- Friday 13 Dec 2019
ಯೋಗ ಮಹತ್ವ ತಿಳಿಸಿಕೊಟ್ಟ ಡಾ| ಗಣಪತಿ ಸಚ್ಚಿದಾನಂದ ಸ್ವಾಮೀಜಿ
Team Udayavani, Jun 22, 2019, 3:00 AM IST
ಮೈಸೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ರೇಸ್ಕೋಸ್ನಲ್ಲಿ ನಡೆದ ಬೃಹತ್ ಯೋಗ ಪ್ರದರ್ಶನದ ಜೊತೆಗೆ ನಾನಾ ಸಂಘ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರತ್ಯೇಕವಾಗಿ ಯೋಗ ಪ್ರದರ್ಶನ ನಡೆಸಿದವು. ಯೋಗದಿಂದಾಗುವ ಪ್ರಯೋಜನ, ಅದರ ಮಹತ್ವ, ಯೋಗದಿಂದ ಆರೋಗ್ಯ ಉತ್ತಮವಾಗಿ ಇಟ್ಟುಕೊಳ್ಳುವ ವಿಷಯ ಸೇರಿದಂತೆ ಹಲವು ವಿಚಾರಗಳ ಕುರಿತು ಉಪನ್ಯಾಸ ಕಾರ್ಯಕ್ರಮವೂ ನಡೆಯಿತು.
ಮಕ್ಕಳಿಂದ ಯೋಗ: ಅವಧೂತ ದತ್ತಪೀಠದ ನಾದಮಂಟಪದಲ್ಲಿ ಯೊಗ ಪ್ರದರ್ಶನ ಹಾಗೂ ರಂಗರಾವ್ ಅಂಗವಿಕಲರ ಶಾಲೆಯಲ್ಲಿ ದೃಷ್ಟಿವಿಶೇಷಚೇತನ ಮಕ್ಕಳಿಂದ ಯೋಗ ಪ್ರದರ್ಶನ ಗಮನ ಸೆಳೆಯಿತು. ನಂಜನಗೂಡು ರಸ್ತೆಯಲ್ಲಿರುವ ಅವದೂತ ದತ್ತ ಪೀಠ, ದತ್ತ ಕ್ರಿಯಾ (ಅಂತಾರಾಷ್ಟ್ರೀಯ)ಯಿಂದ ಆಶ್ರಮದ ನಾದ ಮಂಟಪದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಡಾ.ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಕಿರಿಯ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಯೋಗ ಕಾರ್ಯಕ್ರಮ ನಡೆಸಿ ಯೋಗದ ಮಹತ್ವ ತಿಳಿಸಿಕೊಡಲಾಯಿತು. ಎನ್.ಆರ್.ರಂಗರಾವ್ ಸ್ಮಾರಕ ಅಂಗವಿಕಲ ಶಾಲೆಯ 40ಕ್ಕೂ ಹೆಚ್ಚು ದೃಷ್ಟಿ ವಿಶೇಷಚೇತನ ಮಕ್ಕಳು ಯೋಗ ಪ್ರದರ್ಶಿಸಿ ಗಮನ ಸೆಳೆದರು.
ಪ್ರಾತ್ಯಕ್ಷಿಕೆ: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಯೋಗ ಚಾಂಪಿಯನ್ ಯೋಗ ಪ್ರಕಾಶ್ ಅವರು ಯೋಗ ಪ್ರಾತ್ಯಕ್ಷಿಕೆ ಮೂಲಕ ಯೋಗದ ಬಗ್ಗೆ ಸವಿಸ್ತರವಾಗಿ ವಿವರಿಸಿದರು.
ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಂಸ್ಥೆ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಶಿಕ್ಷರಿಂದ ಯೋಗ ಪ್ರದರ್ಶನ ಹಮ್ಮಿಕೊಳ್ಳಲಾಯಿತು.
ಚುಮುಚುಮು ಚಳಿಯನ್ನೂ ಲೆಕ್ಕಿಸದೇ ಶಾಲಾ ವಿದ್ಯಾರ್ಥಿಗಳೂ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಗಂಗೋತ್ರಿ ಪಬ್ಲಿಕ್ ಶಾಲೆಯ ಆಡಳಿತ ಸಂಯೋಜನಾಧಿಕಾರಿ ಕಾಂತಿನಾಯಕ್, ಶಾಲೆಯ ಮುಖ್ಯ ಶಿಕ್ಷಕಿ ಝರೀನಾ ಬಾಬುಲ್ ಸೇರಿದಂತೆ ಮತ್ತಿತರಿದ್ದರು.
ವಿವಿಧ ಆಸನ: ಕುವೆಂಪು ನಗರದಲ್ಲಿರುವ ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಯೋಗ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಸೂರ್ಯನಮಸ್ಕಾರ, ಉತಿತತಾಡಾಸನ, ಅರ್ಧಕಟಿಚಕ್ರಾಸನ, ಅರ್ಧಚಕ್ರಾಸನ, ಪಾದಹಸ್ತಾಸನ, ತ್ರೀಕೋಣಾಸನ, ವೃಕ್ಷಾಸನ, ವಕ್ರಾಸನ, ಭುಜಾಂಗಾಸನ, ಪದ್ಮಾಸನ, ಮಣಿಪರಾಸನ, ಪಶ್ಚಿಮೋತ್ತಾಸನ, ವಜ್ರಾಸನ, ಧ್ಯಾನ, ಶವಾಸನ ಆಸನ ಪ್ರದರ್ಶಿಸಲಾಯಿತು. ನಂತರ ಉತ್ತಮ ಆರೋಗ್ಯಕ್ಕೆ ಯೋಗದ ಮಹತ್ವ ಮತ್ತು ಪ್ರಾಮುಖ್ಯತೆ ತಿಳಿಸಿಸಲಾಯಿತು.
ಈ ವಿಭಾಗದಿಂದ ಇನ್ನಷ್ಟು
-
ಮೈಸೂರು: ರಾಜ್ಯ ಸರ್ಕಾರ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಚಿತ್ರನಗರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡದೆ ಮೈಸೂರಿನಲ್ಲೇ ಸ್ಥಾಪಿಸಬೇಕೆಂದು ಒತ್ತಾಯಿಸಿ...
-
ಪಿರಿಯಾಪಟ್ಟಣ: ಪಟ್ಟಣದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗ ಮತ್ತು ರಾಜಕಾಲುವೆಗಳ ಸರ್ವೆ ನಡೆಸಿ, ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪುರ ಸಭಾ ಮುಖ್ಯಾಧಿಕಾರಿ...
-
ಮೈಸೂರು: "ನಾನು ಜೆಡಿಎಸ್ ಶಾಸಕನಾಗಿಯೇ ಮುಂದುವರಿಯುತ್ತೇನೆ. ಕಾಂಗ್ರೆಸ್ ಅಥವಾ ಬಿಜೆಪಿ ಸೇರುವ ವಿಚಾರವಿಲ್ಲ' ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ...
-
ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ...
-
ಮೈಸೂರು: ಮೈಸೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಮತ್ತು ಜಮೀನು ಮಂಜೂರಾದರೂ ಅಭಿವೃದ್ಧಿಗೊಳ್ಳದ ಸ್ಮಶಾನಗಳ ಅಭಿವೃದ್ಧಿ ಮತ್ತು ಹದ್ದುಬಸ್ತುನಲ್ಲಿಡುವ...
ಹೊಸ ಸೇರ್ಪಡೆ
-
ಅಮೀನಗಡ: ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು 5 ಉಪಕೇಂದ್ರಗಳ ಸಾರ್ವಜನಿಕರಿಗೆ ಉಪಯುಕ್ತವಾದ ಆರೋಗ್ಯ ಸೇವೆ ಒದಗಿಸುವ ಗುಡೂರ(ಎಸ್.ಸಿ) ಗ್ರಾಮದ ಸರಕಾರಿ ಪ್ರಾಥಮಿಕ...
-
ಬೀದರ: ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ| ಎಚ್.ಆರ್.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ...
-
ಕೊರಟಗೆರೆ: ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಸಂಕಲ್ಪದಂತೆ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಯಂತಿ ಅಂಗವಾಗಿ ಆಯೋಜಿಸಿರುವ ರಥಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿ...
-
ತೀರ್ಥಹಳ್ಳಿ: ತಾಲೂಕಿನಲ್ಲಿ ಕೆರೆಗಳ ಸರ್ವೇ ಕಾರ್ಯ ಸಮಾಧಾನಕರ ಆಗಿಲ್ಲ. 305 ಕೆರೆಗಳ ಗಡಿ ಗುರುತಿಸುವ ಕಾರ್ಯ ವಿಳಂಬವಾಗಿದೆ. ಸಿಬ್ಬಂದಿ ಕೊರತೆ ಇದ್ದಲ್ಲಿ ಡಿಡಿಎಲ್ಆರ್...
-
ಮಣಿಪಾಲ: ಪಂಚಭಾಷಾ ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಯಾವ ಕನ್ನಡ ಸಿನಿಮಾ ನಿಮಗಿಷ್ಟ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ....