ಮತದಾರರ ರೂಪದಲ್ಲಿ ಭಗವಂತನ ಕೃಪೆ


Team Udayavani, Dec 19, 2019, 3:00 AM IST

matadaarara

ಕೆ.ಆರ್‌.ಪೇಟೆ: ವಿರೋಧಿಗಳ ಟೀಕೆ ಮತ್ತು ಕಿರುಕುಳದಿಂದ ನನ್ನನ್ನು ರಕ್ಷಿಸಲು ಭಗವಂತನೇ ಜನರ ರೂಪದಲ್ಲಿ ಬಂದು ಉಪ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಕೊಟ್ಟಿದ್ದಾರೆಂದು ಶಾಸಕ ನಾರಾಯಣಗೌಡ ಹೇಳಿದರು.

ತಾಲೂಕಿನ ಶೀಳನೆರೆ ಹೋಬಳಿಯ ಕಾಗೇಪುರ ಗ್ರಾಮದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ಉಪ ಸಮರದಲ್ಲಿ ಅಭಿವೃದ್ಧಿ ಪರವಾಗಿ ಮತನೀಡಿ ತಾಲೂಕಿನ ಸುಪುತ್ರ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರಗೊಳಿಸಲು ಕೆ.ಆರ್‌.ಪೇಟೆಯಲ್ಲಿ ಕಮಲ ಅರಳಿಸಿ ಬಿಜೆಪಿ ಗೆಲ್ಲಿಸಿ ಇತಿಹಾಸ ನಿರ್ಮಿಸಿದ್ದಾರೆ. ಅವರ ಆಶೀರ್ವಾದ ಪಡೆಯಲು ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ವಿರೋಧಿಗಳು ನನ್ನ ವಿರುದ್ಧ ನಿರಂತರ ಅಪಪ್ರಚಾರ ನಡೆಸಿ ನನ್ನ ವಿರುದ್ಧ ಜನಸಾಮಾನ್ಯರನ್ನು ಎತ್ತಿಕಟ್ಟಿದ್ದರೂ ಜನತೆ ಅಪಪ್ರಚಾರಗಳಿಗೆ ಕಿವಿಗೊಡದೆ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಪರವಾಗಿ ಮತ ಚಲಾಯಿಸಿದ್ದಾರೆ. ನನ್ನ ಜೀವನದ ಕೊನೆ ಉಸಿರಿರುವವರೆಗೂ ಜನತೆಯ ನಮ್ರ ಸೇವಕನಂತೆ ಅಭಿವೃದ್ಧಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಹೇಳಿದರು.

ಅಭಿವೃದ್ಧಿಗೆ ಮಾತ್ರ ಆದ್ಯತೆ: ನಾನು ಅಭಿವೃದ್ಧಿ ಬಗ್ಗೆ ಮಾತ್ರ ಯೋಚನೆ ಮಾಡುತ್ತೇನೆ. ಮನೆಯಲ್ಲಿರುವವರ ಬಗ್ಗೆ ಮಾತನಾಡಲು ಮತ್ತು ಯೋಚಿಸಲು ನನಗೀಗ ಸಮಯವಿಲ್ಲ. ನನ್ನನ್ನು ಆಶೀರ್ವದಿಸಿರುವ ಜನರ ಸೇವೆ ಮಾಡಲು ಹೆಚ್ಚು ಸಮಯ ಮೀಸಲಿಡುತ್ತೇನೆ. ಮಾಡಲು ಕೆಲಸ ಇಲ್ಲದವರು ಟೀಕೆ ಮಾಡುತ್ತಾರೆ. ಅವರ ಬಗ್ಗೆ ಮತ್ತೂಮ್ಮೆ ಪ್ರಶ್ನೆ ಕೇಳಿ ಸಮಯ ವ್ಯರ್ಥ ಮಾಡಬೇಡಿ ಎಂದು ಪುಟ್ಟರಾಜು ಬಗ್ಗೆ ಪ್ರತಿಕ್ರಿಯಿಸಲು ನಾರಾಯಣಗೌಡ ನಿರಾಕರಿಸಿದರು.

ಶೀಳನೆರೆ ಹೋಬಳಿಯ ಹರಳಹಳ್ಳಿ, ಸಿಂದಘಟ್ಟ, ರಾಯಸಮುದ್ರ, ಕೊಡಹಳ್ಳಿ, ಹರಳಹಳ್ಳಿ, ನೀತಿಮಂಗಲ, ವಸಂತಪುರ, ಮೈಲನಹಳ್ಳಿ, ಸಿಂಗಾಪುರ, ಕತೇìನಹಳ್ಳಿ, ಹೆಮ್ಮಡಹಳ್ಳಿ, ಚಾವಡಘಟ್ಟ, ಕಾಗೆಪುರ ಗ್ರಾಮಗಳಿಗೆ ಭೇಟಿನೀಡಿ ಜನರಿಗೆ ಕೃತಜ್ಞತೆ ಸಮರ್ಪಿಸಿದರು.

ಈ ವೇಳೆ ಜಿಪಂ ಮಾಜಿ ಉಪಾಧ್ಯಕ್ಷ ಅಂಬರೀಶ್‌, ಮಾಜಿ ಸದಸ್ಯ ಅಘಲಯ ಮಂಜುನಾಥ್‌, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಹರಳಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕತೇನಹಳ್ಳಿ ಸುರೇಶ್‌, ತಾಲೂಕು ಬಿಜೆಪಿ ಅಧ್ಯಕ್ಷ ಬೂಕಹಳ್ಳಿ ಮಂಜು, ಉಪಾಧ್ಯಕ್ಷ ಶೀಳನೆರೆ ಭರತ್‌, ಸತ್ಯಾನಂದ, ಚಂದ್ರಮೋಹನ್‌, ಮಂಜುನಾಥಗೌಡ, ಶಿವಪ್ರಸಾದ್‌, ಡಾ.ವೆಂಟಕೇಶ್‌, ರಾಜೇಗೌಡ ಇತರರಿದ್ದರು.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.