ಸೇತುವೆ ನಿರ್ಮಿಸಿದ ಸೇನಾ ಕಾರ್ಯಕ್ಕೆ ಸಿಎಂ ಮೆಚ್ಚುಗೆ


Team Udayavani, Feb 20, 2019, 7:30 AM IST

m1-setyuve.jpg

ತಿ.ನರಸಿಪುರ: ಕುಂಭಮೇಳದಲ್ಲಿ ಭಾರತೀಯ ಸೇನೆಯಿಂದ ನಿರ್ಮಿಸಿದ್ದ ತೇಲುವ ಸೇತುವೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳವಾರ ಧಾರ್ಮಿಕ ಸಭೆ ಮುಗಿಸಿ, ವಾಪಾಸ ಆಗುತ್ತಿದ್ದ ಸಂರ್ಭದಲ್ಲಿ ವೇದಿಕೆಯಿಂದ ನೇರವಾಗಿ ತೇಲುವ ಸೇತುವೆ ಬಳಿಗೆ ಹೋದರು.

ಅಲ್ಲಿದ್ದ ಸೈನಿಕರನ್ನು ಮಾತನಾಡಿಸಿ, ತೆಲುವೆ ಸೇತುವೆ ನಿರ್ಮಿಸಿರುವ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸೈನಿಕರ ಜತೆ ಫೋಟೋ ಕೂಡ ತೆಗೆಸಿಕೊಂಡರು. ಅಗ್ನಿ ಶಾಮಕದಳದಿಂದ ನದಿಯಲ್ಲಿ ಭಕ್ತರ ರಕ್ಷಣೆಗೆ ವಿಶೇಷ ತಂಡಗಳನ್ನು ನೇಮಿಸಲಾಗಿತ್ತು. ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಬಂದಿದ್ದರು.  

ಇದರ ಜತೆಗೆ 125 ಸಿಬ್ಬಂದಿ, ಏಳು-ನಾಲ್ಕು ಮೋರ್ಟಾರ್‌ ಬೋಟ್‌, ಒಟ್ಟು ಏಳು ವಾಹನ, ಒಂದು ಟೋಹಿಂಗ್‌ ವೇಹಿಕಲ್, 12 ಅಡ್ವನ್ಸ್‌ ಫೋಮ್‌ ಸಿಲಿಂಡರ್‌, 100 ಲೈಫ್ ಜಾಕೆಟ್‌ ಅನ್ನು ಭದ್ರತೆಗಾಗಿ ಮುಂಚೆಯೇ ತಂದಿದ್ದರು. ಪೊಲೀಸ್‌ ಹಾಗೂ ಅಗ್ನಿಶಾಮಕ ದಳದ ಕಾರ್ಯಕ್ಕೂ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳು ಆಗಮಿಸಿದ್ದ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆ ಮಾಡಿದ್ದರಿಂದ ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ವಿಳಂಬ ಆಗಿರಬಹುದು. ಸಾರ್ವಜನಿಕರನ್ನು ನಿಯಂತ್ರಿಸುವ ದೃಷ್ಟಿಯಿಂದ ಸಿಎಂ ಆಗಮನದ ಸಂದರ್ಭದಲ್ಲಿ ತೇಲುವ ಸೇತುವೆಯಲ್ಲಿ ಸಾರ್ವಜನಿಕರು ಗುಂಜಾನರಸಿಂಹ ದೇವಸ್ಥಾನದಿಂದ ತ್ರಿವೇಣಿ ಸಂಗಮದ ಕಡೆಗೆ ಹೋಗುವುದನ್ನು ತಡೆದಿದ್ದೇವು. ಆದರೆ, ಆ ಕಡೆಯಿಂದ ಸಾರ್ವಜನಿಕರು ಗುಂಜಾನರಸಿಂಹ ದೇವಸ್ಥಾನದ ಕಡೆಗೆ ಬರಲು ಯಾವುದೇ ಅಡೆತಡೆ ಇರಲಿಲ್ಲ ಎಂದು ವಿವರಿಸಿದರು.

ಪೊಲೀಸ್‌ ನಿಯೋಜನೆ: ಮೂರು ದಿನ ಕಾಲ ನಡೆದ ಕುಂಭಮೇಳದಲ್ಲಿ ಸೋಮವಾರ ಒಂದು ಬೈಕ್‌ ಕಳವು ಹೊರತುಪಡಿಸಿ ಬೇರೆ ಯಾವುದೇ ಅಪರಾಧ ಪ್ರಕರಣ ದಾಖಲಾಗಿಲ್ಲ. ಪರ್ಸ ಕಳವು ಅಥವಾ ಸರಗಳ್ಳತನ ಕುರಿತ ಒಂದೇ ಒಂದು ದೂರು ದಾಖಲಾಗಿಲ್ಲ. ಬೈಕ್‌ ಕಳವು ಸಂಬಂಧ ತಿ.ನರಸಿಪುರ  ಪೊಲೀಸ್‌ಠಾಣೆಗೆ ದೂರ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದರು.

ಕುಂಭಮೇಳದಲ್ಲಿ ನಿರ್ಮಿಸಿದ್ದ ಪೊಲೀಸ್‌ ಸಲಹಾ ಕೇಂದ್ರದಿಂದ ಭಕ್ತರಿಗೆ ನಿರಂತರ ಸೂಚನೆ ಹಾಗೂ ಮುಂಜಾಗೃತ ಕ್ರಮದ ಬಗ್ಗೆಎಚ್ಚರಿಕೆ ನೀಡಲಾಗುತಿತ್ತು. ಅಲ್ಲದೇ ತಿರುಮಕೂಡಲು ಸುತ್ತಲೂ ಪೊಲೀಸ್‌ ನಿಯೋಜನೆ ಮಾಡಿರುವುದರಿಂದ ಯಾವುದೇ ರೀತಿಯ ಅಹಿತಕ ಘಟನೆ ನಡೆದಿಲ್ಲ ಎಂದು ಮಾಹಿತಿ ನೀಡಿದರು.

ಉಚಿತ ಆರೋಗ್ಯ ತಪಾಸಣೆ: ಕುಂಭಮೇಳ ಪ್ರಯುಕ್ತ ವೈದ್ಯಕೀಯ ಇಲಾಖೆ ಹಾಗೂ ಆಯುಷ್‌ ಇಲಾಖೆಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಸಾವಿರಾರು ಭಕ್ತರು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.