ರಫೇಲ್‌ ವಿಮಾನ ಖರೀದಿ ವಿರುದ್ಧ  ಹೋರಾಟ


Team Udayavani, Aug 27, 2018, 6:45 AM IST

ban27081806.jpg

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಎನ್‌ಡಿಎ ಸರ್ಕಾರ ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ 40 ಸಾವಿರ ಕೋಟಿ ರೂ.ಗಳ ಹಗರಣ ನಡೆಸಿದ್ದು, ಬಿಜೆಪಿಯ ಭ್ರಷ್ಟಾಚಾರದ ಮುಖವನ್ನು ಜನತೆಗೆ ತೋರಿಸಲು ಕಾಂಗ್ರೆಸ್‌ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿದೆ.

ನಗರದಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಖಾತೆ ಮಾಜಿ ರಾಜ್ಯ ಸಚಿವ ಪಲ್ಲಂರಾಜು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಪಲ್ಲಂರಾಜು ಮಾತನಾಡಿ, ರಫೇಲ್‌ ವಿಮಾನ ಖರೀದಿಯಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಫ್ರಾನ್ಸ್‌ ಸರ್ಕಾರದೊಂದಿಗೆ ಭಾರತ ಮಾಡಿಕೊಂಡ ಒಪ್ಪಂದವನ್ನು ಬಿಜೆಪಿ ಸರ್ಕಾರ ತಿದ್ದುವ ಮೂಲಕ ಭಾರೀ ಅವ್ಯವಹಾರ ನಡೆಸಿದೆ. 

ಯುಪಿಎ ಅವಧಿಯಲ್ಲಿನ ಒಪ್ಪಂದದಂತೆ ತಂತ್ರಜ್ಞಾನ ವರ್ಗಾವಣೆಯಿಂದ ಬೆಂಗಳೂರಿನ ಎಚ್‌ಎಎಲ್‌ ಕಾರ್ಖಾನೆಯಲ್ಲಿ ಉದ್ಯೋಗ ಸೃಷ್ಟಿ ಮಾಡುವುದರ ಜತೆಗೆ ಆರ್ಥಿಕ ಅಭಿವೃದ್ಧಿಗೂ ಅನುಕೂಲವಾಗುತ್ತಿತ್ತು. ಆದರೆ, ಮೋದಿ ಸರ್ಕಾರ ಈ ಒಪ್ಪಂದವನ್ನು ಸಂಪೂರ್ಣವಾಗಿ ರದ್ದು ಮಾಡಿ, ರಕ್ಷಣಾ ಕ್ಷೇತ್ರದಲ್ಲಿ ಏನೇನೂ ಅನುಭವವಿಲ್ಲದ ತಮ್ಮ ಆಪ್ತರಾದ ಅನಿಲ್‌ ಅಂಬಾನಿಯವರ ಹೊಸ ಕಂಪನಿ ಇದರ ಗುತ್ತಿಗೆ ಪಡೆಯಲು ಅನುವು ಮಾಡಿಕೊಟ್ಟು ದಲ್ಲಾಳಿಗಳಾಗಿದ್ದಾರೆ ಎಂದು ಆರೋಪಿಸಿದರು.

ಯುಪಿಎ ಒಪ್ಪಂದದ ಪ್ರಕಾರ ಪ್ರತಿ ವಿಮಾನಕ್ಕೆ 526.10 ಕೋಟಿ ರೂ.ನಿಗದಿ ಮಾಡಲಾಗಿತ್ತು. ಮೋದಿಯವರು ಮಾಡಿಕೊಂಡ ಒಪ್ಪಂದದಂತೆ ಪ್ರತಿ ವಿಮಾನಕ್ಕೆ 1670.70 ಕೋಟಿ ರೂ.ಬೆಲೆ ನಿಗದಿಯಾಗಿದೆ. ಸರ್ಕಾರ ರಫೇಲ್‌ ವಿಮಾನದ ಬೆಲೆ 670 ಕೋಟಿ ರೂ. ಎಂದು ಸಂಸತ್ತಿಗೆ ತಿಳಿಸಿದ್ದರೂ ದಸ್ಸಾಲ್ಟ್ ಕಂಪನಿಯ ವಾರ್ಷಿಕ ವರದಿಯಲ್ಲಿ ಇದರ ಬೆಲೆ 1,670 ಕೋಟಿ ರೂ. ಎಂದು ನಮೂದಿಸಿರುವುದು ಇದರಲ್ಲಿ ಪಾರದರ್ಶಕ ವ್ಯವಹಾರ ನಡೆದಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಹರಿಹಾಯ್ದರು.

ರಫೇಲ್‌ ವಿಮಾನ ಖರೀದಿ ವ್ಯವಹಾರ 40 ಸಾವಿರ ಕೋಟಿ ರೂ.ಗಳ ಬಹು ದೊಡ್ಡ ಹಗರಣ. ಮೋದಿ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ನಡೆಸಿರುವ ಈ ಹಗರಣವನ್ನು ಕಾಂಗ್ರೆಸ್‌  ಜನತೆಗೆ ತಿಳಿಸುವ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಬೀದಿಗಿಳಿದು ಹೋರಾಡುತ್ತೇವೆ.
– ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.