ಮೈಸೂರು ಸಂಸ್ಥಾನಕ್ಕೆ ರಾಜಮಾತೆಯರ ಕೊಡುಗೆ ಅಪಾರ: ತ್ರಿಷಿಕಾ
Team Udayavani, Mar 14, 2019, 8:41 AM IST
ಮೈಸೂರು: ಮೈಸೂರು ಸಂಸ್ಥಾನದಲ್ಲಿ ಶೈಕ್ಷಣಿಕ, ಸಾಮಾಜಿಕ ಬೆಳವಣಿಗೆಗೆ ರಾಜಮಾತೆಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ರಾಜವಂಶಸ್ಥರಾದ ತ್ರಿಷಿಕಾ ಕುಮಾರಿ ಹೇಳಿದರು.
ಶ್ರೀಜೈನ್ ಶ್ವೇತಾಂಬರ ತೇರಾಪಂಥ ಮಹಿಳಾ ಮಂಡಲ ವತಿಯಿಂದ ಬುಧವಾರ ನಗರದ ತೇರಾ ಪಂಥ್ ಭವನದಲ್ಲಿ ಏರ್ಪಡಿಸಿದ್ದ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಮೈಸೂರು ರಾಜ ಮನೆತನ ಪ್ರಾರಂಭವಾಗಿದ್ದು ಕೂಡ ರಾಜಮಾತೆ ಯರಿಂದಲೇ, ರಾಜಮಾತೆ ಕೆಂಪ ನಂಜಮ್ಮಣ್ಣಿ ಆಡಳಿತ ಚುಕ್ಕಾಣಿ ಹಿಡಿದು ಸೈ ಎನಿಸಿ ಕೊಂಡಿದ್ದರು. ಮಹಿಳಾ ಶಿಕ್ಷಣಕ್ಕಾಗಿ ಬಹುದೊಡ್ಡ ಕ್ರಾಂತಿಯನ್ನೇ ಅವರು ಮಾಡಿದ್ದಾರೆ ಎಂದರು.
ಮೈಸೂರಿನಲ್ಲಿ ಬಾಲಕಿಯರ ಶಾಲೆ ಆರಂಭಿಸಿದ್ದಲ್ಲದೆ, ನಗರಾಭಿವೃದ್ಧಿ ಸಮಿತಿ ರಚನೆ, ವಾಣಿ ವಿಲಾಸ ನೀರು ಸರಬರಾಜು ಕೇಂದ್ರ, ಶಿವನ ಸಮುದ್ರದಲ್ಲಿ ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆ ಹೀಗೆ ರಾಜಮಾತೆ ಕೆಂಪನಂಜಮ್ಮಣ್ಣಿ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯರಿದ್ದು, ಕೇವಲ ಮದುವೆ ಯಾಗುವುದೊಂದೇ ಮಹಿಳೆಯರ ಗುರಿ ಆಗ ಬಾರದು. ನಾನು ನನ್ನ ಮಗನಿಗೆ ಈಗಿನಿಂದಲೇ ಮಹಿಳೆಯರಿಗೆ ಗೌರವ ಕೊಡುವುದನ್ನು ಕಲಿಸುತ್ತಿದ್ದೇನೆ. ಮಹಿಳೆಯರಿಗೆ ಗೌರವ ಕೊಡುವುದು ನಮ್ಮ ಸಂಸ್ಕೃತಿ ಎಂದು ತಿಳಿಸಿದರು.
ತೇರಾಪಂಥ್ ಮಹಿಳಾ ಮಂಡಲದ ಅಧ್ಯಕ್ಷೆ ವನಮಾಲ ನಹರ್, ಕಾರ್ಯದರ್ಶಿ ಖಮೋಶ್ ಮೆಹರ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್