ಹಸಿರು ಸಂತೆಯಲ್ಲಿ ತಾಜಾ ತರಕಾರಿ, ಸಾವಯವ ಉತ್ಪನ್ನ


Team Udayavani, Oct 6, 2019, 3:00 AM IST

hasiru-sante

ಮೈಸೂರು: ರೈತರು ನಮ್ಮ ಬೆನ್ನೆಲುಬು ಅವರು ಸಾವಯವ ಕೃಷಿ ಪದ್ಧತಿಗೆ ಮರಳಬೇಕು. ಇದರಿಂದ ಆರೋಗ್ಯಯುತ ಹಾಗೂ ಸಾವಯವ ಬೆಳೆಗಳನ್ನು ಬೆಳೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ನಗರದ ಬುಲೇವಾರ್ಡ್‌ ರಸ್ತೆಯಲ್ಲಿ ಪ್ರವಾಸೋದ್ಯಮ ಉಪಸಮಿತಿ ವತಿಯಿಂದ ಆಯೋಜಿಸಿದ್ದ ಹಸಿರು ಸಂತೆ ಹಾಗೂ ಚಿತ್ರಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತ ಬೆಳೆದ ಬೆಳೆಗಳನ್ನು ಗ್ರಾಹಕರಿಗೆ ಪರಿಚಯಿಸುವ ಸದಾವಕಾಶವನ್ನು ದಸರಾ ಮಹೋತ್ಸವ ಸಂದರ್ಭದಲ್ಲಿ ನೀಡಿರುವುದು ರೈತರಿಗೆ ಅನುಕೂಲವಾಗಲಿದೆ ಎಂದರು.

ಸರ್ಕಾರವು ರೈತರ ಪರ ಹಲವಾರು ಯೋಜನೆ ಜಾರಿಗೆ ತಂದಿದ್ದು, ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಾರ್ಷಿಕ ಒಟ್ಟು 10 ಸಾವಿರ ರೂ. ಪ್ರತಿ ರೈತ ಕುಟುಂಬಕ್ಕೆ ನೀಡಲಾಗುತ್ತಿದೆ. ರೈತರಿಗಾಗಿ ಇನ್ನೂ ಉತ್ತಮ ಯೋಜನೆ ರೂಪಿಸಲಿದ್ದೇವೆ. ಎಲ್ಲಿಯ ತನಕ ರೈತ ಬೆಳೆದ ಬೆಳೆಗಳನ್ನು ಕೊಂಡುಕೊಳ್ಳುವ ಗ್ರಾಹಕರಿರುತ್ತಾರೋ ಅಲ್ಲಿಯವರೆಗೆ ರೈತನೂ ಉತ್ಸುಕನಾಗಿರುತ್ತಾನೆ.

ಯಾವಾಗ ಕೊಂಡುಕೊಳ್ಳವವರು ಇಲ್ಲವಾದಾಗ ರೈತ ನಿರಾಸೆಯಾಗುತ್ತಾನೆ. ಹಾಗಾಗಿ ರೈತ ಮತ್ತು ಗ್ರಾಹಕ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಹೇಳಿದರು. ಚಿತ್ರಸಂತೆಯನ್ನು ವೀಕ್ಷಿಸಿದ ಅವರು ಕಲೆ ಎಂಬುದು ಯಾರ ಸ್ವತ್ತು ಅಲ್ಲ ಹಾಗೂ ಕಲೆಗೆ ಬೆಲೆಯೇ ಇಲ್ಲ. ಕೈಗಳಿಂದ ಎಂತಹ ಚಿತ್ರಗಳನ್ನು ರಚಿಸಬಹುದು ಎಂಬುದನ್ನು ಕಲಾವಿದರು ತೋರಿಸಿದ್ದಾರೆ. ಅವರ ಚಿತ್ರಗಳನ್ನು ಮೈಸೂರಿಗರು ಕಣ್ತುಂಬಿಕೊಳ್ಳಲಿ, ಇದರಿಂದ ಕಲಾವಿದರಿಗು ತಮ್ಮ ಕಲೆಯ ಮೇಲೆ ಇನ್ನೂ ಪ್ರೀತಿ ಹೆಚ್ಚಾಗಲಿದೆ ಎಂದರು.

ಹಸಿರು ಸಂತೆಯಲ್ಲಿ 45ಕ್ಕೂ ಹೆಚ್ಚು ಮಳಿಗೆಗಳಿದ್ದು ವಿವಿಧ ರೀತಿಯ ಸಾವಯವ ಕೃಷಿ ಉತ್ಪನ್ನಗಳು, ಸೊಪ್ಪು, ತರಕಾರಿ, ನಾಟಿ ಕೋಳಿ ಮೊಟ್ಟೆ, ವಿಶೇಷ ತಳಿಗಳ ಅಕ್ಕಿ, ಭತ್ತ, ಬಿತ್ತನೆಬೀಜಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದ್ದು, ಚಿತ್ರ ಸಂತೆಯಲ್ಲೂ 56 ಮಳಿಗೆಗಳಿದ್ದು ಹಲವಾರು ಛಾಯಾಚಿತ್ರಗಳು, ಪೇಂಟಿಂಗ್‌, ಕೈ ಬರಹ ಚಿತ್ರಗಳು, ತ್ರೀಡಿ ಚಿತ್ರಗಳ ಪ್ರದರ್ಶನ ಗಮನ ಸೆಳೆದವು.

ಈ ಸಂದರ್ಭದಲ್ಲಿ ಶಾಸಕ ಎಲ್‌. ನಾಗೇಂದ್ರ, ಪ್ರವಾಸೋದ್ಯಮ ಉಪಸಮಿತಿ ಅಧ್ಯಕ್ಷ ಕೆ.ಜೆ ರಮೇಶ್‌, ಜಂಟಿ ಕೃಷಿ ನಿರ್ದೇಶಕ ಮಹಾಂತೇಶಪ್ಪ ಹಾಗೂ ಪ್ರವಾಸೋದ್ಯಮ ಉಪಸಮಿತಿಯ ಸದಸ್ಯರು ಇದ್ದರು. ಹಸಿರು ಸಂತೆಯಲ್ಲಿ 45ಕ್ಕೂ ಹೆಚ್ಚು ಮಳಿಗೆ ತೆರೆದಿದ್ದು, ಅದರಲ್ಲಿ ಅರ್ಧದಷ್ಟು ಮಳಿಗೆಗಳು ಖಾಲಿಯಾಗಿದ್ದವು. ಆರಂಭದಲ್ಲಿ ಜನದಟ್ಟಣೆ ಕಡಿಮೆ ಇತ್ತು. ಮಧ್ಯಾಹ್ನದ ನಂತರ ಸಾವಿರಾರು ಮಂದಿ ಚಿತ್ರಸಂತೆ ಹಾಗೂ ಹಸಿರು ಸಂತೆಗೆ ಭೇಟಿ ನೀಡಿದರು.

26 ಸಾವಿರ ಮಂದಿಗೆ ಮಾತ್ರ ಆಸನ: ದಾಸರ ಪಾಸ್‌ ವಿತರಣೆ ಸಂಬಂಧ, ಮೊದಲಿನಿಂದ ಏನು ನಡೆಯುತ್ತಿದೆ, ಅದನ್ನೆ ನಡೆಸಿಕೊಂಡು ಹೊಗುತ್ತೇವೆ. ಸಾಧ್ಯವಷ್ಟು ಎಲ್ಲವನ್ನು ಸರಿಮಾಡಲಾಗಿದೆ. ಅರಮನೆ ಆವರಣದಲ್ಲಿ 26 ಸಾವಿರ ಮಾತ್ರ ಆಸನ ವ್ಯವಸ್ಥೆ ಇರುವುದು. ಇದನ್ನು ಜನರೇ ಅರ್ಥ ಮಾಡಿಕೊಳ್ಳಬೇಕು. ಅರಮನೆಯವರು, ಅರಮನೆ ಆಡಳಿ, ಸುಪ್ರೀಂ, ಹೈಕೋರ್ಟ್‌ನಿಂದ ಎಲ್ಲಾ ತರಹದ ಜನರು ಬರುತ್ತಾರೆ. ಎಲ್ಲರಿಗೂ ಪಾಸ್‌ ವ್ಯವಸ್ಥೆ ಕಷ್ಟ ಎಂದು ಸಚಿವ ವಿ. ಸೋಮಣ್ಣ ಹೇಳಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.