ನಲ್ಲಿ ನೀರಿನಲ್ಲಿ ಚರಂಡಿ ನೀರು, ಹುಳ ಕೂಡ ಬರುತ್ತೆ!


Team Udayavani, Oct 16, 2019, 3:00 AM IST

nalli

ಹುಣಸೂರು: ನಗರದ ಮೂರು ಬಡಾವಣೆಗಳಲ್ಲಿ ಕಳೆದ 15 ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಮನೆಗಳಿಗೆ ನಲ್ಲಿ ನೀರಿನೊಂದಿಗೆ ಚರಂಡಿ ನೀರು ಕೂಡ ಸರಬರಾಜಾಗುತ್ತಿದೆ. ಕೆಲ ಸಂದರ್ಭದಲ್ಲಿ ಹುಳಗಳು ಕೂಡ ನಲ್ಲಿಗಳಲ್ಲಿ ಉದರುತ್ತವೆ.

ಇದರಿಂದ ಹಲವಾರು ಮಂದಿ ಅನಾರೋಗ್ಯ ಪೀಡಿತರಾಗಿದ್ದಾರೆ. ಆದರೂ ಕೂಡ ನಗರಸಭೆ ಮಾತ್ರ ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲದಂತೆ ನಾಗರಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ನಗರದ 8ನೇ ವಾರ್ಡ್‌ನ ಬ್ರಾಹ್ಮಣರ ಬಡಾವಣೆ, ಕಾಫಿವರ್ಕ್ಸ್ ರಸ್ತೆ, 11ನೇ ವಾರ್ಡ್‌ನ ಗಣೇಶ ಗುಡಿ ಬೀದಿ ನಿವಾಸಿಗಳೇ ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಕಾವೇರಿ ನೀರು, 75 ಬೋರ್‌ವೆಲ್‌: ನಗರಸಭೆ ವತಿಯಿಂದ ಈ ಹಿಂದೆ ವಿತರಿಸುತ್ತಿದ್ದ ಲಕ್ಷ್ಮಣತೀರ್ಥ ನದಿ ನೀರು ಕುಡಿಯಲು ಯೋಗ್ಯವಿಲ್ಲ ಎಂಬ ವರದಿಯಿಂದ ಎಚ್ಚೆತ್ತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಗರವಾಸಿಗಳಿಗೆ ಶುದ್ಧ ಕುಡಿಯುವ ಒದಗಿಸಲು ಕೆ.ಆರ್‌.ನಗರದಿಂದ ಕಾವೇರಿ ನೀರು ಇದರೊಟ್ಟಿಗೆ 75ಕ್ಕೂ ಹೆಚ್ಚು ಬೋರ್‌ವೆಲ್‌ಗ‌ಳ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದಾರೆ.

ನಲ್ಲಿ ನೀರು ದುರ್ವಾಸನೆ: ಸರಬರಾಜಾಗುತ್ತಿರುವ ನಲ್ಲಿ ನೀರು ದುರ್ವಾಸನೆ ಬೀರುತ್ತಿರುವ ಬಗ್ಗೆ ನಗರಸಭೆ ನೀರು ಸರಬರಾಜು ಎಂಜಿನಿಯರ್‌ ಹಾಗೂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ ಮೇರೆಗೆ ಅಲ್ಲಲ್ಲಿ ತಪಾಸಣೆ ನಡೆಸಿ, ಮುಖ್ಯ ಪೈಪ್‌ಗ್ಳನ್ನು ಸ್ವತ್ಛಗೊಳಿಸಿ ನೀರು ಹರಿಸಲಾಗಿತ್ತು. ಆದರೆ, ಇದೀಗ ದುರ್ವಾಸನೆಯೊಂದಿಗೆ ಹುಳು ಮಿಶ್ರಿತ ನೀರು ಹರಿದು ಬರುತ್ತಿದೆ.

ಈ ನೀರನ್ನು ಕುಡಿದ ಬಡಾವಣೆಯ ಮಕ್ಕಳು, ದೊಡ್ಡವರು ಸಹ ಹೊಟ್ಟೆನೋವು, ಆಮಶಂಕೆ ಮತ್ತಿತರ ಜ್ವರದಿಂದ ಬಳಲುತ್ತಿದ್ದು, ನಿತ್ಯ ಆಸ್ಪತ್ರೆಗೆ ಎಡತಾಕುವಂತಾಗಿದೆ. ಈ ಅವ್ಯವಸ್ಥೆಗೆ ಬಡಾವಣೆ ನಾಗರಿಕರು ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ. ಇನ್ನಾದರೂ ನಗ‌ರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶುದ್ದ ಕುಡಿಯುವ ನೀರು ವಿತರಣೆ ಮಾಡುವಂತೆ ಬಡಾವಣೆ ನಿವಾಸಿಗಳು ಆಗ್ರಹಿಸಿದ್ದಾರೆ.

ನಗರದ ಕೆಲವೆಡೆ ರಸ್ತೆ ಅಭಿವೃದ್ಧಿ, ದೂರವಾಣಿ ಕೇಬಲ್‌ ಅಳವಡಿಸುವವರು, ಒಳಚರಂಡಿ-ನಲ್ಲಿ ಸಂಪರ್ಕ ಪಡೆಯುವವರು ಯಾವುದೇ ಮಾಹಿತಿ ನೀಡದೆ ರಾತ್ರೋರಾತ್ರಿ ರಸ್ತೆಗಳನ್ನು ಅಗೆಯುತ್ತಿರುವುದು ಸಾಮಾನ್ಯವಾಗಿದೆ. ಈ ವೇಳೆ ಅಧಿಕಾರಿಗಳು ಸಹ ಮೌನ ಸಮ್ಮತಿ ನೀಡುವುದರಿಂದ ಇದು ಮುಂದುವರಿಯುತ್ತಲೇ ಇದೆ. ನಗರದಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳ ಚರಂಡಿ, ಶುದ್ಧ ಕುಡಿಯುವ ನೀರಿಗಾಗಿ ತೆರಿಗೆ ಕಟ್ಟಿಸಿಕೊಳ್ಳುವ ನಗರಸಭೆ ಅಧಿಕಾರಿಗಳು ದೂರು ನೀಡಿದರೂ ಸ್ಪಂದಿಸುವುದಿಲ್ಲ ಎಂದು ಬ್ರಾಹ್ಮಣರ ಬಡಾವಣೆ ನಿವಾಸಿ ಮಾಧುರಾವ್‌ ಮತ್ತಿತರರು ಅವಲತ್ತುಕೊಂಡಿದ್ದಾರೆ.

ಕಲುಷಿತ ನೀರು ಪೂರೈಕೆ ಏಕೆ?: ನಗರದಲ್ಲಿ ನಲ್ಲಿ ಸಂಪರ್ಕ ಒಳರಂಡಿ ನೀರಿನ ಸಂಪರ್ಕ ಪಡೆಯುವವರು ನಗರಸಭೆಯಿಂದ ಅನುಮತಿ ಪಡೆದ ಬೇಕಾಬಿಟ್ಟಿಯಾಗಿ ಸಂಪರ್ಕ ಪಡೆದುಕೊಳ್ಳುವರು. ವೈಜ್ಞಾನಿಕವಾಗಿ ನಲ್ಲಿ ಸಂರ್ಪಕ ಪಡೆದುಕೊಳ್ಳುತ್ತಿಲ್ಲ. ಒಳಚರ‌ಂಡಿ ಪಕ್ಕದಲ್ಲೇ ನೀರಿನ ಪೈಪ್‌ಗ್ಳನ್ನು ಅಳವಡಿಸಿಕೊಳ್ಳುವುದರಿಂದ ದುರಸ್ತಿ ವೇಳೆ ಚರಂಡಿ ನೀರು ಸೇರಿಕೊಂಡು ಕಲುಷಿತ ನೀರು ಸರಬರಾಜಾಗುತ್ತಿದೆ.

ಚರಂಡಿ ಬಳಿ, ಮನೆ ಮುಂದೆ ನಲ್ಲಿಗಳನ್ನು ಅಳವಡಿಸಿಕೊಳ್ಳುವುದರಿಂದ ಈ ಅವ್ಯವಸ್ಥೆ ನಿರ್ಮಾಣವಾಗಿದೆ. ಆದರೆ ನಗರಸಭೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಪರಿಣಾಮ ನಾಗರೀಕರು ಮಾತ್ರ ಅನಾಗರೀಕರಾಗಿ ಬದುಕು ನಡೆಸುವಂತಾಗಿದೆ.

ಬಡಾವಣೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಓವರ್‌ ಹೆಡ್‌ ಟ್ಯಾಂಕ್‌ಗಳನ್ನು ಪರಿಶೀಲಿಸಿ ಶುಚಿಗೊಳಿಸಲು ಹಾಗೂ ಕಲುಷಿತ ನೀರು ಸರಬರಾಜಗುತ್ತಿರುವ ಬಡಾವಣೆಯಲ್ಲಿ ತಕ್ಷಣವೇ ದುರಸ್ತಿ ಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಕ್ರಮ ಸಂಪರ್ಕ ಪಡೆಯುವವರ ಬಗ್ಗೆ ನಗರಸಭೆಗೆ ಮಾಹಿತಿ ನೀಡಬೇಕು. ನಗರದ ಅಭಿವೃದ್ಧಿಗೆ ನಿವಾಸಿಗಳೂ ಸಹ ಸಹಕಾರ ನೀಡಬೇಕು.
-ಶಿವಪ್ಪನಾಯಕ, ನಗರಸಭೆ ಪೌರಾಯುಕ್ತ

* ಸಂಪತ್‌ ಕುಮಾರ್‌

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.