16 ಹಳ್ಳಿಗಳ ಜನರು ಸೇರಿ ಆಚರಿಸುವ ದೊಡ್ಡಹೆಜ್ಜೂರು ಜಾತ್ರೆ ಇಂದು


Team Udayavani, Jan 16, 2020, 3:00 AM IST

16haklliga

ಹುಣಸೂರು: ತಾಲೂಕಿನ ದೊಡ್ಡಹೆಜ್ಜೂರಿನ ಇತಿಹಾಸ ಪ್ರಸಿದ್ಧ ರಾಮಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಗುರುವಾರ ರಥೋತ್ಸವ ಹಾಗೂ ಶುಕ್ರವಾರ ತೆಪ್ಪೋತ್ಸವ ಜರುಗಲಿದೆ. 16 ಹಳ್ಳಿಗಳ ಭಕ್ತರು ಸೇರಿ ಈ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವುದು ವಿಶೇಷವಾಗಿದೆ. ಪ್ರತಿ ಹಳ್ಳಿಯವರೂ ಒಂದೊಂದು ಜವಾಬ್ದಾರಿ ವಹಿಸಿಕೊಳ್ಳುವರು.

ದೊಡ್ಡಹೆಜ್ಜೂರು ನಾಗರಹೊಳೆ ಉದ್ಯಾನದಂಚಿನ ಲಕ್ಷ್ಮಣ ತೀರ್ಥ ನದಿಯ ದಂಡೆ ಮೇಲಿದ್ದು, ಶ್ರೀ ರಾಮಂಜನೇಯಸ್ವಾಮಿ ದೇವಾಲಯದಲ್ಲಿ ಸಂಪ್ರದಾಯದಂತೆ ಸಂಕ್ರಾಂತಿ ಮರು ದಿನ ರಥೋತ್ಸವ ನಡೆಯಲಿದೆ. ಚುಂಚನಕಟ್ಟೆ ಶ್ರೀ ರಾಮದೇವರ ರಥೋತ್ಸವದಂದು ಇಲ್ಲೂ ರಥೋತ್ಸವ ನಡೆಯುವುದೇ ವಿಶೇಷ. ಈ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರಿಂದ ಇದು ಕಾಡು ಕುರುಬರ ಜಾತ್ರೆ ಎಂದು ಕರೆಯಲಾಗುತ್ತದೆ.

ಭಕ್ತರ ಹರಕೆ: ಹುಣಸೂರು, ಎಚ್‌.ಡಿ ಕೋಟೆ ತಾಲೂಕಿನ ಹರಕೆ ಹೊತ್ತ ಮಂದಿ 3-4 ದಿನ ಮೊದಲೇ ಆಗಮಿಸಿ ಪರ ನಡೆಸುವರು. ಹರಕೆ ಹೊತ್ತ ಭಕ್ತರು ಮುಡಿ ಕೊಡುತ್ತಾರೆ. ರಥೋತ್ಸವದ ಮಾರನೇ ದಿನ ರೋಗಗಳು ಬಾರದಂತೆ ಹರಕೆ ಹೊತ್ತವರು ರಾಸುಗಳನ್ನು ಕರೆತಂದು ದೇವಾಲಯದ ಸುತ್ತ ಮೆರವಣಿಗೆ, ಪಂಜಿನ ಸೇವೆ ನಡೆಸಿ ಪ್ರಾರ್ಥಿಸುವರು.

ನದಿ ದಂಡೆ ಮೇಲೆ ಭೋಜನ: ಜಾತ್ರೆಗೆ ಆಗಮಿಸುವ ಬಹುತೇಕ ಭಕ್ತರು ಜೊತೆಯಲ್ಲಿ ತರುವ ವಿಶೇಷ ತಿಂಡಿ-ಊಟವನ್ನು ಲಕ್ಷ್ಮಣತೀರ್ಥ ನದಿ ದಂಡೆಯಲ್ಲಿ ಸಾಮೂಹಿಕ ಬೋಜನ ಮಾಡುವುದು ವಿಶೇಷ. ಈ ಬಾರಿ ನದಿ ಹಾಗೂ ಕೆರೆಯಲ್ಲಿ ನೀರು ಸಾಕಷ್ಟಿರುವುದರಿಂದ ಭಕ್ತರು ನಿರಾಳರಾಗಿದ್ದಾರೆ. ಹುಣಸೂರು-ಹನಗೋಡಿನಿಂದ ದೊಡ್ಡ ಹೆಜ್ಜೂರು ಜಾತ್ರೆಗೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ. ಹನಗೋಡು ರೋಟರಿ ಕ್ಲಬ್‌ವತಿಯಿಂದ ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನ ಕಾಮಗಾರಿ: ಪುರಾತನ ದೇವಾಲಯವನ್ನು ಕೆಡವಿ ಹೊಸ ದೇವಾಲಯ ನಿರ್ಮಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ವೀರಾಂಜನೇಯಸ್ವಾಮಿಯ ಕಲ್ಲಿನ ವಿಗ್ರಹವನ್ನು ಹಾಗೇ ಉಳಿಸಿಕೊಂಡಿದ್ದು, ಪಕ್ಕದಲ್ಲೇ ಬಾಲ ಮಂದಿರ ನಿರ್ಮಿಸಿ ತಾಮ್ರದ ಬಿಂದಿಗೆಯಲ್ಲಿ ಬೃಹತ್‌ ಕಳಶ ನಿರ್ಮಿಸಲಾಗಿದ್ದು, ಅಲ್ಲಿಯೇ ಪೂಜೆ ನೆರವೇರಲಿದೆ.

ಯಾವ ಯಾವ ಹಳ್ಳಿಗಳಿಗೆ ಯಾವ ಜವಾಬ್ದಾರಿ?: ದೊಡ್ಡಹೆಜ್ಜೂರಿನ ಇತಿಹಾಸ ಪ್ರಸಿದ್ಧ ರಾಮಂಜನೇಯ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಹಳ್ಳಿಗಳ ಜನರು ಒಂದೊಂದು ಜವಾಬ್ದಾರಿ ಹೊತ್ತು ರಥೋತ್ಸವ, ತೆಪ್ಪೋತ್ಸವ ನಡೆಸುವರು. ಭರತವಾಡಿ, ವೀರತಯ್ಯನಕೊಪ್ಪಲಿನವರು ದೇವಾಲಯಕ್ಕೆ ಸುಣ್ಣ ಬಣ್ಣ ಬಳಿದರೆ, ಮುದಗನೂರಿನವರು ರಥ ನಿಯಂತ್ರಣಕ್ಕೆ ಮರದ ಗೊದ್ದ ತಯಾರಿಸುವರು.

ಹಿಂಡಗೂಡ್ಲಿನವರು ರಥ ಎಳೆಯುವ ಹಗ್ಗ ತಂದರೆ, ದಾಸನಪುರದವರು ಹೂವಿನ ಚಪ್ಪರ ಹಾಕುವರು. ದೊಡ್ಡಹೆಜ್ಜೂರಿನವರು ಇತರೆ ಜವಾಬ್ದಾರಿ ಹೊರುವರು. ಹನಗೋಡು, ಕಿರಂಗೂರು, ಹರಳಹಳ್ಳಿ, ಚಿಕ್ಕಹೆಜ್ಜೂರು, ಅಬ್ಬೂರು, ಶಿಂಡೇನಹಳ್ಳಿ, ನೇಗತ್ತೂರು, ಹರಳಳ್ಳಿ, ಕೋಣನ ಹೊಸಹಳ್ಳಿ ಸೇರಿದಂತೆ ಹತ್ತಾರು ಗ್ರಾಮದವರು ಜಾತ್ರೆಗೆ ಸಹಕಾರ ನೀಡುವರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.