ರೈತರ 45 ಸಾವಿರ ಕೋಟಿ ಸಾಲಮನ್ನಾ ಶತಃಸಿದ್ಧ


Team Udayavani, Mar 2, 2019, 7:17 AM IST

m1-raitara.jpg

ಮೈಸೂರು: ಹೈನುಗಾರಿಕೆ ಪ್ರೋತ್ಸಾಹಿಸುವ ಸಲುವಾಗಿ ಹಾಲಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಲೀಟರ್‌ಗೆ ಒಂದು ರೂ. ಹೆಚ್ಚಳ ಮಾಡಿದ್ದು, ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಆಲನಹಳ್ಳಿಯಲ್ಲಿ ನಿರ್ಮಿಸಿರುವ ನೂತನ ಮೆಗಾ ಡೇರಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರಂಭದಲ್ಲಿ ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್‌ಗೆ 2 ರೂ. ನೀಡಲಾಗುತ್ತಿತ್ತು. ಅದನ್ನು 4 ರೂ., 5 ರೂ.ಗಳಿಗೆ ಹೆಚ್ಚಳ ಮಾಡಿದ್ದು, ತಮ್ಮ ಸರ್ಕಾರ ಪ್ರೋತ್ಸಾಹಧನವನ್ನು ಇನ್ನೂ ಒಂದು ರೂಪಾಯಿ ಹೆಚ್ಚಳ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದು, ಏಪ್ರಿಲ್‌ 1 ರಿಂದ ಪ್ರತಿ ಲೀಟರ್‌ ಹಾಲಿಗೆ 6 ರೂಪಾಯಿ ಸರ್ಕಾರದ ಪ್ರೋತ್ಸಾಹ ಧನ ಸಿಗಲಿದೆ ಎಂದರು.

ಉಚಿತ ವಿದ್ಯುತ್‌: ಕೇಂದ್ರ ಸರ್ಕಾರ ಡಿಪಿಟಿ ಯೋಜನೆಯಡಿ ರಾಜ್ಯದ ರೈತರಿಗೆ 2098 ಕೋಟಿ ರೂ. ಕೊಡಲಿದೆ. ಆದರೆ, ರಾಜ್ಯ ಸರ್ಕಾರ ಹೈನುಗಾರರಿಗೆ ಕೊಡುತ್ತಿರುವ ಪ್ರೋತ್ಸಾಹ ಧನವೇ 2500 ಕೋಟಿ ರೂ. ಆಗಲಿದೆ. ಜೊತೆಗೆ ರೈತರಿಗೆ ಉಚಿತ ವಿದ್ಯುತ್‌ ನೀಡಲು ಸಬ್ಸಿಡಿಗೆ 11 ಸಾವಿರ ಕೋಟಿ ನೀಡಲಾಗುತ್ತಿದೆ ಎಂದರು.

ಸಾಲಮನ್ನಾ: ರಾಜ್ಯದ ರೈತರ 45 ಸಾವಿರ ಕೋಟಿ ಸಾಲಮನ್ನಾ ಬಗ್ಗೆ ಯಾವುದೇ ಅನುಮಾನ ಬೇಡ. ಒಂದು ಲಕ್ಷ ರೂ.ಗಳವರೆಗೆ ಸಹಕಾರ ಬ್ಯಾಂಕುಗಳಲ್ಲಿನ ಸಾಲಮನ್ನಾ, 2 ಲಕ್ಷ ರೂ.ಗಳವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಮನ್ನಾ ಆಗಲಿದೆ.

ರಾಜ್ಯದ 40 ಲಕ್ಷ ರೈತ ಕುಟುಂಬಗಳ ಪೈಕಿ ಫೆ.26ರವರೆಗೆ 10.40 ಲಕ್ಷ ರೈತ ಕುಟುಂಬಗಳ ಸಾಲಮನ್ನಾ ಆಗಿದೆ. ಹೀಗಾಗಿ ಸಾಲಮನ್ನಾ ಬಗ್ಗೆ ಅನುಮಾನಬೇಡ. ಆದರೆ, ಒಂದೇ ಬಾರಿಗೆ ಸಾಲಮನ್ನಾ ಮಾಡಲಾಗಲ್ಲ. ಅದಕ್ಕೆ ಮಾಹಿತಿಗಳನ್ನು ಪಡೆಯಬೇಕಾಗಿರುವುದರಿಂದ ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದರು.

ಮೆಗಾ ಡೇರಿಗೆ 50 ಕೋಟಿ ನೆರವು: ಹಿಂದಿನ ಸರ್ಕಾರಗಳು ಮೈಸೂರಿನಲ್ಲಿ ಮೆಗಾಡೇರಿ ಸ್ಥಾಪಿಸುವ ತೀರ್ಮಾನ ಮಾಡಿದ್ದರೂ ಕೆಲಸ ಆಗಿರಲಿಲ್ಲ. ಮೈಸೂರು ಹಾಲು ಒಕ್ಕೂಟ 41 ಕೋಟಿ ರೂ., ಆರ್‌ಕೆವೈಬಿ ಅನುದಾನ 6 ಕೋಟಿ ರೂ., ಎನ್‌ಡಿಡಿಬಿಯಿಂದ 80 ಕೋಟಿ ರೂ. ಸಾಲ ಪಡೆದು 128 ಕೋಟಿ ರೂ. ವೆಚ್ಚದಲ್ಲಿ ಮೆಗಾಡೇರಿ ನಿರ್ಮಿಸಿದ್ದು,

ಎರಡನೇ ಹಂತದಲ್ಲಿ 59 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಪುಡಿ ಘಟಕ ಸ್ಥಾಪಿಸಲು ಉದ್ದೇಶಿಸಿದೆ. ಮೆಗಾಡೇರಿ ಸ್ಥಾಪನೆಯಿಂದ ಹಾಲು ಸಂಗ್ರಹಣೆ ಮತ್ತು ಮಾರಾಟಕ್ಕೆ ಉತ್ತಮ ವ್ಯವಸ್ಥೆಯಾಗಿದ್ದು , ಮೈಸೂರು ಹಾಲು ಒಕ್ಕೂಟದ ಅಭಿವೃದ್ಧಿಗಾಗಿ 50 ಕೋಟಿ ರೂ. ನೆರವು ನೀಡುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

50 ಪೈಸೆ ಏರಿಕೆ: ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಏಪ್ರಿಲ್‌ 1 ರಿಂದ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ರೈತರಿಂದ ಖರೀಸಿಸುವ ಹಾಲಿಗೆ ಪ್ರತಿ ಲೀಟರ್‌ಗೆ 50 ಪೈಸೆ ಹೆಚ್ಚಳ ಮಾಡಲು ತೀರ್ಮಾನಿಸಿದೆ ಎಂದರು. ಇದೇ ಸಂದರ್ಭದಲ್ಲಿ ಸಾಲಮನ್ನಾ ಯೋಜನೆಯಡಿ ಸಹಕಾರ ಬ್ಯಾಂಕುಗಳಲ್ಲಿ ಸಾಲಮನ್ನಾ ಆದ ರೈತರಿಗೆ ಋಣಮುಕ್ತ ಪತ್ರ ನೀಡಲಾಯಿತು.

ಕಾಯಕ ಯೋಜನೆಯಡಿ 12 ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 1.10 ಕೋಟಿ ಮೊತ್ತದ ಸಾಲದ ಚೆಕ್‌ ವಿತರಿಸಲಾಯಿತು. ಕಾರ್ಮಿಕ ಇಲಾಖೆವತಿಯಿಂದ ನೀಡಲಾಗುವ ಕಾರ್ಮಿಕ ಸಮ್ಮಾನ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಸಚಿವರಾದ ಸಾ.ರಾ.ಮಹೇಶ್‌, ಬಂಡೆಪ್ಪ ಕಾಶೆಂಪೂರ, ಶಾಸಕರಾದ ಅಡಗೂರು ಎಚ್‌.ವಿಶ್ವನಾಥ್‌, ಡಾ.ಯತೀಂದ್ರ, ಅನಿಲ್‌ಕುಮಾರ್‌, ಅಶ್ವಿ‌ನ್‌ಕುಮಾರ್‌, ಬಿ.ಹರ್ಷವರ್ಧನ್‌, ಕೆ.ಮಹದೇವ್‌, ವಿಧಾನಪರಿಷತ್‌ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್‌, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಮೈಮುಲ್‌ ಅಧ್ಯಕ್ಷ ಕೆ.ಜಿ.ಮಹೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಗೊಂದಲದಗೂಡಾದ ಕಾರ್ಯಕ್ರಮ: ಮೆಗಾಡೇರಿ ಉದ್ಘಾಟನಾ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿತ್ತು. ಆದರೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಆಗಮಿಸಿದಾಗ ಸಂಜೆ 5.30ಗಂಟೆ ಆಗಿತ್ತು. ನಗರದಲ್ಲಿ ಇನ್ನೂ ಎರಡು ಕಾರ್ಯಕ್ರಮಗಳಿಗೆ ಹೋಗಬೇಕಾದ ಒತ್ತಡದಲ್ಲಿದ್ದರಿಂದ ನಾಡಗೀತೆಯನ್ನೂ ಅರ್ಧಕ್ಕೆ ಮೊಟಕುಗೊಳಿಸಲಾಯಿತು.

ಸ್ವಾಗತ, ನಿರೂಪಣೆ ಎಲ್ಲವನ್ನೂ ಸಚಿವ ಜಿ.ಟಿ.ದೇವೇಗೌಡರೇ ಮಾಡಲು ನಿಂತು ಋಣಮುಕ್ತ ಪತ್ರ, ಕಾಯಕ ಯೋಜನೆ ಹೀಗೆ ಎಲ್ಲಾ ಫ‌ಲಾನುಭವಿಗಳನ್ನೂ ಒಟ್ಟಿಗೇ ವೇದಿಕೆಗೆ ಕರೆಯುತ್ತಿದ್ದರಿಂದ ಏನು ನಡೆಯುತ್ತಿದೆ ಎಂಬುದೇ ತಿಳಿಯದಂತಾಗಿತ್ತು.

ಕಾರ್ಯಕ್ರಮಕ್ಕಾಗಿ ದೂರದ ಊರುಗಳಿಂದ ಬೆಳಗ್ಗೆಯೇ ವಾಹನಗಳನ್ನು ಮಾಡಿಕೊಂಡು ಬಂದಿದ್ದ ಹೈನುಗಾರರು ಮುಖ್ಯಮಂತ್ರಿಯವರು ಬರುವುದು ತಡವಾಗಿದ್ದರಿಂದ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅರ್ಧದಷ್ಟು ಜನರು ತಮ್ಮ ಊರುಗಳತ್ತ ಹೊರಟರು.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.