2ನೇ ದಿನ ಜ್ಯೋತಿರ್ಲಿಂಗ ದರ್ಶನಕ್ಕೆ ಜನಜಾತ್ರೆ


Team Udayavani, Feb 19, 2019, 7:40 AM IST

m2-2nedina.jpg

ತಿ.ನರಸೀಪುರ: ಕಾವೇರಿ, ಕಪಿಲೆ ಹಾಗೂ ಸ್ಫಟಿಕ ಸರೋವರದ ತ್ರಿವೇಣಿ ಸಂಘದಲ್ಲಿ ನಡೆಯುತ್ತಿರುವ 11ನೇ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಭಕ್ತರು ಪವಿತ್ರ ಸ್ನಾನದ ಜತೆಗೆ ದೇಶದ 12 ಜ್ಯೋತಿರ್ಲಿಂಗದ ದರ್ಶನ ಒಂದೇ ಕಡೆಯಲ್ಲಿ ಪಡೆಯಬಹುದಾಗಿದೆ.

ಅಗಸೆöàಶ್ವರದ ದೇವಸ್ಥಾನದ ಭಾಗದಿಂದ ತ್ರಿವೇಣಿ ಸಂಗಮಕ್ಕೆ ಬರುವ ದಾರಿಯಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ವತಿಯಿಂದ ತಿರುಮಕೂಡಲದಲ್ಲಿ ಬೃಹತ್‌ ಶಿವಲಿಂಗದ ಜತೆಗೆ ದೇಶದ ನಾನಾ ಭಾಗದಲ್ಲಿರುವ 12 ಜ್ಯೋತಿರ್ಲಿಂಗಳ ಪ್ರತಿಕೃತಿ ಸ್ಥಾಪಿಸಲಾಗಿದೆ.

ಪ್ರತಿಯೊಂದು ಲಿಂಗಕ್ಕೂ ಹೂವಿನ ಅಲಂಕಾರ: ಗುಜರಾತಿನ ಸೋಮನಾಥ, ಆಂಧ್ರದ ಶ್ರೀಶೈಲ, ಮಧ್ಯಪ್ರದೇಶದ ಮಹಾಕಾಳೇಶ್ವರ, ಮಧ್ಯಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಓಂಕಾರೇಶ್ವರ, ಬಿಹಾರದ ವೈದ್ಯನಾಥ, ಮಹಾರಾಷ್ಟ್ರದ ಪುಣೆಯಲ್ಲಿರುವ ಭೀಮಾಶಂಕರ, ತಮಿಳುನಾಡಿನ ರಾಮೇಶ್ವರ, ಗುಜರಾತಿನ ಸೌರಾಷ್ಟ್ರದ ನಾಗೇಶ್ವರ,

ಉತ್ತರ ಪ್ರದೇಶದ ಕಾಶಿವಿಶ್ವನಾಥ, ನಾಸಿಕ್‌ನ ಬ್ರಹ್ಮಗಿರಿ ಬೆಟ್ಟದಲ್ಲಿರುವ ತ್ರಯಂಬಕೇಶ್ವರ, ಉತ್ತರಾಂಚಲದ ಕೇದಾರನಾಥ, ಮಹಾರಾಷ್ಟ್ರದ ಗ್ರಿಶನೇಶ್ವರದಲ್ಲಿ ವಿಶ್ವರ ಲಿಂಗಗಳು ಯಾವ ರೀತಿ ಪ್ರತಿಷ್ಠಾಪಿಸಲ್ಪಟ್ಟಿದೆಯೋ ಅದೇ ಮಾದರಿಯಲ್ಲಿ ಇಲ್ಲಿಯೂ ಆ ಲಿಂಗಗಳ ಮರುಸೃಷ್ಟಿಸಲಾಗಿದೆ. ಪ್ರತಿಯೊಂದು ಲಿಂಗಕ್ಕೂ ಹೂವಿನ ಅಲಂಕಾರದ ಜತೆಗೆ, ಹಿನ್ನೆಲೆಯನ್ನು ಅಲ್ಲೇ ವಿವರಿಸಲಾಗಿದೆ. 

ನೀರವ ಮೌನ: ಜ್ಯೋತಿರ್ಲಿಂಗದ ದರ್ಶನದ ಒಳ ಪ್ರವೇಶ ಮಾಡುತ್ತಿದ್ದಂತೆ ನಂದಿಯ ಎದುರಿರುವ ದೊಡ್ಡ ಶಿವಲಿಂಗ ಗೋಚರವಾಗುತ್ತದೆ. ಒಳಗೆ ನೀರವ ಮೌನ, ಅಲ್ಲಿಂದ ಮುಂದೆ ಸಾಗುತ್ತಿದ್ದಂತೆ ಸೋಮನಾಥ, ಮಹಾಕಾಳೇಶದವರ, ಶ್ರೀಶೈಲದ ಮಲ್ಲಿಕಾರ್ಜುನ ಹೀಗೆ ಒಂದೊಂದೆ ಶಿವಲಿಂಗದ ದರ್ಶನವಾಗುತ್ತದೆ.  

12 ಲಿಂಗಗಳ ಬಗ್ಗೆ ಮಾಹಿತಿ: ದೇಶದ 12 ಕಡೆಗಳಲ್ಲಿ ಶಿವಲಿಂಗದ ದರ್ಶನವನ್ನು ಕುಂಭ ಮೇಳಕ್ಕೆ ಬರುವ ಭಕ್ತರಿಗಾಗಿ ಒಂದೆ ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ದೇಶದ 12 ಸ್ಥಳಗಳಿಗೆ ಹೋಗಿ ಜ್ಯೋತಿರ್ಲಿಂಗದ ದರ್ಶನ ಪಡೆಯಲು ಸಾಧ್ಯವಾಗುವುದಿಲ್ಲ.

ಎಲ್ಲೆಲ್ಲಿ ಯಾವ ರೀತಿಯ ಶಿವಲಿಂಗ ಇದೆ ಎಂಬ ಕನಿಷ್ಠ ಮಾಹಿತಿಯಾದರೂ ಇದರಿಂದ ಜನ ಸಾಮಾನ್ಯರಿಗೆ ಹಾಗೂ ಕುಂಭಮೇಳಕ್ಕೆ ಬಂದಿರುವ ಭಕ್ತರಿಗೆ ದೊರೆಯಲಿದೆ. ಅಲ್ಲದೇ, ಆ ದೇವಾಕಲಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಭಕ್ತರಿಗೆ ಇಲ್ಲಿ ನೀಡುತ್ತಿದ್ದೇವೆ ಎಂದು ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಬಿಂದು ಮಾಹಿತಿ ನೀಡಿದರು.

ಬೃಹತ್‌ ಶಿವಲಿಂಗ: ಹನ್ನೆರೆಡು ಜ್ಯೋತಿರ್ಲಿಂಗದ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಸುಮಾರು 14 ಅಡಿ ಎತ್ತರದ ಶಿವಲಿಂಗ ಎದುರಿಗೆ ಕಾಣುತ್ತದೆ. ಕಬ್ಬಿಣ ಹಾಗೂ ಫೈಬರ್‌ ಬಳಸಿ ಇದನ್ನು ನಿರ್ಮಿಸಲಾಗಿದೆ. ಶಿವಲಿಂಗಕ್ಕೆ ಸಂಪೂರ್ಣವಾಗಿ ವಿದ್ಯುತ್‌ ದೀಪದ ಅಲಂಕಾರವನ್ನು ಮಾಡಲಾಗಿದೆ.

ರೈತರಿಗೆ ಮಾಹಿತಿ: ಇತ್ತೀಚಿನ ವರ್ಷದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಮನಸ್ಸಿನ ಮೇಲಿನ ನಿಯಂತ್ರಣ ಕಡಿಮೆ ಆಗಿರುವುದೇ ಮುಖ್ಯ ಕಾರಣ. ಮನುಷ್ಯ ತನ್ನ ಮನಸ್ಸನ್ನೇ ನಿಯಂತ್ರಿಸಿಕೊಳ್ಳದಷ್ಟು ದುರ್ಬಲನಾಗುತ್ತಿದ್ದಾನೆ. ರೈತರ ಮನಸ್ಸನ್ನು ಸದೃಢಗೊಳಿಸುವ ಉದ್ದೇಶದಿಂದ ಕುಂಭಮೇಳಕ್ಕೆ ಬರುವ ರೈತರಿಗೆ ಅಗತ್ಯ ಮಾಹಿತಿ ಹಾಗೂ ಅವರ ಮನಸ್ಸನ್ನು ಸ್ಥಿರಗೊಳಿಸುವ ಉದ್ದೇಶದಿಂದ ಕೃಷಿಕರ ಸಶಕ್ತಿಕರಣ ಚಿತ್ರಪ್ರದರ್ಶನ ಏರ್ಪಡಿಸಿದ್ದೇವೆ.

ಇಲ್ಲಿ ರೈತರಿಗೆ ಸುಲಭ ಕೃಷಿ ಹಾಗೂ ಮನಸ್ಸಿನ ನಿಯಂತ್ರಣ ಎರಡರ ಬಗ್ಗೆಯೂ ಸಮಗ್ರ ಮಾಹಿತಿ ನೀಡುತ್ತೇವೆ. ರೈತರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಂಡು ಪರಿಹಾರ ಪಡೆದುಕೊಳ್ಳಲು ಅವಕಾಶ ಇದೆ ಎಂದು ಬ್ರಹ್ಮಕುಮಾರಿ ವಿವಿ  ಸಂಚಾಲಕರಲ್ಲಿ ಒಬ್ಬರಾದ ಬಿ.ಕೆ.ಪ್ರಾಣೇಶ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.