ಕಟ್ಟಕಡೆ ವ್ಯಕ್ತಿಗೂ ಅರ್ಥವಾಗುವಂತೆ ವಚನ ರಚನೆ


Team Udayavani, May 8, 2019, 3:00 AM IST

kattakade

ಎಚ್‌.ಡಿ.ಕೋಟೆ: ಕಟ್ಟಕಡೆಯ ವ್ಯಕ್ತಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸಿ ಆ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ, ವಿಶ್ವದಲ್ಲಿ ಭಾರತವನ್ನು ಮುನ್ನಡೆಗೆ ತಂದ ಕೀರ್ತಿ ಬಸವಣ್ಣ ನವರಿಗೆ ಸಲ್ಲುತ್ತದೆ ಎಂದು ಉಪತಹಶೀಲ್ದಾರ್‌ ಆನಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಸವಣ್ಣನವರ 886 ನೇ ಜಯಂತಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ತಾಂಡವವಾಡುತ್ತಿದ್ದ ಸಾಮಾಜಿಕ ಅಸಮಾನತೆ, ಮೌಡ್ಯ, ಕಂದಚಾರಗಳನ್ನು ಕಿತ್ತೂಗೆಯುವ ನಿಟ್ಟಿನಲ್ಲಿ ಬಸವಣ್ಣ ನವರು ಕ್ರಾಂತಿಕಾರಿ ಚಳವಳಿಯನ್ನು ಹುಟ್ಟು ಹಾಕಿದರು ಎಂದು ಸ್ಮರಿಸಿದರು.

ಕಾಯಕ ನಿಷ್ಠೆ: ಮಾನವಿಯತೆ ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿ ಸಮಾಜವನ್ನು ಸುಧಾರಣೆ ತಂದರು. ಶರಣು ಧರ್ಮದ ಪ್ರಸಾರ, ಕಾಯಕ ನಿಷ್ಠೆ, ಮಾನವತಾವಾದದಲ್ಲಿ ದೃಢ ವಿಶ್ವಾಸದಂತಹ ವಿಚಾರಗಳನ್ನು ವಚನಗಳ ಮೂಲಕ ಸಮಾಜದಲ್ಲಿ ಆಂದೋಲನ ಮೂಡಿಸಿ ಇಂದಿಗೂ ಸಮಾಜದ ಚಿಂತಕರಿಗೆ ದಾರಿದೀಪವಾಗಿ ಉಳಿದಿರುವವರು ಎಂದರೆ ಬಸವಣ್ಣ ಮಾತ್ರ. ಅವರು ರಚಿಸಿದ ವಚನಗಳು ಎಲ್ಲಿಯರೆಗೆ ಇರುತ್ತವೆಯೇ ಅಲ್ಲಿಯವರೆಗೂ ಅವರು ನಮ್ಮೊಳಗೆ ಇರುತ್ತಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗೋಣ ಎಂದರು.

ಕಾಯಕದ ಮಹತ್ವ: ಕ್ಷೇತ್ರ ಶಿಕ್ಷಣಾಧಿಕಾರಿ ಸುಂದರ್‌ ಮಾತನಾಡಿ, ಸಮಾಜದಲ್ಲಿ ಸಾಮಾಜಿಕ ಕ್ರಾಂತಿಯನ್ನು ಉಂಟುಮಾಡಿ ಸಮಾಜಕ್ಕೆ ತನ್ನದೆ ಆದ ಕೊಡುಗೆಯನ್ನು ವಚನ ಸಾಹಿತ್ಯದ ಮೂಲಕ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ನೀಡಿ ಸಮಾಜ ಪರಿವರ್ತನೆ ಕಾರಣರಾದವರು ಬಸವಣ್ಣನವರು. ನಾವೆಲ್ಲರೂ ಕಾಯಕದ ಮಹತ್ವವನ್ನು ಅರಿಯಬೇಕು, ಆತ್ಮವಲೋಕನ ಮಾಡಿಕೊಂಡು ಕೆಲಸ ಮಾಡಬೇಕು. ಅದರಲ್ಲೂ ಸರ್ಕಾರಿ ನೌಕರರು ಬಸವಣ್ಣನವರನ್ನು ಸ್ಫೂರ್ತಿಯಾಗಿ ತೆಗುದುಕೊಂಡು ಕೆಲಸ ನಿರ್ವಹಿಸಿಬೇಕು ಕಿವಿಮಾತು ಹೇಳಿದರು.

ಅನುಭವ ಮಂಟಪ: ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಬಸವಣ್ಣ ಅವರು 12ನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸುವ ಮೂಲಕ ತೋರಿಸಿಕೊಟ್ಟಿದ್ದಾರೆ. ಸರಳವಾದ ಜೀವನವನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು. ನಾವು ಸಮಾಜ ಸುಧಾರಕರ ಅನುಭವವನ್ನು ಮುಂದುವರಿಸಿಕೊಂಡು ಹೋಗಿದ್ದೇ ಆದಲ್ಲಿ ಸುಖೀ ಕಲ್ಯಾಣ ರಾಜ್ಯ ನಿರ್ಮಾಣ ಮಾಡಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಆದಿಕರ್ನಾಟಕ ಮಹಾಸಭದ ತಾಲೂಕು ಅಧ್ಯಕ್ಷ ಮುದ್ದಮಲ್ಲಯ್ಯ, ಹೊಸಹಳ್ಳಿ ಬಿ.ವಿ. ಬಸವರಾಜು, ಮೊತ್ತ ಬಸವರಾಜಪ್ಪ, ವೈ.ಟಿ.ಮಹೇಶ್‌, ಜಕ್ಕಹಳ್ಳಿ ಮಹದೇವಪ್ರಸಾದ್‌, ಮನುಗನಹಳ್ಳಿ ಮಾದಪ್ಪ, ಭೀಮನಹಳ್ಳಿ ಸೊಮೇಶ್‌, ಚೌಡಹಳ್ಳಿ ಜವರಯ್ಯ, ಮಹದೇವಪ್ರಸಾದ್‌, ತಾಪಂ ಇಒ ದರ್ಶನ್‌, ಡಾ.ಭಾಸ್ಕರ್‌, ಸಮಾಜ ಕಲ್ಯಾಣ ಇಲಾಖೆ ಸಹಯಕ ನಿರ್ದೇಶಕ ಗೋಪಾಲಕೃಷ್ಣಮೂರ್ತಿ, ಉಪತಹಶೀಲ್ದಾರ್‌ ಪುಟ್ಟಸ್ವಾಮಿ, ಶಿಕ್ಷಣ ಸಂಯೋಜಕ ಮಹದೇವಯ್ಯ, ವೇದಕುಮಾರ್‌, ರವಿಚಂದ್ರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.