ಕೃಷ್ಣರಾಜೇಂದ್ರ ಒಡೆಯರ್‌ ಸ್ಮರಣೆ ನಮ್ಮೆಲ್ಲರ ಕರ್ತವ್ಯ


Team Udayavani, Jun 17, 2019, 3:00 AM IST

krishna

ಕೆ.ಆರ್‌.ನಗರ: ಪಟ್ಟಣದ ಸ್ಥಾಪನೆಯ ನೆನಪಿಗಾಗಿ ಗರುಡಗಂಭದಂತಹ ಸ್ಮಾರಕವಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಮಾರಕ ಮತ್ತು ಯೋಜನಾಬದ್ಧವಾದ ಪಟ್ಟಣದ ನಿರ್ಮಾಣಕ್ಕೆ ಕಾರಣೀಭೂತರಾದ ಕೃಷ್ಣರಾಜೇಂದ್ರ ಒಡೆಯರ್‌ ಅವರನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳಿದರು.

ಪಟ್ಟಣದ ಗರುಡಗಂಭ ಸಂವೇದನಾ ಸಂಘದ ವತಿಯಿಂದ ಭಾನುವಾರ ನಡೆದ 85ನೇ ವರ್ಷದ ಗರುಡಗಂಭದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹಳೆ ಎಡತೊರೆಯಿಂದ ಪಟ್ಟಣವನ್ನು ಸ್ಥಳಾಂತರಿಸಿದ ನಂತರ ಕೃಷ್ಣರಾಜೇಂದ್ರ ಒಡೆಯರ್‌ ಅವರ ಆಳ್ವಿಕೆಯ ಅವಧಿಯಲ್ಲಿ ಕೆ.ಆರ್‌.ನಗರ ನಿರ್ಮಾಣಗೊಂಡಾಗ ಸ್ಥಾಪನೆಗೊಂಡ ಗರುಡಗಂಭದ ನೆನಪನ್ನು ಶಾಶ್ವತವನ್ನಾಗಿಸಲು ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ವೈಭವದ ವಾರ್ಷಿಕೋತ್ಸವ: ಪಟ್ಟಣದ ನಿರ್ಮಾಣದ ಕುರುಹಾದ ಗರುಡಗಂಭದ ವಾರ್ಷಿಕೋತ್ಸವವನ್ನು ಮುಂಬರುವ ದಿನಗಳಲ್ಲಿ ವೈಭವಯುತವಾಗಿ ಆಚರಿಸಲು ಸ್ಥಳೀಯ ಪುರಸಭೆ ಆಡಳಿತ ಮಂಡಳಿ ಮತ್ತು ಸಾರ್ವಜನಿಕರೊಡನೆ ಚರ್ಚಿಸಲಾಗುತ್ತದೆ. ಪುರಸಭೆ ವತಿಯಿಂದಲೇ ಪ್ರತೀ ವರ್ಷ ಪುರಸಭಾ ಬಯಲು ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಸ್ಮಾರಕಗಳು ಇರುವುದು ಸಂತಸದ ವಿಚಾರ: ಸರ್ಕಾರ ಮತ್ತು ಸ್ಥಳೀಯ ಪುರಸಭೆಯವರು ಗರುಡಗಂಭದ ಇತಿಹಾಸವನ್ನು ಮರೆತ್ತಿದ್ದರೂ ಸ್ವರಾಜ್‌ ಇಂಡಿಯಾ ಪಕ್ಷದ ತಾಲೂಕು ಅಧ್ಯಕ್ಷ ಗರುಡಗಂಭದಸ್ವಾಮಿ ನಿರಂತರವಾಗಿ ವಾರ್ಷಿಕೋತ್ಸವ ಆಚರಿಸಿಕೊಂಡು ಬರುತ್ತಿರುವುದು ಅಭಿನಂದನೀಯ ಕಾರ್ಯವಾಗಿದೆ. ಇಂತಹ ಸ್ಮಾರಕಗಳು ಇರುವುದು ಸಂತಸದ ವಿಷಯವಾಗಿದೆ ಎಂದು ಮಾಹಿತಿ ನೀಡಿದರು.

ಅಭಿವೃದ್ಧಿ, ಸ್ವಚ್ಛತೆಗೆ ಗಮನ ಹರಿಸಿ: ಹುಣಸೂರು ಶಾಸಕ ಎಚ್‌.ವಿಶ್ವನಾಥ್‌ ಮಾತನಾಡಿ, ರಾಜ್ಯದ ಅತ್ಯಂತ ಯೋಜನಾಬದ್ಧ ಮತ್ತು ವ್ಯವಸ್ಥಿತ ಪಟ್ಟಣವಾಗಿರುವ ಕೆ.ಆರ್‌.ನಗರದ ಅಭಿವೃದ್ಧಿ ಮತ್ತು ಸ್ವಚ್ಛತೆಗೆ ಎಲ್ಲರೂ ಗಮನ ಹರಿಸಬೇಕು. ಜತೆಗೆ ಕೃಷ್ಣರಾಜನಗರದ ನಿರ್ಮಾತೃ ಕೃಷ್ಣರಾಜ ಒಡೆಯರ್‌ ಮತ್ತು ಗರುಡಗಂಭದ ಹೆಸರನ್ನು ಅಜರಾಮರವಾಗಿಸಲು ಹಾಗೂ ನಿರಂತರವಾಗಿ ವಾರ್ಷಿಕೋತ್ಸವ ನಡೆಸಲು ಕಾರ್ಯ ಯೋಜನೆ ರೂಪಿಸುವುದಾಗಿ ಹೇಳಿದರು.

ಒಡೆಯರ್‌ ಆಳ್ವಿಕೆಯಲ್ಲಿ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್‌ ಮತ್ತು ಇಟಲಿಯ ಖ್ಯಾತ ವಾಸ್ತು ತಜ್ಞ ಕ್ರೆಂಬಿಗಲ್‌ ಅವರ ಯೋಜನೆಯ ಫ‌ಲವಾಗಿ ರೂಪ ತಾಳಿದೆ. ಪಟ್ಟಣವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸಲು ಎಲ್ಲರೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಅದ್ಧೂರಿ ವಾರ್ಷಿಕೋತ್ಸವಕ್ಕೆ ತೀರ್ಮಾನ: ಮುಂದಿನ ವರ್ಷ ಗರುಡಗಂಭದ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಜತೆಗೆ ಮೈಸೂರಿನ ಯದುವಂಶದ ಯುವರಾಜ ಯದುವೀರ ಚಾಮರಾಜ ಒಡೆಯರ್‌ ಅವರನ್ನು ಗೌರವಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಪಟ್ಟಣದ ಎಲ್ಲಾ ಹಿರಿಯರು ಮತ್ತು ಚುನಾಯಿತ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನ ಮಾಡಲಾಗುತ್ತದೆ ಎಂದರು.

ಅಕ್ರಮ ಒತ್ತುವರಿ ತೆರವುಗೊಳಿಸಿ: ಮುಂದಿನ ದಿನಗಳಲ್ಲಾದರೂ ಪುರಸಭೆಯವರು ಪಟ್ಟಣದಲ್ಲಿ ಆಗಿರುವ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು. ಇದಕ್ಕೆ ಬೇಕಿರುವ ಅಗತ್ಯ ಸಹಕಾರವನ್ನು ನಾವು ನೀಡಲು ಸಿದ್ಧ ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಚ್‌.ವಿಶ್ವನಾಥ್‌ ಗರುಡಗಂಭ ಸಂವೇದನಾ ಸಂಘದ ಅಧ್ಯಕ್ಷ ಗರುಡಗಂಭದಸ್ವಾಮಿ ಮತ್ತಿತರರು ಗರುಡಗಂಭಕ್ಕೆ ಪೂಜೆ ಸಲ್ಲಿಸಿ ಗೌರವಿಸಿದರು.

ಪುರಸಭೆ ಸದಸ್ಯ ಕೋಳಿಪ್ರಕಾಶ್‌, ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ನಿರ್ದೇಶಕ ಅಣ್ಣಯ್ಯನಾಯಕ, ವಕೀಲ ಎಚ್‌.ಕೆ.ಹರೀಶ್‌, ಕುಂಬಾರ ಸಂಘದ ತಾಲೂಕು ಅಧ್ಯಕ್ಷ ತಿಮ್ಮಶೆಟ್ಟಿ, ಬಿಜೆಪಿ ಮುಖಂಡ ಮುಕ್ಕೋಟಿ, ಮುಖಂಡರಾದ ಶಂಕರರಾವ್‌, ಶಿವಾಜಿ ಗಣೇಶನ್‌, ರವಿ, ರಾಮಣ್ಣ, ಯೋಗೇಶ್‌ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.

ಸ್ವಚ್ಛ ಮತ್ತು ಯೋಜನಾಬದ್ಧ ನಗರವಾಗಿರುವ ಕೆ.ಆರ್‌.ನಗರದ ಅಂದ ಹಾಳು ಮಾಡುವಲ್ಲಿ ಪಟ್ಟಣದ ಪುರಸಭೆಯ ಪಾತ್ರ ಹೆಚ್ಚಾಗಿದೆ. ಉದ್ಯಾನವನಕ್ಕೆ ದಾನಿಗಳು ನೀಡಿದ್ದ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ಪುರಸಭೆಯ ಸಾಧನೆ.
-ಎಚ್‌.ವಿಶ್ವನಾಥ್‌, ಶಾಸಕ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.