ಕಾಂಗ್ರೆಸ್‌ಗೆ ಮತ ಹಾಕಲು ತುತ್ತೂರಿ ಊದುವೆ


Team Udayavani, Apr 29, 2018, 12:39 PM IST

m6-congress.jpg

ಮೈಸೂರು: ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಮಾತ್ರ ನಮ್ಮ ಆಶಾಕಿರಣ. ಹೀಗಾಗಿ ಸಂವಿಧಾನ ಉಳಿಸಿ ಎನ್ನುವ ತುತ್ತೂರಿ ಊದುವ ಜತೆಗೆ ಕಾಂಗ್ರೆಸ್‌ಗೆ ಮತ ಹಾಕುವಂತೆ ತುತ್ತೂರಿ ಊದುತ್ತೇನೆಂದು ಮಾಧ್ಯಮ ಚಿಂತಕ ದಿನೇಶ್‌ ಅಮೀನ್‌ಮಟ್ಟು ಹೇಳಿದರು.

ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ಆಲಮ್ಮನ ಛತ್ರದ ಆವರಣದಲ್ಲಿ ಸಂವಿಧಾನ ಉಳಿಸಿ ವಿಚಾರ ಸಂಕಿರಣದ ಅಂಗವಾಗಿ ನಡೆದ ಸಾಮಾಜಿಕ-ಸಾಂಸ್ಕೃತಿಕ ಸವಾಲುಗಳು ವಿಷಯ ಕುರಿತ ಗೋಷ್ಠಿಯಲ್ಲಿ ಮಾತನಾಡಿದರು.

ಪತ್ರಿಕೆಯೊಂದರಲ್ಲಿ ಕಾಂಗ್ರೆಸ್‌ ತುತ್ತೂರಿಗಳು ಎಂದು ವರದಿಯೊಂದು ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ತುತ್ತೂರಿ ಊದಲೆಂದು ಇಲ್ಲಿಗೆ ಬಂದಿದ್ದೇನೆ. ಸಂವಿಧಾನಕ್ಕೆ ಧಕ್ಕೆ ಬಂದಾಗ ದನಿ ಎತ್ತುವುದು ನಮ್ಮ ಜವಾಬ್ದಾರಿ. ಹೀಗಾಗಿ ಸಂವಿಧಾನ ಉಳಿಸಿ ಎಂಬ ಕೂಗು ತುತ್ತೂರಿ ಎನ್ನುವುದಾದರೆ, ಬದುಕಿರುವರೆಗೆ ಆ ತುತ್ತೂರಿ ಊದುತ್ತೇನೆ ಎಂದರು.

ಚರ್ಚೆಗೆ ಸಿದ್ಧ: ಬಿಜೆಪಿ, ಜನಸಂಘ ಹಾಗೂ ಆರ್‌ಎಸ್‌ಎಸ್‌ ಇತಿಹಾಸದ ಉದ್ದಕ್ಕೂ ಸಂವಿಧಾನದ ಯಾವ ಆಶಯವನ್ನು ಜಾರಿಗೆ ತಂದಿಲ್ಲ. ಸಂವಿಧಾನ ಕುರಿತು ಗೌರವವಿದ್ದರೆ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ ಅನಂತಕುಮಾರ್‌ ಹೆಗಡೆ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕಿತ್ತು.

ಈ ಬಗ್ಗೆ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ. ದೇಶದಲ್ಲಿ ಹಲವು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಎಂದಿಗೂ ಸಂವಿಧಾನ ವಿರುದ್ಧವಾಗಿ ಮಾತನಾಡಿಲ್ಲ. ಈ ರೀತಿಯ ಯಾವುದೇ ಪ್ರಕರಣಗಳಿದ್ದರೆ ಚರ್ಚೆಗೆ ಸಿದ್ಧ ಎಂದರು.

ಸಾಹಿತಿಗಳಾದ ಡಾ.ಕೆ.ಮರಳಸಿದ್ದಪ್ಪ, ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಪ್ರೊ.ಕಾಳೇಗೌಡ ನಾಗವಾರ, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಮು, ಪ್ರಗತಿಪರ ಚಿಂತಕ ಕೆ.ಆರ್‌. ಗೋಪಾಲಕೃಷ್ಣ, ದಸಂಸ ಮುಖಂಡ ಆಲಗೂಡು ಶಿವಣ್ಣ, ರಾಜಶೇಖರ ಕೋಟೆ ಇದ್ದರು.

ಬಿಜೆಪಿ, ಮೋದಿ ವಿರುದ್ಧ ಟೀಕೆ: ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿ, ಕಾಂಗ್ರೆಸ್‌ ಬೆಂಬಲಿಸುವಂತೆ ಪರೋಕ್ಷವಾಗಿ ಚಿಂತಕ ಪ. ಮಲ್ಲೇಶ್‌ ಮನವಿ ಮಾಡಿದರು. ದೇಶಕ್ಕೆ ಪ್ರಧಾನಿಯಾಗಬೇಕಾದ ನರೇಂದ್ರ ಮೋದಿ, ಬಿಜೆಪಿ ಪ್ರಧಾನಿಯಾಗಿ, ತಮ್ಮ ಜವಾಬ್ದಾರಿ ಮರೆತಿದ್ದು, ಅವರನ್ನು ಪ್ರಶ್ನಿಸಬೇಕಿದೆ.

ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನ್ಯೂನತೆಗಳಿದ್ದರೂ ಒಳ್ಳೆಯ ಕೆಲಸಗಳನ್ನು ಮಾಡಿದೆ. ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದು, ಅವರ ವಿರುದ್ಧ ಒಂದೇ ಒಂದು ಕೆಟ್ಟ ಕಥೆ ಇಲ್ಲ. ಹೀಗಾಗಿ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯರನ್ನು ಟೀಕಿಸಲು ಯಾವುದೇ ವಿಷಯವಿಲ್ಲ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಚುನಾವಣಾಧಿಕಾರಿ ತಡೆ: ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದ್ದ ಕಾರಣಕ್ಕೆ ಚುನಾವಣಾಧಿಕಾರಿಗಳು ಕಾರ್ಯಕ್ರಮಕ್ಕೆ ತಡೆಯೊಡ್ಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಸ್ಥಳಕ್ಕಾಗಮಿಸಿದ ಚುನಾವಣಾಧಿಕಾರಿಗಳು, ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸುವಂತೆ ಆಯೋಜಕರಿಗೆ ತಾಕೀತು ಮಾಡಿದರು.

ಆಯೋಜಕರು ರದ್ದುಪಡಿಸಲು ಆಕ್ಷೇಪ ವ್ಯಕ್ತಪಡಿಸಿದರೂ ಕೇಳದೆ, ಕೂಡಲೇ ನಿಲ್ಲಿಸಬೇಕೆಂದು ತಾಕೀತು ಮಾಡಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗಾಗಿ ತಯಾರಿಸಿದ್ದ ಊಟದ ವಿತರಣೆಗೂ ಅಧಿಕಾರಿಗಳು ಅಡ್ಡಿಪಡಿಸಿದರು. ಕೊನೆಗೆ ಪೊಲೀಸರ ಎದುರು ಊಟ ಬಡಿಸಲು ಅವಕಾಶ ನೀಡಲಾಯಿತು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.