ಹುಣಸೂರು: ಸೋಲಾರ್ ಬೇಲಿಗೆ ಸಿಲುಕಿ ಆನೆ ಸಾವು
Team Udayavani, Sep 13, 2021, 9:06 PM IST
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಅಂಚಿನ ಕಾಫಿ ತೋಟದ ಸೋಲಾರ್ ಬೇಲಿಗೆ ಸಿಲುಕಿ ಸುಮಾರು 30-35 ವರ್ಷದ ಸಲಗವೊಂದು ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನವನದ ಹುಣಸೂರು ವಲಯದ ದೊಡ್ಡ ಹರವೆ ಶಾಖೆ ಕಾವೇರಿ ಬ್ಲಾಕ್ ಅರಣ್ಯ ಪ್ರದೇಶದ ಕಾಡಂಚಿನ ಸನ್ನಿ ಜೋಸೆಫ್ರ ಪುತ್ರ ಜೈಸನ್ ಸನ್ನಿ ಎಂಬುವವರ ಕಾಫಿ ತೋಟದಲ್ಲಿ ಅಕ್ರಮವಾಗಿ ಅಳವಡಿಸಿದ್ದ ಸೋಲಾರ್ ಫೆನ್ಸಿಂಗ್ನ ವಿದ್ಯುತ್ ತಂತಿಗೆ ತಗುಲಿ ಆನೆ ಸಾವನ್ನಪ್ಪಿದೆ.
ವಿಷಯ ತಿಳಿದು ಸ್ಥಳಕ್ಕೆ ಹುಣಸೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್, ಆರ್.ಎಫ್.ಓ.ಹನುಮಂತರಾಜು, ಬೈಕುಪ್ಪೆ ಠಾಣೆಯ ವೃತ್ತ ವೃತ್ತ ನಿರೀಕ್ಷಕ ಬಿ.ಜಿ.ಪ್ರಕಾಶ್, ಚೆಸ್ಕಾಂನ ಎ.ಇ.ಇ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರಣ್ಯ ಇಲಾಖೆ ಪಶುವೈದ್ಯ ಡಾ.ವಾಸಿಂ ಮಿರ್ಜಾ ಸಲಗದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಜಮೀನಿನ ಮಾಲಿಕ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರೆಕಾಡು ಸಿದ್ದಾಪುರದ ಜೈಸನ್ಸನ್ನಿ ಹಾಗೂ ಮೇಲ್ವಿಚಾರಕ ಶೇಷಪ್ಪ ಹಾಗೂ ಸೋಮವಾರ ಪೇಟೆಯ ಅಬೇತ್ಮಂಗಲರ ವಿರುದ್ದ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..