#PratapSimha; ಬೀದಿಗಿಳಿದು ಹೋರಾಟ ಆರಂಭಿಸಿದ ಅಭಿಮಾನಿಗಳು: ಕಣ್ಣೀರಿಟ್ಟ ಮಹಿಳೆಯರು

ಹಣಬಲ, ತೋಳ್ಬಲವಿದ್ದವರಿದ್ದಾರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ ಎಂದ ಸಂಸದ

Team Udayavani, Mar 13, 2024, 2:37 PM IST

1-sadasa

ಮೈಸೂರು: ಸಂಸದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿರುವ ನಡುವೆಯೇ ಮಂಗಳವಾರ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ತೀವ್ರ ಆಕ್ರೋಶ ಹೊರ ಹಾಕಿ ಬೀದಿಗಿಳಿದಿದ್ದಾರೆ.

ಪ್ರತಾಪ್ ಸಿಂಹ ಅವರಿಗೇ ಟಿಕೆಟ್ ನೀಡಬೇಕೆಂದು ಬೆಂಬಲಿಗರು ಮೈಸೂರಿನ ವಿವಿಧೆಡೆ ಬೃಹತ್‌ ಪ್ರತಿಭಟನೆ ನಡೆ
ಸುತ್ತಿದ್ದಾರೆ . ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಹಾಗೂ ಹಿನಕಲ್ ರಿಂಗ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಾಲು ಸಾಲು ಪ್ರತಿಭಟನೆ ನಡೆಸಲಾಗುತ್ತಿದ್ದು, ಕೊಲಂಬಿಯ ಏಷಿಯಾ ಆಸ್ಪತ್ರೆ, ಹಿನಕಲ್ ಫ್ಲೈ ಓವರ್ ಬಳಿಯೂ ಪ್ರತಿಭಟನೆ ನಡೆಸಲಾಗಿದೆ. ಹುಣಸೂರು ಪಟ್ಟಣದಲ್ಲೂ ಆಕ್ರೋಶ ಹೊರ ಹಾಕಲಾಗಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಹೊಸ ಪ್ರಯೋಗಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.ರಾಜವಂಶಸ್ಥ ಯದುವೀರ್ ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗಿದೆ ಎಂಬ ವರದಿ ಹಿನ್ನಲೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಜನತೆ ಮಾತ್ರವಲ್ಲದೆ ರಾಜ್ಯದೆಲ್ಲೆಡೆಯಿಂದ ಅಪಾರ ಬೆಂಬಲ ಸಿಂಹ ಪರ ವ್ಯಕ್ತವಾಗುತ್ತಿದೆ. ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ‌ ಮಾಡುವಂತೆ ಘೋಷಣೆ  ಮೊಳಗಿಸಿದ್ದಾರೆ.

ಟಿಕೆಟ್ ಭರವಸೆ? 
ಪರ ವಿರೋಧದ ನಡುವೆ ಸ್ಪರ್ಧೆಗೆ ಯದುವೀರ್ ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗಿದ್ದು, ಹೈಕಮಾಂಡ್ ಮೂಲಗಳಿಂದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿರುವುದಾಗಿ ಗೃಹ ಸಚಿವ ಆಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಕೆಲ ಮೂಲಗಳು ತಿಳಿಸಿವೆ.

ನೂರಾರು ಪೋಸ್ಟರ್ ಗಳು
ಬಡವರ ಮಕ್ಕಳು ಬೆಳೆಯಬಾರದಾ? ಮೈಸೂರು ಹೈವೇ ಮಾಡಿದಕ್ಕಾಗಿ ಟಿಕೆಟ್ ಇಲ್ವಾ? ಕಾಂಗ್ರೆಸ್ಸಿಗೆ ಟಕ್ಕರ್‌ ಕೊಟ್ಟಿದಕ್ಕೆ ಇಲ್ವಾ? ಟಿಪ್ಪು ರೈಲಿಗೆ ಒಡೆಯರ್ ಹೆಸರು ಇಟ್ಟಿದಕ್ಕೆ ಇಲ್ವಾ? ಅಭಿವೃದ್ಧಿ ಕೆಲಸ ಮಾಡಿದಕ್ಕೆ ಇಲ್ವಾ? ಒಕ್ಕಲಿಗ ಅನ್ನೋ ಕಾರಣಕ್ಕೆ ಟಿಕೆಟ್ ಕೊಡಲ್ವಾ? ಎಂಬ ಪೋಸ್ಟರ್ ಗಳು ಕಂಡು ಬಂದಿವೆ. ದೇಶಕ್ಕಾಗಿ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ ಎಂದು ಘೋಷಣೆ ಮೊಳಗಿಸಲಾಗಿದೆ.

ಮೈಸೂರು ರಿಂಗ ರಸ್ತೆಯಲ್ಲಿ ಬೈಕ್ ರ‍್ಯಾಲಿ
ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳು ಪೊಸ್ಟರ್ ಹಿಡಿದು ಬೈಕ್ ರ‍್ಯಾಲಿ ನಡೆಸಿದ್ದಾರೆ. ಯದುವೀರ್ ಬೇಡ, ಪ್ರತಾಪ್ ಸಿಂಹ ಬೇಕು ಎಂದು ಘೋಷಣೆ ಕೂಗಿದ್ದು,ಪ್ರತಿಭಟನೆಗೆ ಶ್ರೀರಾಮಸೇನೆ ಬೆಂಬಲ ನೀಡಿದೆ.

ಮಹರಾಜರು‌ ಕೊಡಬೇಕು ಹೊರತು ಮತಕ್ಕಾಗಿ‌ ಬೇಡುವುದು ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳು ಕಂಡು ಬಂದಿವೆ. ಮೈಸೂರು ರಾಜ ವಂಶಸ್ಥರ ಕೊಡುಗೆ ಈ ನಾಡಿಗೆ ಅಪಾರವಾಗಿದೆ, ಅದನ್ನು ಎಣಿಕೆ ಮಾಡಲಿಕ್ಕು ಸಾಧ್ಯವಿಲ್ಲ.ನಮ್ಮ ಮಹಾರಾಜರನ್ನು ಇದೇ ವೈಭೋಗದಿಂದ ನೋಡಲು ಬಯಸುತ್ತೇವೆ ಹೊರತು ರಸ್ತೆಗಳಲ್ಲಿ ಮತಕ್ಕಾಗಿ ಜನರನ್ನುಬೇಡುವ ಪರಿಸ್ಥಿತಿ ಬೇಡ. ನಮ್ಮ ರಾಜರು ನಮ್ಮ ಹೆಮ್ಮೆ ಎಂದು ಬರೆಯಲಾಗಿದೆ.

ತಲೆಕೆಡಿಸಿಕೊಂಡಿಲ್ಲ!

ಮೈಸೂರಿನ ಪತ್ರಕರ್ತರ ಭವನದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಬುಧವಾರ ಅಭಿನಂದನಾ ಸಮಾರಂಭ ನಡೆಯಿತು. ಹಿರಿಯ ಪತ್ರಿಕಾ ಸಂಪಾದಕ ಕೆ.ಬಿ. ಗಣಪತಿ ಸೇರಿದಂತೆ ಹಿರಿಯ ಸಾಹಿತಿಗಳು, ಸಮಾಜ ಸೇವಕರು, ಕನ್ನಡ ಪರ ಹೋರಾಟಗಾರರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ”ಕಳೆದೊಂದು ವಾರದಿಂದ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ.ರಾಜಕಾರಣದಲ್ಲಿ ಹಣಬಲ, ತೋಳ್ಬಲ ಉಳ್ಳವರು ಇದ್ದಾರೆ. ನಾನು ಇದ್ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ.ಮೊದಲ ಬಾರಿ ಪತ್ರಕರ್ತನಾಗಿ ಬಂದು ಚುನಾವಣೆಗೆ ಸ್ಪರ್ಧಿಸಿದ ನನ್ನನ್ನು ಮೋದಿಯವರ ಮುಖ ನೋಡಿಕೊಂಡು ಮೈಸೂರು ಕೊಡಗಿನ ಜನರು ಆಯ್ಕೆ ಮಾಡಿದರು‌.ಈ ಬಾರಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ.ನಾನು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇ‌‌‌ನೆ.ಮೈಸೂರು ಕೊಡಗಿನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತಂದಿದ್ದೇನೆ” ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.