ವಿಶೇಷ ಚೇತನರಿಗೆ ತಾಂತ್ರಿಕ ಶಿಕ್ಷಣ ನೀಡಲಿ


Team Udayavani, Nov 14, 2022, 3:16 PM IST

tdy-10

ಮೈಸೂರು: ವಿಶೇಷಚೇತನ ಮಕ್ಕಳು ಸ್ವಂತ ಬದುಕು ಕಟ್ಟಿಕೊಳ್ಳಲು ತಾಂತ್ರಿಕ ಶಿಕ್ಷಣ ನೀಡುವಂತೆ ಕೆಲವು ಸಂಘ ಸಂಸ್ಥೆ ಗಳೊಂದಿಗೆ ಸರ್ಕಾರಕ್ಕೆ ಮನವಿ ಮಾಡುವು ದಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತಿಳಿಸಿದರು.

ನಗರದ ಸರ್ಕಾರಿ ಅಂಧ ಮಕ್ಕಳ ಪಾಠಶಾಲೆ ಆವರಣದಲ್ಲಿ ಇನ್ನರ್‌ವ್ಹೀಲ್‌ ಆಫ್ ಮೈಸೂರು ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪೂರ್ಣ ಗೊಳಿಸಿದ ಮಕ್ಕಳಿಗೆ ತಾಂತ್ರಿಕ ಶಿಕ್ಷಣ ದೊರೆತರೆ ಉದ್ಯೋಗ ಪಡೆದು ಜೀವನ ನಿರ್ಮಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ನುಡಿದರು. ವಿಶೇಷ ಚೇತನ ಮಕ್ಕಳಲ್ಲಿ ಇತರರಿಗಿಂತಲೂ ವಿಶಿಷ್ಟವಾದ ಗ್ರಹಿಕಾ ಶಕ್ತಿ ಹೆಚ್ಚಿದೆ. ವಿಶೇಷ ಚೇತನ ಮಕ್ಕಳು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದನ್ನು ನೋಡಿದಾಗ ನನಗೆ ಬಹಳ ಸಂತೋಷ ವಾಗುತ್ತದೆ.ಈ ಮಕ್ಕಳು ಹೆಚ್ಚಿನ ಪ್ರಮಾಣ ದಲ್ಲಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಆ ನಿಟ್ಟಿನಲ್ಲಿ ನಾನು ಶಕ್ತಿ ಮೀರಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಹಿರಿಯ ರಂಗ ಕರ್ಮಿ ಬಿ.ಎಂ.ರಾಮ ಚಂದ್ರ ಮಾತನಾಡಿ, 26 ವರ್ಷದಿಂದಲೂ ನನಗೆ ಮತ್ತು ಈ ಶಾಲೆಗೆ ಉತ್ತಮ ಸಂಬಂಧವಿದೆ. ಶಾಲೆ ಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ ಮಕ್ಕಳಿಗೆ ವಸ್ತ್ರಾಲಂಕಾರ ಮಾಡುತ್ತಾ ಬಂದಿದ್ದೇನೆ ಎಂದು ಹೇಳಿದರು.

1901ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು 9 ಎಕರೆ ಭೂಮಿಯನ್ನು ಅಂಧ ಮಕ್ಕಳ ವಿದ್ಯಾಭ್ಯಾಸಕ್ಕೆಂದು ನೀಡಿ ದ್ದಾರೆ. ಆದರೆ, ಇಂದು ನಗರ ಪಾಲಿಕೆ ಯರು ಈ ಶಾಲೆ ಆವರಣದಲ್ಲಿ ವಾಟರ್‌ ಟ್ಯಾಂಕ್‌ ನಿರ್ಮಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ನಗರ ಪಾಲಿ ಕೆ ಯಿಂದ ಶಾಲೆಯ ಆವರಣದಲ್ಲಿ ಟ್ಯಾಂಕ್‌ ನಿರ್ಮಿಸಲು ಮುಂದಾಗಿರುವುದನ್ನು ತಡೆಯಬೇಕು ಎಂದು ಶಾಲೆಯ ಹಿರಿಯ ವಿದ್ಯಾರ್ಥಿಗಳ ತಂಡ ತಮ್ಮ ಸಹಿ ಸಂಗ್ರಹದ ಮೂಲಕ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್‌ ಗೆ ಮನವಿ ಸಲ್ಲಿಸಿತು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್‌.ಮಾಲಿನಿ, ಇನ್ನರ್‌ವೀಲ್‌ ಆಫ್ ಮೈಸೂರು ಸಂಸ್ಥೆಯ ಗೌರಿ ಗೋಕುಲ್‌, ಕಾರ್ಯದರ್ಶಿ ಪಲ್ಲವಿ ಅರುಣ್‌, ಡಾ.ಗೋವ ರ್ಧನ್‌, ಬಸವರಾಜು ಹಾಜರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.