ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
Team Udayavani, Dec 4, 2019, 3:53 PM IST
ಭೇರ್ಯ: ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಮೀಪದ ಕುಪ್ಪಳ್ಳಿ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸಂಭವಿಸಿದೆ. 8ನೇ ತರಗತಿ ಓದುತ್ತಿದ್ದ ಗೌತಮ್ (14) ಮೃತ ದುರ್ದೈವಿ.
ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಹೋಬಳಿಯ ಸಾಲೆಕೊಪ್ಪಲು ಗ್ರಾಮದ ಶಿವಣ್ಣ ಮತ್ತು ರೇಖಾ ದಂಪತಿ ಪುತ್ರ ಗೌತಮ್, 2019-20ನೇ ಸಾಲಿನಿಂದ 8ನೇ ತರಗತಿಗೆ ಕುಪ್ಪಳ್ಳಿ ವಸತಿ ಶಾಲೆಗೆ ದಾಖಲಾಗಿದ್ದನು. ರಾತ್ರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜತೆಯಲ್ಲಿ ಊಟ ಮಾಡಿ, ಶಾಲಾ ಕೊಠಡಿಯೊಳಗೆ 30 ವಿದ್ಯಾರ್ಥಿಗಳ ಜತೆಯಲ್ಲಿ ಮಲಗಿದ್ದನು. ಬೆಳಗ್ಗೆ ಈತನ ಸ್ನೇಹಿತರು ಎಂದಿನಂತೆ ಎಬ್ಬಿಸಲು ಹೋದಾಗ ಎಚ್ಚರಗೊಳ್ಳದಿದ್ದರಿಂದ ಪಕ್ಕದ ಕೊಠಡಿಯಲ್ಲಿದ್ದ ಶಿಕ್ಷಕಿ ಹಾಗೂ ನರ್ಸ್ಗೆ ತಿಳಿಸಿದ್ದಾರೆ.
ಅವರು ಆಗಮಿಸಿ ನೋಡಿದಾಗ ಗೌತಮ್ ಮೃತಪಟ್ಟಿರುವುದು ಕಂಡು ಬಂದಿದೆ. ಕೂಡಲೇ ಗೌತಮ್ ಪೋಷಕರಿಗೆ ಹಾಗೂ ಸಾಲಿಗ್ರಾಮ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ತಮ್ಮ ಪುತ್ರ ಅನುಮಾನಸ್ಪಾದವಾಗಿ ಮೃತಪಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಿ ನ್ಯಾಯ ದೊರಕಿಸಿ ಎಂದು ಪೋಷಕರು ಸಾಲಿಗ್ರಾಮ ಪೊಲೀಸರಿಗೆ ದೂರು ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಶಾಲೆಗೆ ಭೇಟಿ ನೀಡಿ, ಗೌತಮ್ ಅನುಮಾನಾಸ್ಪದ ಸವಿನ ಬಗ್ಗೆ ಆತನ ಸ್ನೇಹಿತರ ಜತೆ ಮಾತುಕತೆ ನಡೆಸಿದರು. ಈ
ಸಂದರ್ಭದಲ್ಲಿ ವೃತ್ತನಿರೀಕ್ಷಕ ಪಿ.ಕೆ. ರಾಜು, ತಹಶೀಲ್ದಾರ್ ಮಂಜುಳಾ, ಜಿಲ್ಲಾ ಹಿಂದುಳಿದ ವರ್ಗದ ಜಿಲಾಧಿಕಾರಿ ಬಿಂದ್ಯಾ, ಸಬ್ಇನ್ಸ್ಪೆಕ್ಟರ್ ಚೇತನ್, ಮಾದಪ್ಪ, ಬಿಸಿಎಂ ಅಧಿಕಾರಿ ಮಹೇಶ್, ಸಮಾಜ ಕಲ್ಯಾಣಾಧಿಕಾರಿ ಅಶೋಕ್, ವಸತಿ ಶಾಲೆಯ ಪ್ರಾಂಶುಪಾಲ ಹೇಮಂತ್ ಇತರರಿದ್ದರು.
ಶಾಲೆ ಸ್ಥಳಾಂತರಿಸಿ: ಕುಪ್ಪಳ್ಳಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಗೆ 10 ಎಕರೆ ಜಮೀನು ಮಂಜೂರಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಈಗಾಗಲೇ 10 ಕೋಟಿ ರೂ. ಬಿಡುಗಡೆಯಾಗಿದೆ. ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ. ಅಲ್ಲಿಯವರೆಗೆ ಈ ವಸತಿ ಶಾಲೆಯನ್ನು ಮೇಲೂರು ಅಥವಾ ಸೌಲಭ್ಯವಿರುವ ಕಟ್ಟಡಕ್ಕೆ ಸ್ಥಳಾಂತರಿಸಿ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿಗೆ ಶಾಸಕ ಸಾ.ರಾ. ಮಹೇಶ್ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ನೊಂದು ವಾರದಲ್ಲಿ ಮಂಡ್ಯದಲ್ಲಿ ಬಿಜೆಪಿ ಮ್ಯಾಜಿಕ್!: ಗೋ ಮಧುಸೂಧನ್
ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ
ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅನುತ್ತೀರ್ಣ : ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು
ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ: ಎಸ್ಎಂಕೆ ಗೆ ಹೆಚ್ ಡಿಕೆ ಟಾಂಗ್
MUST WATCH
ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?
ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ
ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!
ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..
ಹೊಸ ಸೇರ್ಪಡೆ
ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ಹೆಬ್ರಿ : ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕ ನಿತ್ಯಾನಂದ ಶೆಟ್ಟಿ ಆಯ್ಕೆ
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಸಾಕ್ಷರತೆ ಅಗತ್ಯ
ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ
ಕಾಪು : ಪೊಲಿಪುವಿನಲ್ಲಿ ಕಡಲ್ಕೊರೆತ ಭೀತಿ, ಕಾಮಗಾರಿ ವಿಳಂಬ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ