ಹುಣಸೂರಲ್ಲಿ ಬಿಜೆಪಿ ಹೆಚ್ಚು ಮತ ಪಡೆದಿಲ್ಲ


Team Udayavani, May 24, 2019, 3:00 AM IST

hunsoor

ಹುಣಸೂರು: ಬಿಜೆಪಿಗರಿಗೆ ಒಂದೆಡೆ ಮೈಸೂರು-ಕೊಡಗು ಕ್ಷೇತ್ರವನ್ನು ಗೆದ್ದಿದ್ದೇವೆಂದು ಬೀಗುತ್ತಿದ್ದರೂ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ನಿರೀಕ್ಷಿತ ಲೀಡ್‌ ಪಡೆಯಲು ವಿಫಲವಾಗಿದೆ. ಕ್ಷೇತ್ರದಲ್ಲಿ ಪ್ರತಾಪಸಿಂಹ ಜಯಭೇರಿ ಬಾರಿಸಿದ್ದರೂ ಕಾಂಗ್ರೆಸ್‌ ಎಂದಿನಂತೆ ತಾಲೂಕಿನಲ್ಲಿ 3725 ಮತಗಳ ಲೀಡ್‌ ಪಡೆದಿರುವುದು ವಿಶೇಷ.

1984-1989ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸತತ 2 ಬಾರಿ ಗೆಲುವು ಸಾಧಿಸಿದ್ದರು. 30 ವರ್ಷಗಳ ನಂತರ ಇದೀಗ ಮೋದಿ ನಾಮಬಲದಿಂದ ಪ್ರತಾಪಸಿಂಹ ಸತತವಾಗಿ 2ನೇ ಬಾರಿಗೆ ಬಿಜೆಪಿಯಿಂದ ಗೆಲುವು ಸಾಧಿಸಿರುವುದು ವಿಶೇಷ.

2014-2019: ಪ್ರತಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಮುನ್ನೆಡೆ ಸಾಧಿಸಿಕೊಂಡು ಬಂದಿದ್ದು, ಈ ಬಾರಿಯೂ ಲೀಡ್‌ ಅಬಾಧಿತವಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ವಿಶ್ವನಾಥ್‌ 64,970, ಪ್ರತಾಪ್‌ಸಿಂಹ 48,582, ಜೆಡಿಎಸ್‌ನ ಚಂದ್ರಶೇಖರಯ್ಯ 34,870 ಹಾಗೂ ಬಿಎಸ್‌ಪಿ 3,225 ಮತ ಪಡೆದುಕೊಂಡು ಕಾಂಗ್ರೆಸ್‌ 16,388 ಮತಗಳ ಲೀಡ್‌ ಪಡೆದಿತ್ತು.

ಈ ಬಾರಿಯೂ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಸಿ.ಎಚ್‌.ವಿಜಯಶಂಕರ್‌ 82,493, ಬಿಜೆಪಿಯ ಪ್ರತಾಪ್‌ಸಿಂಹ 78,695 ಮತಗಳಿಸಿದ್ದಾರೆ. ಈ ಬಾರಿ ಒಟ್ಟಾರೆ ಕಾಂಗ್ರೆಸ್‌ 3,798 ಹೆಚ್ಚಿನ ಮತಗಳಿಸಿದ್ದು, ತನ್ನ ಅಸ್ತಿತ್ವ ಉಳಿಸಿಕೊಂಡಿದೆ.

ಹಿನ್ನೆಡೆಗೆ ಒಳ ಏಟು ಕಾರಣ: ಈ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರಿಂದ ಕಳೆದ ಚುನಾವಣೆಗಿಂತ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚಿನ ಲೀಡ್‌ ನಿರೀಕ್ಷಿಸಲಾಗಿತ್ತು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸೋತಿದ್ದರಿಂದ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದೇ ಕಾರಣವಾಗಿದೆ.

ಹೆಚ್ಚಿನ ಬೆಟ್ಟಿಂಗ್‌: ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಗೆಲುವಿಗಿಂತ ಹುಣಸೂರು ಕ್ಷೇತ್ರದಲ್ಲಿ ಯಾವ ಪಕ್ಷ ಹೆಚ್ಚಿನ ಮತ ಗಳಿಸುವುದೋ ಎಂಬುದರ ಮೇಲೆಯೇ ಹೆಚ್ಚಿನ ಬೆಟ್ಟಿಂಗ್‌ ನಡೆದಿದೆ. ಕಾಂಗ್ರೆಸ್‌ ನವರಿಗಂತೂ ಜೆಡಿಎಸ್‌ ಒಳ ಏಟು ನೀಡಿದರೂ ಹೆಚ್ಚು ಲೀಡ್‌ ಪಡೆದಿದ್ದೇವೆಂದು ಬೀಗುತ್ತಿದ್ದರು.

ಎರಡೂ ಪಕ್ಷಗಳ ಮುಖಂಡರು ಈ ಬಗ್ಗೆ ಕೆಸರೆರಚಾಡಿಕೊಂಡಿದ್ದರಾದರೂ ತಾಲೂಕಿನ ಜನತೆ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಪರ ಒಲವು ಇಟ್ಟುಕೊಂಡಿರುವುದು ಈ ಬಾರಿಯ ಚುನಾವಣೆಯೇ ಸಾಕ್ಷಿ. ಮೋದಿ ನಾಮಬಲ ಜೊತೆಗೆ ಹನುಮ ಜಪದಿಂದಾಗಿ ಬಿಜೆಪಿ ಮತ ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಮುಂದೆ ಯಾವ ರೀತಿಯ ತಿರುವು ಪಡೆದುಕೊಳ್ಳುವುದೋ ಕಾದು ನೋಡಬೇಕಿದೆ.

ಸಂಭ್ರಮಿಸದ ಬಿಜೆಪಿಗರು: ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದರೂ ಹುಣಸೂರು ಬಿಜೆಪಿಗರು ವಿಜಯೋತ್ಸವವಿರಲಿ, ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಮುಖಂಡರು ಮತ ಎಣಿಕೆಗೆ ತೆರಳಿದ್ದರಿಂದ ಯಾರೊಬ್ಬರೂ ಸಂಭ್ರಮಿಸಲಿಲ್ಲ.

ಹುಣಸೂರು ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯೋಗಾನಂದಕುಮಾರ್‌ ಮಾತನಾಡಿ, ಪ್ರತಿ ಚುನಾವಣೆಯಲ್ಲೂ 16-20 ಸಾವಿರ ಮತಗಳ ಅಂತರವಿರುತ್ತಿತ್ತು. ಈ ಬಾರಿ ಅಂತರ ಕಡಿಮೆಯಾಗಿದೆ ಅಲ್ಲದೆ 3ಸಾವಿರಕ್ಕಿಳಿಸಿದ್ದೇವೆ. ತಾಲೂಕಿನ ಮತದಾರರು ಜಾತ್ಯಾತೀತವಾಗಿ ಮೋದಿಯವರ ಆಡಳಿತ, ನಮ್ಮ ಸಂಸದರ ಕಾರ್ಯವೈಖರಿ ಮೆಚ್ಚಿ ಮತನೀಡಿದ್ದಾರೆ. ಕ್ಷೇತ್ರದ ಜನತೆಗೆ ಪಕ್ಷದ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ.

* ಸಂಪತ್‌ಕುಮಾರ್‌

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.