ಅರ್ಜಿಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಗಡುವು


Team Udayavani, Feb 20, 2022, 9:22 AM IST

ಅರ್ಜಿಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಗಡುವು

ಕೆ.ಆರ್‌.ನಗರ: ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳು ಮತ್ತು ಈಗ ನೀಡುತ್ತಿರುವ ದೂರುಗಳನ್ನು15 ದಿನದೊಳಗಾಗಿ ಇತ್ಯರ್ಥ ಮಾಡದಿದ್ದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಎಚ್ಚರಿಕೆ ನೀಡಿದರು.

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮಪಂಚಾಯ್ತಿ ಕಚೇರಿಯ ಆವರಣದಲ್ಲಿ ಶನಿವಾರ ನಡೆದಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮದಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೂಡಲಬೀಡು, ಕಾಟ್ನಾಳು, ರಾಂಪುರ ಗ್ರಾಮಗಳಲ್ಲಿ ಜನಸ್ಪಂದನಾ ನಡೆಸಿ ನಂತರ ಕರ್ಪೂರವಳ್ಳಿಯಲ್ಲಿಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿ ಅವರು ಮಾತನಾಡಿದರು.

ನ್ಯಾಯಾಲಯದ ವ್ಯಾಜ್ಯಗಳು ಮತ್ತು ಕೆಲವು ಕಾನೂನು ತೊಡಕುಗಳ ಅರ್ಜಿಗಳನ್ನು ಬಿಟ್ಟು ಉಳಿದ ಎಲ್ಲಾ ದೂರುಗಳನ್ನು ಸ್ಥಳೀಯ ಮಟ್ಟದ ಅಧಿಕಾರಿಗಳೇ ಇತ್ಯರ್ಥ ಮಾಡಬೇಕು ಎಂದು ತಿಳಿಸಿದರು.

ಸೌಲಭ್ಯ ತಲುಪಿಸಿ: ಕಾರ್ಮಿಕ ಇಲಾಖೆಯ ಅಧಿಕಾರಿಯೂ ಸಕಾಲದಲ್ಲಿ ಕಾರ್ಮಿಕರಿಗೆ ಪರಿಹಾರಮತ್ತು ಸವಲತ್ತುಗಳನ್ನು ನೀಡುತ್ತಿಲ್ಲ ಎಂಬ ನಾಗರಿಕರ ದೂರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದಕಾರ್ಮಿಕ ಇಲಾಖೆ ಅಧಿಕಾರಿಗೆ ಇನ್ನು 20ದಿನದೊಳಗಾಗಿ ಅವರ ಪರಿಹಾರ ಕಾರ್ಮಿಕರಿಗೆಸವಲತ್ತುಗಳನ್ನು ನೀಡಬೇಕು. ಇಲ್ಲದಿದ್ದಲ್ಲಿ ನಿಮ್ಮವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂಪಶುಸಂಗೋಪನಾ ಇಲಾಖೆಯ ವತಿಯಿಂದ ರೈತರಜಾನುವಾರುಗಳಿಗೆ ಔಷಧಗಳನ್ನು ನೀಡದೆ ಖಾಸಗಿ ಔಷಧಿ ಅಂಗಡಿಗಳಿಗೆ ಕಳಿಸುತ್ತಾರೆ ಎಂಬ ದೂರಿಗೆ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಶೀಘ್ರ ಔಷಧಿಗಳನ್ನು ಸರಬರಾಜು ಮಾಡುವಂತೆ ಸೂಚಿಸಿದರು.

ಕಾರ್ಯಕ್ರಮದ ಉದ್ದಕ್ಕೂ ಸ್ಥಳೀಯ ಸಮಸ್ಯೆಗಳೇಕೇಳಿ ಬಂದವು. ರೈತರಿಗೆ ಸಮಯಕ್ಕೆ ಸರಿಯಾಗಿವಿದ್ಯುತ್‌ ಸರಬರಾಜು ಮಾಡುತ್ತಿಲ್ಲ. ಭತ್ತ ಮತ್ತು ರಾಗಿಖರೀದಿ ಕೇಂದ್ರದಲ್ಲಿ ರೈತರಿಗೆ ಅಧಿಕಾರಿಗಳು ಮತ್ತುಮಧ್ಯವರ್ತಿಗಳು ಹಾಗೂ ರೈಸ್‌ಮಿಲ್‌ ಮಾಲಿಕರುಮೋಸ ಮಾಡುತ್ತಿರುವುದನ್ನು ಎಳೆಎಳೆಯಾಗಿ ಜಿಲ್ಲಾಧಿಕಾರಿಗಳ ಹತ್ತಿರ ತಿಳಿಸಿದರು.

ಕೆರೆ ಕಟ್ಟೆಗಳು ಒತ್ತುವರಿಯಾಗಿರುವುದನ್ನು ಬಿಡಿಸಬೇಕೆಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ವರದಿ ನೀಡುವಂತೆಸೂಚಿಸಿದರು. ಇದೇ ಸಂದರ್ಭದಲ್ಲಿ ಸಾಲಿಗ್ರಾಮತಾಲೂಕು ನಾಯಕ ಸಮಾಜಕ್ಕೆ ವಾಲ್ಮೀಕಿಸಮುದಾಯಕ್ಕೆ ಸ್ಥಳ ನೀಡುವಂತೆ ತಹಶೀಲ್ದಾರ್‌ ಅವರಿಗೆ ಸೂಚಿಸಿದರು.

ಜಿಪಂ ಸಿಇಒ ಎ.ಎಂ.ಯೋಗೇಶ್‌, ಉಪವಿ ಭಾಗಾಧಿಕಾರಿ ವರ್ಣಿತ್‌ಯೋಗಿ, ತಹಶೀಲಾರರಾದ ಎಸ್‌.ಸಂತೋಷ್‌, ಕೆ.ಎನ್‌.ಮೋಹನ್‌ಕುಮಾರ್‌, ಇಒ ಎಚ್‌.ಕೆ.ಸತೀಶ್‌. ಬಿಇಒ ಟಿ.ಎನ್‌.ಗಾಯಿತ್ರಿ. ಗ್ರಾ.ಪಂ. ಪ್ರಭಾರ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಒ ರಾಜಕುಮಾರ್‌, ವೃತ್ತ ನಿರೀಕ್ಷಕ ಆರ್‌.ಶ್ರೀಕಾಂತ್‌,ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್‌, ತೋಟಗಾರಿಗೆ ಹಿರಿಯ ಸಹಾಯಕನಿರ್ದೇಶಕ ಎನ್‌.ಪ್ರಸನ್ನ, ಕೃಷಿ ನಿರ್ದೆಶಕ ಗುರುಪ್ರಸಾದ್‌ ಮತ್ತುತರರು ಹಾಜರಿದ್ದರು.

ಇನ್ನು ಸುಮ್ಮನಿರಲು ಸಾಧ್ಯವಿಲ್ಲ: ಸಾರಾ ಮಹೇಶ್‌ :

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಸಾ.ರಾ.ಮಹೇಶ್‌, ನಾನು ನಿತ್ಯ ಪ್ರತಿ ಗ್ರಾಮದಲ್ಲಿಯೂ ಸಭೆ ಮತ್ತುಕಾರ್ಯಕ್ರಮಗಳಲ್ಲಿ ಜನರ ಕೆಲಸ ಮಾಡುವಂತೆ ತಿಳಿಸಿದರೂ ಬೇಜವಾಬ್ದಾರಿತನದಿಂದ ನಾಗರಿಕರುಮತ್ತು ರೈತರನ್ನು ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ. ತಾಲೂಕಿನಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು ಎಂದು ಸುಮ್ಮನಿದ್ದೇನೆ. ಒಂದಿಬ್ಬರವಿರುದ್ಧ ಕ್ರಮ ಜರುಗಿಸಿದರೆ ಆಗ ಸರಿ ಹೋಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಣ್ಣಪುಟ್ಟ ಸಮಸ್ಯೆ ಬಗ್ಗೆಯೂ ಅಧಿಕಾರಿಗಳ ನಿರ್ಲಕ್ಷ್ಯ :

ಸ್ಥಳೀಯ ಮಟ್ಟದಲ್ಲಿ ಹಲವಾರು ಕುಂದು ಕೊರತೆಗಳಿವೆ. ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ವೃದ್ಧಾಪ್ಯ ವೇತನ, ವಿಧವಾವೇತನ, ಸಂಧ್ಯಾಸುರಕ್ಷಾ ಮತ್ತಿತರಮಾಶಾನಗಳು, ಇ-ಸ್ವತ್ತು ಕುಟುಂಬದಲ್ಲಿ ತಾತ ಮುತ್ತಾತರಿಂದ ಬಂದ ಆಸ್ತಿಗಳನ್ನು ಹಂಚಿಕೊಳ್ಳುವಸಂದರ್ಭದಲ್ಲಿ ಉಂಟಾಗಿರುವ ಸಮಸ್ಯೆಗಳು, ಪೌತಿಖಾತೆ, ಖಾತೆ ವರ್ಗಾವಣೆ ಸೇರಿದಂತೆ ಇನ್ನಿತರ ಸಣ್ಣ ಪುಟ್ಟಕೆಲಸಗಳನ್ನು ಮಾಡದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಸ್ಥಳದಲ್ಲಿದ್ದ ತಹಶೀಲ್ದಾರ್‌, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ತಕ್ಷಣ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.