ಮಹಿಳಾ ವಿರೋಧಿ ನಿಲುವು ಪ್ರಶ್ನಿಸುವಂತಾಗಬೇಕು


Team Udayavani, Nov 25, 2019, 3:00 AM IST

mahila-viro

ಮೈಸೂರು: ನಮ್ಮ ಸಮಾಜ ಸೃಷ್ಟಿಸಿರುವ ಮಹಿಳಾ ವಿರೋಧಿ ನಿಲುವುಗಳು ಮತ್ತು ಕಟ್ಟುಪಾಡುಗಳನ್ನು ನೇರವಾಗಿ ಪ್ರಶ್ನಿಸುವ ಹಾಗೂ ಟೀಕಿಸುವ ಕೆಲಸವಾಗಬೇಕು ಎಂದು ಹಿರಿಯ ಪತ್ರಕರ್ತೆ ಮತ್ತು ಲೇಖಕಿ ಡಾ.ವಿಜಯಮ್ಮ ಹೇಳಿದರು. ಅಭಿರುಚಿ ಪ್ರಕಾಶನ ಹಾಗೂ ಸಮತಾ ಅಧ್ಯಯನ ಕೇಂದ್ರದ ವತಿಯಿಂದ ನಗರದ ಕಲಾಮಂದಿರದ ಮನೆಯಂಗಳದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀಮತಿ ಎಚ್‌.ಎಸ್‌. ಅವರ “ಸ್ತ್ರೀವಾದ ಚಿಂತನೆ ಮತ್ತು ಹೋರಾಟ’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದರು.

ಯಾರೂ ಮೇಲಲ್ಲ, ಕೀಳಲ್ಲ: ನಮ್ಮ ಸಮಾಜದಲ್ಲಿರುವ ಪಿತೃ ಪ್ರಧಾನ ವ್ಯವಸ್ಥೆ ಮಹಿಳೆಯನ್ನು ವ್ಯಾಖ್ಯಾನಿಸಿರುವ ರೀತಿ ಸರಿಯಾಗಿಲ್ಲ. ಅದನ್ನು ಪ್ರಶ್ನಿಸುವುದರ ಜತೆಗೆ ಅದರಾಚೆಗೂ ನಾವು ಗುರುತಿಸಿಕೊಳ್ಳಬೇಕಿದೆ. 70ರ ದಶಕದಿಂದೀಚೆಗೆ ರೂಪುಗೊಂಡ ಸ್ತ್ರೀವಾದ ಶಸ್ತ್ರಾಸ್ತ್ರ ಯುದ್ಧವಲ್ಲ. ಬದಲಿಗೆ ಶಾಂತಿ, ಕರುಣೆಯಿಂದ ರೂಪುಗೊಂಡಿರುವುದಾಗಿದೆ. ಹೆಣ್ಣು ಮತ್ತು ಗಂಡು ಇವರಲ್ಲಿ ಯಾರೂ ಮೇಲಲ್ಲ ಅಥವಾ ಕೀಳಲ್ಲ. ಇಬ್ಬರೂ ಮನುಷ್ಯರಾಗಿದ್ದು, ಜೊತೆ ಜೊತೆಯಲ್ಲಿ ಸಾಗಬೇಕು ಎಂದು ಹೇಳಿದರು.

ಈಗ ಒಲಿಸಿಕೊಳ್ಳುವ ಪ್ರಯತ್ನ ಅತ್ಯಂತ ಅಗತ್ಯ ಸಂಗತಿಯಾಗಿದೆ. ಪುರುಷ ಪ್ರಧಾನ ವ್ಯವಸ್ಥೆ ಮನಸ್ಸು ಯಾವುದೇ ದಿಕ್ಕಿನಲ್ಲಿ ಸಾಗುತ್ತಿದ್ದರೂ ಅದನ್ನು ಸರಿದಾರಿಗೆ ತರುವ ಅನುನಯ ಗುಣ ಮುಖ್ಯ. ಬಹಳಷ್ಟು ಪುರುಷರಿಗೆ ಸ್ತ್ರೀವಾದ ಇಂದು ಅರ್ಥ ಆಗುತ್ತಿದೆ. ಈ ಹೊತ್ತಿನಲ್ಲಿ ಅವರ ಪ್ರಜ್ಞೆಯ ಆಳಕ್ಕೆ ಸ್ತ್ರೀವಾದ ಹೋಗುವಂತೆ ನೋಡಿಕೊಳ್ಳುವ ಅಗತ್ಯವಿದೆ. ಜೊತೆಗೆ ಸಮಾಜದಲ್ಲಿ ಆಗುವ ಎಲ್ಲಾ ಬೆಳವಣಿಗೆಯನ್ನು ನಿರ್ಣಯಿಸುವ ಅರ್ಹತೆಯಲ್ಲಿ ಮಹಿಳೆಗೂ ಪಾಲು ಸಿಗಬೇಕು. ಅಲ್ಲಿಯವರೆಗೂ ನಾವು ಹೋರಾಟ ಮಾಡುತ್ತಲೇ ಇರಬೇಕು ಎಂದು ಹೇಳಿದರು.

ಕ್ಷೇತ್ರದಲ್ಲಿ ಮಹಿಳೆಯರನ್ನು ಕೆಲಸಕ್ಕೆ ಸಿದ್ಧಗೊಳಿಸಿ: ರಾಜಕೀಯ ಕ್ಷೇತ್ರದಲ್ಲಿ ಈಗ ಮಹಿಳೆಯರಿಗೆ ಅವಕಾಶ ನೀಡಿದರೂ ಸಮರ್ಥವಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ನಮಗಾಗಿ ಸೌಲಭ್ಯಗಳು ಬಂದರೆ, ಅದನ್ನು ಅವರೇ ಬಳಸಿಕೊಳ್ಳುತ್ತಾರೆ. ಮನೆ, ಹೊಲ-ಗದ್ದೆಯಲ್ಲಿ ಕೆಲಸ ಮಾಡುವ ಹೆಣ್ಣನ್ನು ಚುನಾವಣೆಯಲ್ಲಿ ಗೆಲ್ಲಿಸಿ, ಕೆಲಸ ಮಾಡಿ ಎಂದರೆ ಹೇಗೆ?

ಯಾವುದೇ ಕ್ಷೇತ್ರದಲ್ಲಿ ಮಹಿಳೆ ಕೆಲಸ ಮಾಡುವಂತೆ ಮೊದಲು ಅವರನ್ನು ಸಿದ್ಧಗೊಳಿಸಬೇಕು. ಅಲ್ಲದೇ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಗೆ ಅವಕಾಶ ನೀಡುವುದು ಒಂದು ರೀತಿಯ ಸ್ವಾರ್ಥವಿದೆ. ರಾಜಕೀಯ ಜ್ಞಾನವಿರುವವರಿಗೆ ಯಾರೂ ಅವಕಾಶ ನೀಡುವುದಿಲ್ಲ. ಬದಲಿಗೆ ಜನಪ್ರತಿನಿಧಿ ತೀರಿಕೊಂಡ ಬಳಿಕ ಆ ಸ್ಥಾನಕ್ಕೆ ಆತನ ಹೆಂಡತಿಯನ್ನು ನಿಲ್ಲಿಸಿ, ವೋಟನ್ನು ಪಡೆಯಬಹುದು ಎಂಬ ಸ್ವಾರ್ಥ ಅಡಗಿದೆ ವಿಷಾದ ವ್ಯಕ್ತಪಡಿಸಿದರು.

ಸ್ತ್ರೀ ವಾದ ವಿಸ್ಮತಿಗೆ ತಳ್ಳುವ ಕೆಲಸವಾಗುತ್ತಿದೆ: ಪುಸ್ತಕ ಕುರಿತು ಮಾತನಾಡಿದ ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕಿ ಡಾ. ಸಬಿತಾ ಬನ್ನಾಡಿ, ಸ್ತ್ರೀವಾದ ಕುರಿತು ಪೂರ್ವಗ್ರಹ ಹೊಂದಿರುವವರ ಹಾಗೂ ಸ್ತ್ರೀವಾದ ಪದ ಕೇಳುತ್ತಿದ್ದಂತೆ ನಾಪತ್ತೆಯಾಗುವವರ ಸಂಖ್ಯೆ ನಮ್ಮ ನಡುವೆ ಹೆಚ್ಚಿದೆ. ಸ್ತ್ರೀಯರೇ ಸ್ತ್ರೀ ವಾದವನ್ನು ವಿಸ್ಮತಿಗೆ ತಳ್ಳುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಎಚ್ಚರವಹಿಸಬೇಕಿದೆ.

ಕೃತಿಯ ಕತೃ ಶ್ರೀಮತಿಯವರು ತಮ್ಮ ತಜ್ಞತೆ ದಾಖಲಿಸಲು ಬರೆಯುತ್ತಿಲ್ಲ. ಹೆಣ್ಣು ಮತ್ತು ಗಂಡಿನ ಸಂಬಂಧಗಳಲ್ಲಿ ಆವರಿಸಿರುವ ಸಿಕ್ಕುಗಳನ್ನು ಬಿಡಿಸಿಕೊಂಡು ಬೆರೆಯಲು ಬೇಕಿರುವ ಹದಕ್ಕಾಗಿ ಬರೆಯುತ್ತಿದ್ದಾರೆ. ಈ ಕಾರಣದಿಂದಲೇ ಸ್ತ್ರೀವಾದದ ಮೇಲೆ ನಮಗೆ ನಂಬಿಕೆ ಇದೆ ಎಂದು ವಿಶ್ಲೇಷಿಸಿದರು. ಕೃತಿಯ ಕತೃ ಶ್ರೀಮತಿ ಎಚ್‌.ಎಸ್‌.ಮಾತನಾಡಿ, ಪಾಶ್ಚಾತ್ಯ ಸ್ತ್ರೀವಾದಿಗಳು ತಮ್ಮ ಚಿಂತನೆಯಲ್ಲಿ ಮೂರ್‍ನಾಲ್ಕು ಹಂತದಲ್ಲಿ ಬೆಳೆದಿದ್ದಾರೆ.

ಭಾರತದಲ್ಲಿ ಒಂದು ಹಂತದ ಚಿಂತನೆಯೂ ಸರಿಯಾಗಿ ಆಗಿಲ್ಲ. ಇಂದಿಗೂ ನಾವು ಹಕ್ಕುಗಳಿಗಾಗಿ ಅಹವಾಲು ಸಲ್ಲಿಸುತ್ತಾ, ಜಗಳವಾಡುವ ಹಂತದಲ್ಲೇ ಇದ್ದೇವೆ. ಬೀದಿಗಿಳಿದು ಹೋರಾಟ ನಡೆಸುವಷ್ಟೇ ತಾತ್ವಿಕ ಆಲೋಚಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವಿಮರ್ಶಕ ಪ್ರೊ.ಓ.ಎಲ್‌. ನಾಗಭೂಷಣಸ್ವಾಮಿ, ಸಮತಾ ಅಧ್ಯಯನ ಕೇಂದ್ರದ ಚಂದ್ರಮತಿ ಸೋಂದಾ, ಪ್ರಕಾಶಕ ಅಭಿರುಚಿ ಗಣೇಶ್‌ ಇದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.