ಕಪಿಲಾ ನದಿಯಲ್ಲಿ ವೈಭವದ ಶ್ರೀಕಂಠೇಶ್ವರನ ತೆಪ್ಪೋತ್ಸವ


Team Udayavani, Dec 14, 2019, 3:00 AM IST

kapila

ನಂಜನಗೂಡು: ಪಂಚ ಮಹಾರಥೋತ್ಸವ ಅಂಗವಾಗಿ ಶ್ರೀಕಂಠೇಶ್ವರನ ಸನ್ನಿಧಿಯ ಕಪಿಲಾ ನದಿಯಲ್ಲಿ ಶುಕ್ರವಾರ ಸಡಗರ, ಸಂಭ್ರಮದಿಂದ ಶ್ರೀಕಂಠೇಶ್ವರಸ್ವಾಮಿ ತೆಪ್ಪೋತ್ಸವ ಜರುಗಿತು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಈ ವೈಭವದ ಶ್ರೀಕಂಠನ ಉತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.

ಸಂಜೆ 7.30ಕ್ಕೆ ಸರಿಯಾಗಿ ದೇಗುಲದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್‌ ಅವರು ಶ್ರೀಕಂಠೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ಉತ್ಸವ ಮೂರ್ತಿಯನ್ನು ಹೂವಿನಿಂದ ಅಲಂಕೃತಗೊಳಿಸಿದ್ದಲ್ಲದೇ ಶ್ರೀಕಂಠಮುಡಿ ಧಾರಣೆಯಿಂದ ವಿಶೇಷವಾಗಿ ಕಂಗೊಳಿಸುತ್ತಿತ್ತು. ಈ ದೃಶ್ಯವನ್ನು ವೀಕ್ಷಿಸಿದ ಭಕ್ತರು ಭಾವಪರವಶರಾದರು.

ನಂತರ ವಿದ್ಯುತ್‌ ದೀಪದಿಂದ ಅಲಂಕೃತಗೊಂಡ ತೇಲುವ ವಾಹನದಲ್ಲಿ ಶ್ರೀ ಕಂಠೇಶ್ವರಸ್ವಾಮಿಯನ್ನು ಪ್ರತಿಷ್ಠಾಪಿಸಿ, ಕಪಿಲಾ ನದಿಯಲ್ಲಿ ಮೂರು ಸುತ್ತು ಪ್ರದಕ್ಷಣೆ ಮಾಡಲಾಯಿತು. ನಂಜನಗುಡಿನಾಧಿಶ್ವರ ನಂಜುಂಡಪ್ಪ ದಂಪತಿಗಳ ಈ ಜಲ ಉತ್ಸವದ ಸೊಬಗ‌ನ್ನು ಕಪಿಲಾ ನದಿ ಸ್ನಾನಘಟ್ಟದ ಸುತ್ತ ನೆರೆದಿದ್ದ ಭಕ್ತರು ಸೋಪಾನಕಟ್ಟೆ ಸೇರಿದಂತೆ ನದಿಯ ಇಕ್ಕೆಲಗಳ ದಂಡೆಯ ಮೇಲೆ ಕುಳಿತು ಕಣ್ತುಂಬಿಕೊಂಡರು.

ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜ್ಜಿಗೆ, ತೋರೆಮಾವು, ಕೆಂಪಿಸಿದ್ದನಹುಂಡಿ, ಬಸವನಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಆ ಕಡೆ ದಡದಲ್ಲಿ ನಿಂತು ಶ್ರೀಕಂಠೇಶ್ವರನ ವೈಭವದ ತಪ್ಪೋತ್ಸವವನ್ನು ವೀಕ್ಷಣೆ ಮಾಡಿ ಧನ್ಯತಾ ಭಾವ ಮೆರೆದರು. ಜಾತ್ರಾ ಮಹೋತ್ಸವ ಪ್ರಯುಕ್ತ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಮುಡಿ ಸೇವೆ ಸೇರಿದಂತೆ ವಿವಿಧ ಹರಕೆಗಳನ್ನು ತೀರಿಸಿ ಪುನೀತರಾದರು.

ಈ ಸಂದ‌ರ್ಭದಲ್ಲಿ ದೇವಾಲಯದ ನೂತನ ಕಾರ್ಯನಿರ್ವಹಕ ಅಧಿಕಾರಿ ಶಿವಕುಮಾರಯ್ಯ, ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಶಿವನಂಜು, ಸದಸ್ಯರಾದ ಶ್ರೀಧರ್‌, ಮಂಜಳಾ ಮಧು, ಇಂಧನ್‌ ಭಾಬು, ಪುಟ್ಟನಿಂಗ ಶೆಟ್ಟಿ , ಶಶಿರೇಖಾ, ದೇವಾಲಯದ ಸ್ಥಳಪುರೋಹಿತ ಸಪ್ತರ್ಷಿ ಜೋಯಿಸ್‌, ಅರ್ಚಕರಾದ ನೀಲಕಂಠ ದೀಕ್ಷಿತರು, ವಿಶ್ವಾನಾಥ ದೀಕ್ಷಿತರು, ಸದಾಶಿವು ಸೇರಿದಂತೆ ಅರ್ಚಕ ವೃಂದ ಹಾಗೂ ಅಪಾರ ಭಕ್ತ ಸಮೂಹ ನೆರೆ‌ದಿತ್ತು.

ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೋಲಿಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.