ತಳ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ


Team Udayavani, Jul 1, 2019, 3:00 AM IST

tala-sam

ಮೈಸೂರು: ದಸಂಸ ಹಲವು ರೀತಿಯ ಒಡಕುಗಳನ್ನು ತನ್ನ ಮಡಿಲಲ್ಲಿಟ್ಟುಕೊಂಡು ಸತ್ವ ಕಳೆದುಕೊಂಡಿದೆ ಎಂದು ದಸಂಸ ಮೈಸೂರು ವಿಭಾಗೀಯ ಉಪ ಪ್ರಧಾನ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಹೇಳಿದರು.

ನಗರದ ಇನ್ಸಿಟಿಟ್ಯೂಟ್‌ ಆಫ್ ಎಂಜಿನಿಯರ್‌ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಮೈಸೂರು ನಗರ ಶಾಖೆ ವತಿಯಿಂದ ಆಯೋಜಿಸಿದ್ದ “ದಲಿತರ ಸ್ಥಿತಿಗತಿಗಳ ಚಿಂತನಾ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ಹಾಗೂ ಮೈಸೂರು ನಗರ ಸಮಿತಿ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದರು.

ದಸಂಸ ಮೂಲ ಆಶಯದಂತೆ ಶೋಷಿತರ, ದೌರ್ಜನ್ಯಕ್ಕೆ ತುತ್ತಾದವರ ಬಳಿ ಹೋಗದೇ, ರಾಜಕೀಯ ನಾಯಕರ, ಉಳ್ಳವರ ಮನೆ ಬಾಗಿಲು ಕಾಯ್ದುಕೊಂಡು ನಮ್ಮಲ್ಲಿಯೇ ಜಾತಿ ರಾಜಕಾರಣ ಮಾಡುವ ಮೂಲಕ ಛಿದ್ರವಾಗಿ ತನ್ನ ಸತ್ವ ಕಳೆದುಕೊಂಡಿದೆ ಎಂದರು.

ದಸಂಸದ ಮೂಲ ಆಶಯದೊಂದಿಗೆ ಶೋಷಣೆಗೆ, ದೌರ್ಜನ್ಯಕ್ಕೆ ತುತ್ತಾಗಿರುವ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಮತ್ತೆ ದಸಂಸವನ್ನು ಮುನ್ನೆಡೆಸುವ ಅಗತ್ಯವಿದೆ ಎಂದು ತಿಳಿಸಿದರು.

ಪ್ರತಿನಿತ್ಯ ದಲಿತರು, ಶೋಷಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಹೀಗೆ ಮುಂದುವರಿದರೆ ನಮ್ಮ ಮೇಲಿನ ಶೋಷಣೆ, ದೌರ್ಜನ್ಯಕ್ಕೆ ಕೊನೆಯಿಲ್ಲದಂತಾಗುತ್ತದೆ. ಹೀಗಾಗಿ ನಮ್ಮ ರಕ್ಷಣೆಗಾಗಿ ದಸಂಸ ಮರುಹುಟ್ಟು ಪಡೆಯಬೇಕಿದ್ದು, ಯುವ ಸಮುದಾಯ ಈ ಕುರಿತು ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

ದಸಂಸ ಮುನ್ನೆಡೆಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಹೋರಾಟಕ್ಕೆ ಹೆಸರುವಾಸಿಯಾದ ಮೈಸೂರಿನಲ್ಲಿ ಒಗ್ಗಟ್ಟಿನ ಕೊರತೆ ಎದುರಾಗಿದೆ. ಹೋರಾಟ ಮಾನೋಭಾವ ಸತ್ತು ಹೋಗಿದೆ. ಪೌರಕಾರ್ಮಿಕರ ಸಂಘ, ಬಲಗೈ, ಎಡಗೈ ಅಂಗವಿಕಲರಂತಾಗಿದ್ದು, ಎಲ್ಲರೂ ಒಗ್ಗೂಡಬೇಕಿದೆ. ರಾಜಕಾರಣಿಗಳು, ಅಧಿಕಾರಿಗಳು ಭ್ರಷ್ಟರಾಗಿದ್ದು, ನಮ್ಮ ಸಮಸ್ಯೆಗಳಿಗೆ ನಾವೇ ಉತ್ತರ ಕಂಡುಕೊಳ್ಳಬೇಕಿದೆ ಎಂದರು.

ಜನಪ್ರತಿನಿಧಿಗಳು ಸಮುದಾಯದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಬೇಕು. ಇಲ್ಲವಾದರೆ, ನಿಮ್ಮ ವಿರುದ್ಧವೇ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆದಿದ್ರಾವಿಡ ಸಮಾಜದ ಹಿರಿಯ ಮುಖಂಡ ಬಿ.ಎಸ್‌.ಸುಬ್ರಹ್ಮಣ್ಯ, ದ್ರಾವಿಡರಾದ ನಾವು ದೇಶದಲ್ಲಿ ಅತಿ ಹೆಚ್ಚು ಜನಸಂಖ್ಯೆಯಿದ್ದು, ದೇಶವನ್ನು ಆಳಬೇಕಿತ್ತು. ಆದರೆ, ನಮ್ಮಲ್ಲಿನ ಒಗ್ಗಟ್ಟಿನ ಕೊರತೆಯಿಂದ ಅದು ಸಾಧ್ಯವಾಗಿಲ್ಲ. ಪೌರ ಕಾರ್ಮಿಕ ಎಂಬುದು ಅದು ಸಮಾಜವಲ್ಲ ಅದು ಹುದ್ದೆಯಾಗಿದ್ದು, ಅದು ಒಂದು ಜನಾಂಗವೆಂಬತ್ತೆ ವಿಭಜಿಸಿರುವುದು ತಪ್ಪು.

ಸಿಎಫ್ಟಿಆರ್‌ಐ, ರೈಲ್ವೆಯಲ್ಲಿ ಕೆಲಸ ಮಾಡುವವರು ಪೌರಕಾರ್ಮಿಕರ, ಹಿಂದೆ ಜಲಗಾರನೆಂದು ಆನಂತರ ಸ್ವೀಪರ್, ಸಫಾಯಿ ಎಂದು ಕರೆಯಲಾಗುತ್ತಿತ್ತು. ಇಂದು ಪೌರಕಾರ್ಮಿಕ ಎಂದು ಕರೆಯಲಾಗುತ್ತಿದ್ದು, ಇದು ಸರಿಯಲ್ಲ. ಇದರ ಬದಲಿಗೆ ಪೌರಬಂಧು ಎಂದು ಕರೆಯಲು ಸೂಚಿಸುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇನೆಂದರು.

ನಂಜನಗೂಡು ನಗರಸಭಾ ಸದಸ್ಯ ದೇವ.ಪಿ, ಕೆ.ಆರ್‌.ನಗರ ಪುರಸಭಾ ಸದಸ್ಯ ಶಂಕರ್‌, ಜಿಲ್ಲಾ ಪಜಾತಿ, ಪಂಗಡಗಳ ಜಾಗೃತಿ ಸದಸ್ಯೆ ಪುಟ್ಟಲಕ್ಷ್ಮಮ್ಮ, ಕೆ.ಆರ್‌.ನಗರ ಹೆಬ್ಟಾಳು ಸದಸ್ಯ ಎಚ್‌.ಬಿ.ದಿವಾಕರ್‌, ಜ್ಯೋತಿನಗರ ಸಿ.ಆರ್‌.ರಾಚಯ್ಯ, ಹೆಬ್ಟಾಳ್‌ ಕಾಲೋನಿ ಕೆ.ನಂಜಪ್ಪ ಬಸವನಗುಡಿ ಇತರ ಚುನಾಯಿತ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

ಶ್ರೀರಂಗಪಟ್ಟಣ ಪುರಸಭಾ ಮಾಜಿ ಅಧ್ಯಕ್ಷ ಆರ್‌.ಕೃಷ್ಣ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಕಾರ್ಯ ಬಸವಣ್ಣ, ಮೈಸೂರು ನಗರ ಸಂಚಾಲಕ ಸಿ.ಮೋಹನ್‌ಕುಮಾರ್‌ ಹೆಬ್ಬಾಳ್‌, ಜಿಲ್ಲಾ ಸಂಘಟನಾ ಸಂಚಾಲಕರಾದ ದೇವೇಂದ್ರ ಕೆ.ಎಂ.ವಾಡಿ, ಚಾಮರಾಜು ಇಲವಾಲ, ಗೋವಿಂದರಾಜು ಮತ್ತಿತರರಿದ್ದರು.

ಸಮುದಾಯದ ನೋವಿಗೆ ಸ್ಪಂದಿಸಿ: ದಲಿತರಲ್ಲಿ ಎಡ, ಬಲ, ಪೌರಕಾರ್ಮಿಕರು, ಅಲೆಮಾರಿ ಸಮುದಾಯ, ಬೋವಿ ಹೀಗೆ ಜಾತಿಗೊಂದು ಸಂಘವನ್ನು ಕಟ್ಟಿಕೊಳ್ಳುವ ಕಾರ್ಯವಾಗುತ್ತಿದ್ದು, ಇದಕ್ಕೆ ದಸಂಸ ನಾಯಕರು ಈ ಸಮುದಾಯದ ನೋವುಗಳಿಗೆ ಸ್ಪಂದಿಸದೇ, ಅವುಗಳನ್ನು ಹೊರಗಿಡುವ ಕಾರ್ಯ ಮಾಡಿರುವುದು ಕಾರಣವೆನಿಸುತ್ತದೆ. ನಾವು ಬೇರೆಯವರನ್ನು ಗೌರವಿಸದಿದ್ದರೆ, ಒಳಗೊಳ್ಳದಿದ್ದರೆ ಸಹಜವಾಗಿ ಎಲ್ಲರೂ ದೂರವಾಗುತ್ತಾರೆ ಎಂದು ದಸಂಸ ಮೈಸೂರು ವಿಭಾಗೀಯ ಉಪ ಪ್ರಧಾನ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಹೇಳಿದರು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.