ಮಲೆ ಮಹದೇಶ್ವರಸ್ವಾಮಿ ಉತ್ಸವ ವೈಭವ


Team Udayavani, Nov 26, 2019, 3:00 AM IST

male-mahadeshwara

ಕೆ.ಆರ್‌.ನಗರ: ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನ ಮತ್ತು ಉತ್ಸವ ಸಮಿತಿಯ ವತಿಯಿಂದ ಕಡೇ ಕಾರ್ತೀಕ ಸೋಮವಾರದ ಅಂಗವಾಗಿ ಮಹದೇಶ್ವಸ್ವಾಮಿಯ 49ನೇ ವರ್ಷದ ಉತ್ಸವ ಅತ್ಯಂತ ವೈಭವದಿಂದ ಜರುಗಿತು.

ಸೋಮವಾರ ಬೆಳಗ್ಗೆ 10 ಗಂಟೆಗೆ ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ಶಾಸಕ ಸಾ.ರಾ.ಮಹೇಶ್‌, ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಎಚ್‌.ವಿಶ್ವನಾಥ್‌, ಜಿಪಂ ಸದಸ್ಯ ಡಿ.ರವಿಶಂಕರ್‌, ಅಖೀಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕೆಂಪರಾಜು, ನವನಗರ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕಿನ ಅಧ್ಯಕ್ಷ ಕೆ.ಎನ್‌.ಬಸಂತ್‌ ಮತ್ತಿತರರು ದೇವಾಲಯದ ಮುಂಭಾಗ ಉತ್ಸವಕ್ಕೆ ಚಾಲನೆ ನೀಡಿದರು.

ಪಲ್ಲಕ್ಕಿ ಮೆರವಣಿಗೆ: ಬಳಿಕ ಮುತ್ತಿನ ಪಲ್ಲಕ್ಕಿಯಲ್ಲಿ ದೇವರ ಮೆರವಣಿಗೆ ಕೀಲು ಕುದುರೆ, ಕಂಸಾಳೆ ನೃತ್ಯ, ಗಾರುಡಿ ಗೊಂಬೆ, ತಮಟೆ ವಾದ್ಯ, ಡೊಳ್ಳು ಕುಣಿತ, ಗೊರವನ ಕುಣಿತ, ವೀರಗಾಸೆ, ನಾಸಿಕ್‌ ಡ್ರಮ್‌, ಪೂಜಾ ಕುಣಿತ, ಚಂಡೇ ಮೇಳ, ನಂದಿ ಧ್ವಜದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು.

ಹರಕೆ: ಈ ಸಂದರ್ಭದಲ್ಲಿ ಸಾವಿರಾರು ಮಂದಿ ಭಕ್ತರು ರಸ್ತೆಯ ಎರಡೂ ಬದಿಗಳಲ್ಲಿ ನಿಂತು ಮಹದೇಶ್ವರಸ್ವಾಯಿ ದರ್ಶನ ಪಡೆದು ವಿವಿಧ ಹರಕೆ ತೀರಿಸಿ, ಧನ್ಯತಾಭಾವ ಮೆರೆದರು. ನೆರೆದಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಮತ್ತು ಪ್ರಸಾದ ವಿತರಿಸಿ ಕಡೇ ಕಾರ್ತೀಕ ಸೋಮವಾರದ ಪೂಜೆ ನೆರವೇರಿಸಿದರು.

ಹತ್ತಾರು ಜಾನಪದ ಕಲಾ ತಂಡಗಳು ಮೆರವಣಿಗೆಗೆ ರಂಗು ನೀಡಿದವು. ಮಿನಿ ದಸರಾ ವೈಭವವನ್ನು ನೆನಪಿಸಿ ನೆರೆದಿದ್ದವರು ಕುಣಿದು ಕುಪ್ಪಳಿಸುವಂತೆ ಮಾಡಿದವು. ಉತ್ಸವದಲ್ಲಿ ಕೆ.ಆರ್‌.ನಗರ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಹತ್ತಾರು ಸಾವಿರಕ್ಕೂ ಅಧಿಕ ಮಂದಿ ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ಉತ್ಸವದ ಅಂಗವಾಗಿ ಮಲೆಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನಡೆಸಿ ದೇವರಿಗೆ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರು ಬೆಳಗ್ಗೆಯಿಂದ ಸಂಜೆಯವರೆಗೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದಾಸೋಹ: ಸಂಜೆ 6-30ಕ್ಕೆ ಕೊಂಡೋತ್ಸವ, 7 ಗಂಟೆಗೆ ಪಟಾಕಿ ಮತ್ತು ಬಾಣ ಬಿರುಸುಗಳ ಪ್ರದರ್ಶನ ನಡೆಸಿ 8-30ಕ್ಕೆ ಸಾಲುಪಂಕ್ತಿ ಅನ್ನ ದಾಸೋಹ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ದೇವಾಲಯದ ಟ್ರಸ್ಟಿಗಳಾದ ಆರ್‌.ಬಿ.ನಾಗರಾಜು, ಆರ್‌.ಎಚ್‌.ನಟರಾಜು, ಸಿ.ಪಾಲಾಕ್ಷ, ವೈ.ಎಸ್‌.ಸುರೇಶ್‌, ಕೆ.ಟಿ.ಬಸವರಾಜು, ಎಂ.ಡಿ.ನಟರಾಜು, ಚನ್ನಬಸಪ್ಪ ಮತ್ತು ಮಲೆಮಹದೇಶ್ವರ ಯುವ ಸೇನೆಯ ಅಧ್ಯಕ್ಷ ಭೋಜರಾಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.