್ಲಿ ನರಿ ಬಾಯಿಯನ್ನು ಹಗ್ಗದಿಂದ ಬಂಧಿಸಿ ಬೀದಿ  ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಹೆಬ್ಬಲಗುಪ್ಪೆಯಲ್ಲಿ ಇಂತಹ ಆಚರಣೆ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ವನ್ಯಜೀವಿಗಳನ್ನು ಬೇಟೆಯಾಡಿ ತಂದು ಹಿಂಸೆ ನೀಡುವುದು ಕಾನೂನು ಬಾಹಿರವಾಗಿದೆ. ಗ್ರಾಮದಲ್ಲಿ ಈಗ ನಡೆದಿರುವ ಅಮಾನವೀಯ ಆಚರಣೆ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ ಮುಂದಿನ ವರ್ಷದಿಂದ ಇಂತಹ ಕೃತ್ಯ ನಡೆಯದಂತೆ ನೋಡಿಕೊಳ್ಳಲಾಗುವುದು.  –ಆರ್‌.ಮಂಜುನಾಥ್‌, ತಹಶೀಲ್ದಾರ್‌

ಹೆಬ್ಬಲಗುಪ್ಪೆ ಗ್ರಾಮದಲ್ಲಿ ನರಿಯನ್ನು ಹಿಂಸಿಸಿ ಜಾತ್ರೆ ನಡೆಸಿರುವುದು ಈಗ ನಮ್ಮ ಗಮನಕ್ಕೆಬಂದಿದೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಗ್ರಾಮಕ್ಕೆ ಕಳುಹಿಸಿ, ವಿಡಿಯೋದಲ್ಲಿ ಕಂಡು ಬಂದ ವ್ಯಕ್ತಿಗಳನ್ನು ಗುರುತಿಸಿ ಮಾಹಿತಿಪಡೆಯಲಾಗುವುದು. ಬಳಿಕ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು.ಮಧು, ಎಚ್‌.ಡಿ.ಕೋಟೆ ವಲಯ ಅರಣ್ಯಾಧಿಕಾರಿ

 

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.