ಸಿದ್ದು ನಿರ್ಧಾರಕ್ಕಾಗಿ ಕಾದಿದೆ ಕಾಂಗ್ರೆಸ್‌


Team Udayavani, Jul 24, 2018, 12:19 PM IST

m1-siddu.jpg

ಮೈಸೂರು: ಲೋಕಸಭಾ ಚುನಾವಣೆಗೆ ಹತ್ತು ತಿಂಗಳಿರುವಾಗಲೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಮತದಾರರ ಮನೆಬಾಗಿಲು ತಲುಪುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಎದುರು ನೋಡುತ್ತಿದೆ. ಎಂದಿನಂತೆ ಜೆಡಿಎಸ್‌ ಪಕ್ಷದ್ದು ಕಾದು ನೋಡುವ ತಂತ್ರ.

ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಮೇಲಿನ ಅಸಮಾಧಾನದಿಂದ ಕಾಂಗ್ರೆಸ್‌ ನಿಂದ ಹೊರನಡೆದ ಎಚ್‌.ವಿಶ್ವನಾಥ್‌ ಅವರ ಸ್ಥಾನ ತುಂಬಲು ಅದೇ ಕುರುಬ ಸಮುದಾಯದ ಸಿ.ಎಚ್‌.ವಿಜಯಶಂಕರ್‌ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವ ಭರವಸೆಯೊಂದಿಗೆ ಪಕ್ಷಕ್ಕೆ ಕರೆತಂದಿದ್ದಾರೆ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಐಸಿಸಿ ಮಟ್ಟದಲ್ಲಿ ಪ್ರಭಾವಿಯಾಗಿರುವ ಸಿದ್ದರಾಮಯ್ಯ ಅವರ ಮಾತೇ ಇಲ್ಲಿ ಅಂತಿಮ. ಈ ವಿಧಾನಸಭೆ ಚುನಾವಣೆಯೇ ನನ್ನ ಕಡೇ ಚುನಾವಣೆ, ಮುಂದೆ ಬ್ರಹ್ಮ ಬಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದಾರೆ. ಚುನಾವಣೆ ಹತ್ತಿರವಾದಂತೆ ಯಾವ ನಿಲುವು ತಾಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ಬೇಡದ ವಿಚಾರಗಳಿಗೆ ಸುದ್ದಿಯಾಗುತ್ತಿದ್ದ ಸಂಸದ ಪ್ರತಾಪ್‌ ಸಿಂಹ ಅವರು ಸಂಪರ್ಕ್‌ ಫಾರ್‌ ಸಮರ್ಥನ್‌ ಹೆಸರಲ್ಲಿ ಕಳೆದ ಒಂದು ತಿಂಗಳಿಂದ ಕ್ಷೇತ್ರದಾದ್ಯಂತ ನಿರಂತರ ಪ್ರವಾಸ ಕೈಗೊಂಡು ಕೇಂದ್ರ ಸರ್ಕಾರದ ಸಾಧನೆಗಳ ವಿವರವುಳ್ಳ ಕಿರುಹೊತ್ತಿಗೆಯನ್ನು ವಿವಿಧ ಕ್ಷೇತ್ರಗಳ ಗಣ್ಯರಿಗೆ ತಲುಪಿಸುವ ಮೂಲಕ ಈಗಾಗಲೇ ಒಂದು ಸುತ್ತಿನ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಜೆಡಿಎಸ್‌ ಮಾತ್ರ ದೋಸ್ತಿ ಸರ್ಕಾರವನ್ನು ಮುನ್ನಡೆಸುವಲ್ಲಿ ಹೈರಾಣಾಗಿದ್ದು, ಲೋಕಸಭಾ ಚುನಾವಣೆಗೆ ಯಾವುದೇ ಸಿದ್ಧತೆಯಲ್ಲಿ ತೊಡಗಿಲ್ಲ. ಬದಲಿಗೆ ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷಗಳು ಸಿದ್ದರಾಮಯ್ಯ ಅವರ ನಿರ್ಧಾರವನ್ನು ಎದುರು ನೋಡುತ್ತಿವೆ.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಪ್ರಾಬಲ್ಯವಿದ್ದರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗಿಲ್ಲ. 1996ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್‌ ಅಭ್ಯರ್ಥಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ವಿರುದ್ಧ 2.46 ಲಕ್ಷ ಮತಗಳನ್ನು ಪಡೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟರೆ, 2.58 ಲಕ್ಷ ಮತಗಳಿಸಿದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಗೆಲುವಿನ ನಗೆ ಬೀರಿದ್ದರು.

2004ರ ಚುನಾವಣೆಯಲ್ಲಿ 3.16 ಲಕ್ಷ ಮತಗಳೊಂದಿಗೆ ಜಯ ಸಾಧಿಸಿದ ಬಿಜೆಪಿಯ ಸಿ.ಎಚ್‌.ವಿಜಯಶಂಕರ್‌ ವಿರುದ್ಧ ಜೆಡಿಎಸ್‌ನ ಎ.ಎಸ್‌.ಗುರುಸ್ವಾಮಿ 3.06 ಲಕ್ಷ ಮತಗಳಿಸಿ 2ನೇ ಸ್ಥಾನಗಳಿಸಿದ್ದು ಬಿಟ್ಟರೆ, ಇನ್ನುಳಿದ ಚುನಾವಣೆಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಕಾಂಗ್ರೆಸ್‌ ಭದ್ರಕೋಟೆ: ಸ್ವಾತಂತ್ರಾ ನಂತರ 1951ರಲ್ಲಿ ನಡೆದ ಮೊದಲ ಚುನಾವಣೆಯಿಂದಲೂ ಈ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಮೊದಲ ಚುನಾವಣೆಯಲ್ಲಿ ದ್ವಿಸದಸ್ಯ ಕ್ಷೇತ್ರವಾಗಿದ್ದಾಗ ಕಾಂಗ್ರೆಸ್‌ನ ಎನ್‌.ರಾಚಯ್ಯ ಹಾಗೂ ಕೆಎಂಪಿಯ ಎಂ.ಎಸ್‌.ಗುರುಪಾದಸ್ವಾಮಿ ಆರಿಸಿ ಬಂದಿದ್ದರು. 1957ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್‌.ಎಂ.ಸಿದ್ದಯ್ಯ ಹಾಗೂ ಎಂ.ಶಂಕರಯ್ಯ ಗೆಲುವು ಸಾಧಿಸಿದ್ದರು.

1962ರಲ್ಲಿ ಮೈಸೂರು ಏಕ ಸದಸ್ಯ ಕ್ಷೇತ್ರವಾದಾಗ ಕಾಂಗ್ರೆಸ್‌ನ ಎಂ.ಶಂಕರಯ್ಯ ಗೆಲುವು ಸಾಧಿಸಿದ್ದರು. ನಂತರ 1967 ರಿಂದ 77ರವರೆಗೆ ಸತತ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್‌ನ ತುಳಸೀದಾಸಪ್ಪ ಆರಿಸಿ ಬಂದಿದ್ದರು. 1980ರಲ್ಲಿ ಕಾಂಗ್ರೆಸ್‌ನ ಎಂ.ರಾಜಶೇಖರ ಮೂರ್ತಿ ಗೆಲುವು ಸಾಧಿಸಿದರೆ, 1984, 89, 96,99ರಲ್ಲಿ ಕಾಂಗ್ರೆಸ್‌ನಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಜಯಗಳಿಸಿದ್ದರು. 1991ರ ಚುನಾವಣೆಯಲ್ಲಿ ಚಂದ್ರಪ್ರಭಾ ಅರಸು ಆರಿಸಿಬಂದಿದ್ದರು. 

ಬಿಜೆಪಿಗೂ ಬಲ: 1998ರ ಚುನಾವಣೆಯಲ್ಲಿ ಬಿಜೆಪಿಯ ಸಿ.ಎಚ್‌.ವಿಜಯಶಂಕರ್‌ 3.55 ಲಕ್ಷ ಮತಗಳಿಸಿ ಆಯ್ಕೆಯಾಗುವ ಮೂಲಕ ಮೊಟ್ಟ ಮೊದಲ ಬಾರಿಗೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಮಲ ಅರಳಿಸಿದ್ದರು. 1999ರರಲ್ಲಿ ಕಾಂಗ್ರೆಸ್‌ನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಗೆಲುವು ಸಾಧಿಸಿದ್ದರು.

2004ರ ಚುನಾವಣೆಯಲ್ಲಿ ಬಿಜೆಪಿಯ ಸಿ.ಎಚ್‌.ವಿಜಯಶಂಕರ್‌ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. 2009ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಡಗೂರು ಎಚ್‌.ವಿಶ್ವನಾಥ್‌ 3.54 ಲಕ್ಷ ಮತಗಳಿಸಿ ಆಯ್ಕೆಯಾದರೆ, ಬಿಜೆಪಿಯ ಸಿ.ಎಚ್‌.ವಿಜಯಶಂಕರ್‌ 3.47 ಲಕ್ಷ ಮತಗಳಿಸಿ ಸುಮಾರು 7 ಸಾವಿರ ಮತಗಳ ಅಂತರದಿಂದ ಸೋಲುಕಾಣಬೇಕಾಯಿತು.

ಹೊಸ ಮುಖ: 2014ರ ಚುನಾವಣೆಯಲ್ಲಿ ಬಿಜೆಪಿ ಎರಡು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಿ.ಎಚ್‌.ವಿಜಯಶಂಕರ್‌ ಅವರನ್ನು ಹಾಸನ ಕ್ಷೇತ್ರದ ಅಭ್ಯರ್ಥಿಯಾಗಿ ಸಾಗಹಾಕಿ, ರಾಜಕೀಯಕ್ಕೆ ಹೊಸಬರಾದ ಪತ್ರಕರ್ತ ಪ್ರತಾಪ್‌ಸಿಂಹ ಅವರನ್ನು ಕಣಕ್ಕಿಳಿಸಿತು.

ಹಾಲಿ ಸಂಸದರಾಗಿದ್ದ ಅಡಗೂರು ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ ಅಭ್ಯರ್ಥಿ. ಜೆಡಿಎಸ್‌ ನಿವೃತ್ತ ನ್ಯಾಯಾಧೀಶ ಚಂದ್ರಶೇಖರಯ್ಯ ಅವರನ್ನು ಕಣಕ್ಕಿಳಿಸಿ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡಿದ್ದರಿಂದ ಕ್ಷೇತ್ರದ ಪರಿಚಯವೇ ಇಲ್ಲದಿದ್ದ ಪ್ರತಾಪ್‌ ಸಿಂಹ, ಎಚ್‌.ವಿಶ್ವನಾಥ್‌ ವಿರುದ್ಧ ಗೆಲುವು ಸಾಧಿಸಿದ್ದರು.

ಕ್ಷೇತ್ರ ಪರಿಚಯ: ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ, ಚಾಮರಾಜ, ಹುಣಸೂರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಗಳು. ಕ್ಷೇತ್ರ ಪುನರ್‌ವಿಂಗಡಣೆ ನಂತರ ದಕ್ಷಿಣ ಕನ್ನಡ(ಮಂಗಳೂರು) ಲೋಕಸಭಾ ಕ್ಷೇತ್ರದಿಂದ ಮೈಸೂರು ಕ್ಷೇತ್ರಕ್ಕೆ ಸೇರಿರುವ ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತವೆ.

ಈ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೂ ಸಚಿವ ಸಾ.ರಾ.ಮಹೇಶ್‌ ಅವರು ಪ್ರತಿನಿಧಿಸುವ ಕೆ.ಆರ್‌.ನಗರ, ಅಶ್ವಿ‌ನ್‌ ಕುಮಾರ್‌ ಅವರ ತಿ.ನರಸೀಪುರ, ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿರುವ ವರುಣಾ ಮತ್ತು ಎಚ್‌.ಡಿ.ಕೋಟೆ, ಬಿಜೆಪಿ ಶಾಸಕರಿರುವ ನಂಜನಗೂಡು ಕ್ಷೇತ್ರಗಳು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಕ್ಷೇತ್ರವ್ಯಾಪ್ತಿಯಲ್ಲಿ ಬಿಜೆಪಿಯ ನಾಲ್ವರು ಶಾಸಕರು, ಜೆಡಿಎಸ್‌ನ ಮೂವರು ಶಾಸಕರಿದ್ದರೆ, ಕಾಂಗ್ರೆಸ್‌ನ ಒಬ್ಬರೇ ಶಾಸಕರಿದ್ದಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.