ರೈಲು ನಿಲ್ದಾಣ ಅಭಿವೃದ್ಧಿಗೆ ಸರ್ಕಾರಗಳ ತಿಕ್ಕಾಟ

ಕೇಂದ್ರದಿಂದ 16.5 ಕೋಟಿ ರೂ. ಅನುದಾನ ಬಿಡುಗಡೆ • ತಜ್ಞರ ಸಮಿತಿಯಿಂದ ಆಕ್ಷೇಪ, ಕಾಮಗಾರಿ ಸ್ಥಗಿತಗೊಳಿಸುವಂತೆ ತಾಕೀತು

Team Udayavani, May 29, 2019, 1:18 PM IST

mysuru-tdy-1..

ಮೈಸೂರು ನಗರ ರೈಲು ನಿಲ್ದಾಣದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ಪ್ರತಾಪಸಿಂಹ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಮೈಸೂರು: ಮೈಸೂರು ನಗರ ರೈಲು ನಿಲ್ದಾಣದ ಪಾರಂಪರಿಕ ಕಟ್ಟಡದ ಪುನರ್‌ ಅಭಿವೃದ್ಧಿ ವಿಚಾರ ಕೇಂದ್ರ-ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

1940ರಲ್ಲಿ ನಿರ್ಮಾಣವಾಗಿರುವ ಮೈಸೂರು ರೈಲು ನಿಲ್ದಾಣದ ಕಾಯಕಲ್ಪಕ್ಕಾಗಿ ಕೇಂದ್ರ ಸರ್ಕಾರ 16.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಈ ಹಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಸೌಕರ್ಯ ಒದಗಿಸುವ ದೃಷ್ಟಿಯಿಂದ ನೈರುತ್ಯ ರೈಲ್ವೆ ಮೈಸೂರು ವಿಭಾಗದ ವತಿಯಿಂದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ, ರೈಲ್ವೆ ಇಲಾಖೆ, ಈ ಕಾಮಗಾರಿಗೆ ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣೆಗಾಗಿ ರಚಿಸಲಾದ ತಜ್ಞರ ಸಮಿತಿ ಆಕ್ಷೇಪ ವ್ಯಕ್ತಪಡಿಸಿ, ಕಾಮಗಾರಿ ಸ್ಥಗಿತ ಗೊಳಿಸುವಂತೆ ತಾಕೀತು ಮಾಡಿದೆ.

ಪಾರಂಪರಿಕತೆಗೆ ಧಕ್ಕೆ: ಕಾಮಗಾರಿ ಹಿನ್ನೆಲೆಯಲ್ಲಿ ಮೈಸೂರು ಸಂಸದ ಪ್ರತಾಪ್‌ ಸಿಂಹ ಮಂಗಳವಾರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಮಗಾರಿ ಮುಂದುವರಿಸುವಂತೆ ಸೂಚಿಸಿದರು. ಪ್ರತಾಪ್‌ ಸಿಂಹ ಭೇಟಿ ನೀಡಿ ಹೋದ ಬೆನ್ನಲ್ಲೇ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ಜಿಲ್ಲಾಡಳಿದ ಅಧಿಕಾರಿಗಳು ಮತ್ತು ಪಾರಂಪರಿಕ ತಜ್ಞರ ಸಮಿತಿ ಸದಸ್ಯರ ಜೊತೆಗೆ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಸಚಿವ ಸಾ.ರಾ.ಮಹೇಶ್‌, ಈ ಕಾಮಗಾರಿಯಿಂದ ರೈಲು ನಿಲ್ದಾಣದ ಪಾರಂ ಪರಿಕತೆಗೆ ಧಕ್ಕೆ ಬರುತ್ತಿದ್ದು, ಕೂಡಲೇ ಕಾಮಗಾರಿ ನಿಲ್ಲಿಸುವಂತೆ ತಾಕೀತು ಮಾಡಿದರು. ಇದರಿಂದಾಗಿ ರೈಲ್ವೆ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ಸೌಂದರ್ಯ ಹೆಚ್ಚಳ: ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್‌ಸಿಂಹ, ದೇಶದ ರೈಲ್ವೆ ವ್ಯವಸ್ಥೆ ಸರಿಪಡಿಸಲು ನರೇಂದ್ರಮೋದಿ ಅವರ ಸರ್ಕಾರ ದೇಶದ 65 ಹಳೇ ನಿಲ್ದಾಣಗಳಿಗೆ ಕಾಯಕಲ್ಪ ನೀಡುವ ಸಂಬಂಧ ದೊಡ್ಡ ಪ್ರಮಾಣದಲ್ಲಿ ಅನುದಾನ ನೀಡಿದೆ. ಮೈಸೂರು ರೈಲು ನಿಲ್ದಾಣದ ಅಭಿವೃದ್ಧಿಗಾಗಿ 16.5 ಕೋಟಿ ರೂ. ಅನುದಾನ ಕೊಟ್ಟಿದೆ. ನಿಲ್ದಾಣದ ಕಟ್ಟಡದಲ್ಲಿ ಅಲ್ಲಲ್ಲಿ ಗಾರೆ ಕಿತ್ತು ಹೋಗಿದೆ. ಹೆಂಚುಗಳು ಹಾರಿ ಹೋಗಿ ಸೋರುತ್ತಿದೆ. ದುರ್ಬಲಗೊಂಡ ಗಾರೆಯಿಂದ ಕಟ್ಟಡ ಶಿಥಿಲಗೊಳ್ಳುವುದನ್ನು ತಪ್ಪಿಸಿ, ಸಂರಕ್ಷಿಸುವ ಕೆಲಸ ಕೈಗೆತ್ತಿಕೊಳ್ಳಲಾಗಿದೆ. ರೈಲು ನಿಲ್ದಾಣದ ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ತರಾಟೆಗೆ: ಇತ್ತ ಜಿಲ್ಲಾಡಳಿತ ಮತ್ತು ಪಾರಂಪರಿಕ ಸಮಿತಿ ಜೊತೆಗೆ ಭೇಟಿ ನೀಡಿದ ಸಚಿವ ಸಾ.ರಾ.ಮಹೇಶ್‌, ರೈಲು ನಿಲ್ದಾಣ ಕೇಂದ್ರ ಸರ್ಕಾರದ ಜಾಗವಾದರೂ ಅಲ್ಲಿನ ಕಟ್ಟಡಗಳನ್ನು ಸಂರಕ್ಷಣೆ ಮಾಡುವುದಷ್ಟೇ ಇಲಾಖೆ ಕೆಲಸ. ಒಂದು ಅಡಿ ವಿಸ್ತರಣೆ ಮಾಡಬೇಕೆಂದರೂ ಪಾರಂಪರಿಕ ಸಮಿತಿ ಒಪ್ಪಿಗೆ ಪಡೆಯಲೇಬೇಕು. ಮೈಸೂರು ನಗರದಲ್ಲಿ ನೂರಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿವೆ. ಎಲ್ಲರೂ ಇದೇ ರೀತಿ ಮಾಡಿದರೆ ಪಾರಂಪರಿಕ ಕಟ್ಟಡಗಳು ಎಲ್ಲಿ ಉಳಿಯುತ್ತವೆ. ಪಾರಂಪರಿಕತೆಗೆ ಧಕ್ಕೆ ತರುತ್ತಿಲ್ಲ ಎನ್ನುವ ನೀವು ಆಧುನೀಕರಣ ಕಾಮಗಾರಿಗೆ ಆಧುನಿಕ ಸಾಮಗ್ರಿ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಗರ್ಗ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಮೈಸೂರು ನಗರದಲ್ಲಿ ನೂರಕ್ಕೂ ಹೆಚ್ಚು ಕಟ್ಟಡಗಳನ್ನು ಸರ್ಕಾರ ಪಾರಂಪರಿಕ ಕಟ್ಟಡಗಳೆಂದು ಗುರುತಿಸಿದೆ. ಈ ಕಟ್ಟಡಗಳ ಸಂರಕ್ಷಣೆ ಮಾಡಬೇಕು. ವಿಸ್ತರಣೆ ಮಾಡುವುದು, ವಿರೂಪಗೊಳಿಸುವುದು ಸರಿಯಲ್ಲ. ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದ್ದರೂ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಕಾಮಗಾರಿ ನಡೆಸುತ್ತೀದ್ದೀರಿ. ಇದರಿಂದ ಕೇಂದ್ರ-ರಾಜ್ಯ ಸರ್ಕಾರದ ನಡುವೆ ಸಂಘರ್ಷ ಏರ್ಪಡಬಾರದು ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆಂದು ಸಚಿವ ಸಾ.ರಾ.ಮಹೇಶ್‌ ಹೇಳಿದರು. ಪ್ರಾದೇಶಿಕ ಆಯುಕ್ತ ಟಿ.ಕೆ.ಅನಿಲ್ಕುಮಾರ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಮುಡಾ ಆಯುಕ್ತ ಕಾಂತರಾಜ್‌, ಪುರಾತತ್ವ ಇಲಾಖೆ ಉಪ ನಿರ್ದೇಶಕಿ ನಿರ್ಮಲಾ ಮಠಪತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.