ಟ್ರ್ಯಾಲಿ ಮೇಲೆತ್ತಿ ಟಿಪ್ಪರ್‌ ಓಡಿಸಿದ್ದಕ್ಕೆ ಟೀಸಿ, 12 ಕಂಬ ಧರೆಗೆ!


Team Udayavani, Apr 28, 2019, 3:00 AM IST

tryali

ಹುಣಸೂರು: ಟಿಪ್ಪರ್‌ ಲಾರಿಯ ಹಿಂಬದಿಯ ಟ್ರ್ಯಾಲಿ(ಬಕೇಟ್‌) ಮೇಲೆತ್ತಿಕೊಂಡೇ ಓಡಿಸುತ್ತಿದ್ದ ಚಾಲಕನ ಬೇಜವಾಬ್ದಾರಿತನದಿಂದ ವಿದ್ಯುತ್‌ ತಂತಿಗೆ ಟಿಪ್ಪರ್‌ನ ಟ್ರ್ಯಾಲಿ ತಗುಲಿ ಒಂದು ವಿದ್ಯುತ್‌ ಪರಿವರ್ತಕ ಸೇರಿದಂತೆ 12 ಲೈಟ್‌ ಕಂಬಗಳು ನೆಲಕ್ಕುರುಳಿರುವ ಘಟನೆ ನಗರದ ಬೈಪಾಸ್‌ ರಸ್ತೆಯಲ್ಲಿ ಸಂಭವಿಸಿದೆ.

ಈ ವೇಳೆ ವಿದ್ಯುತ್‌ ಸ್ಥಗಿತಗೊಂಡಿದ್ದರಿಂದಾಗಿ ಭಾರೀ ಅನಾಹುತ ತಪ್ಪಿದೆ. ಅದೃಷ್ಟವಶಾತ್‌ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಶನಿವಾರ ಬೆಳಗ್ಗೆ ಟಿಪ್ಪರ್‌ ಲಾರಿಯು ಡೀಸೆಲ್‌ ತುಂಬಿಸಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಲಾರಿ ಹಿಂಬದಿಯ ಬಕೇಟ್‌ ಮೇಲೆತ್ತಿದ್ದಾನೆ.

ಚಾಲಕ ಇದನ್ನು ಕೆಳಗಿಳಿಸದೆ ನಿರ್ಲಕ್ಷ್ಯದಿಂದ ಅತೀ ವೇಗವಾಗಿ ಬರುತ್ತಿದ್ದ ವೇಳೆ ದೇವರಾಜ ಅರಸು ಪ್ರತಿಮೆ ಬಳಿಯ ರಸ್ತೆಯಲ್ಲಿ ಅಡ್ಡವಿರುವ 11 ಕೆ.ವಿ. ವಿದ್ಯುತ್‌ ಮಾರ್ಗದ ತಂತಿಗೆ ತಗುಲಿದೆ. ರಭಸಕ್ಕೆ ಒಮ್ಮೆಲೇ ಒಂದು ವಿದ್ಯುತ್‌ ಕಂಬ ವೈರ್‌ ಸಮೇತ ರಸ್ತೆಗೆ ಬೀಳುತ್ತಿದ್ದಂತೆ ವಿದ್ಯುತ್‌ ಪರಿವರ್ತಕ (ಟೀಸಿ) ಹಾಗೂ 10ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಒಮ್ಮೆಲೆ ಧರೆಗುರುಳಿದ ತಕ್ಷಣವೇ ಲೈನ್‌ ಟ್ರಿಪ್‌ ಆಗಿದ್ದರಿಂದ ವಿದ್ಯುತ್‌ ಸ್ಥಗಿತಗೊಂಡು ಮುಂದಾಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.

ಪ್ರಾಣಾಪಾಯದಿಂದ ಪಾರು: ಈ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಗಾಬರಿಗೊಂಡು ಕಿರುಚಿಕೊಂಡಿದ್ದಾರೆ. ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ದನಗಾಹಿಯಂತೂ ಹೆದರಿ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

5.50 ಲಕ್ಷ ರೂ. ನಷ್ಟ: ವಿದ್ಯುತ್‌ ಪರಿವರ್ತಕಯನ್ನು ಕಾರ್ಯನಿರ್ವಹಿಸಲು ಸಮರ್ಥವಾಗಿದೆಯೇ ಎಂಬುದನ್ನು ತಪಾಸಣೆ ನಡೆಸಬೇಕಿದೆ. ಅಲ್ಲದೇ 12 ಕಂಬಗಳಿಗೆ ಹಾನಿಯಾಗಿದ್ದು, ಅಂದಾಜು 5.50 ಲಕ್ಷ ರೂ. ನಷ್ಟ ಉಂಟಾಗಿದೆ. ಘಟನೆ ಸಂಬಂಧ ಟಿಪ್ಪರ್‌ ಮಾಲಿಕ ಹಾಗೂ ಚಾಲಕನ ವಿರುದ್ಧ ನಗರಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಸೆಸ್ಕ್ ಎಇಇ ಸಿದ್ದಪ್ಪ ತಿಳಿಸಿದ್ದಾರೆ.

ಚಾಲಕನಿಗೆ ನ್ಯಾಯಾಂಗ ಬಂಧನ: ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಅಜಾಗರೂಕತೆಯಿಂದ ಟಿಪ್ಪರ್‌ ಚಾಲನೆ ಮಾಡಿ ಅನಾಹುತಕ್ಕೆ ಕಾರಣನಾದ ಚಾಲಕ ಹುಣಸೂರು ತಾಲೂಕು ಹಿಂಡಗುಡ್ಲು ನಿವಾಸಿ ನಾಗನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಎಸ್ಸೆ„ ಮಹೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.