ನವಜಾತ ಶಿಶುವಿನ ಶ್ರವಣ ಪರೀಕ್ಷೆ ಕಡ್ಡಾಯ


Team Udayavani, Sep 8, 2018, 11:19 AM IST

m2-navajata.jpg

ಮೈಸೂರು: ನವಜಾತ ಶಿಶುಗಳು ಗಂಭೀರ ಸ್ವರೂಪದ ಶ್ರವಣದೋಷದಿಂದ ಬಳಲುವುದನ್ನು ತಪ್ಪಿಸಲು ಆರಂಭದಲ್ಲಿಯೇ ಸಮಸ್ಯೆಯನ್ನು ಗುರುತಿಸಬೇಕಾದ ಅಗತ್ಯತೆ ಇದೆ ಎಂದು ಕಾಕ್ಲಿಯರ್‌ ಗ್ಲೋಬಲ್‌ ಹಿಯರಿಂಗ್‌ನ ರಾಯಭಾರಿ, ಅಂತಾರಾಷ್ಟ್ರೀಯ ಕ್ರಿಕೆಟಿಗ ಬ್ರೆಟ್‌ ಲೀ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರವಣದೋಷದಿಂದ ಆಗುವ ನಷ್ಟದ ಅಂದಾಜು ಊಹೆಗೆ ನಿಲುಕದ್ದು, ಒಂದು ಅಂದಾಜಿನ ಪ್ರಕಾರ ಪ್ರಪಂಚದಲ್ಲಿ 466 ದಶಲಕ್ಷ ಜನರು ಶ್ರವಣದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ಕುರಿತು ಗಮನಸೆಳೆಯಲು ನಾನು ತೊಡಗಿಕೊಂಡಿದ್ದೇನೆ. ಕಿವುಡುತನ ನಿವಾರಣೆಗೆ ಈಗ ತಂತ್ರಜ್ಞಾನ ನೆರವಾಗುತ್ತಿದೆ. ಕಾಕ್ಲಿಯರ್‌ನ ಒಟ್ಟು ಗುರಿ ಜನರಿಗೆ ಅವರ ಬದುಕನ್ನು ಮರಳಿಸುವುದೇ ಆಗಿದೆ ಎಂದರು.

ಪೋಷಕರು ಮತ್ತು ಕುಟುಂಬ ಸದಸ್ಯರು ಕಿವುಡುತನದ ಯಾವುದೇ ಸಣ್ಣ ಚಿಹ್ನೆಗಳನ್ನು ನಿರ್ಲಕ್ಷಿಸಬಾರದು ಮತ್ತು ಅತ್ಯಂತ ತುರ್ತುಕ್ರಮ ತೆಗೆದುಕೊಳ್ಳಬೇಕು. ಒಂದು ಇಂಪ್ಲಾಂಟ್‌ ಹೇಗೆ ಒಬ್ಬ ವ್ಯಕ್ತಿಯನ್ನು ಮೌನದಿಂದ ಶಬ್ದದೆಡೆಗೆ ಕೊಂಡೊಯ್ಯುತ್ತದೆ ಎಂಬುದನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಇದೊಂದು ಜೀವನ ಬದಲಾಗುವ ಕ್ಷಣವಾಗಿದೆ ಎಂದರು. 

ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ವಿಶ್ವದ ಜನಸಂಖ್ಯೆಯ ಶೇ.5ರಷ್ಟು ಮಂದಿ ಶ್ರವಣದೋಷದಿಂದ ಬಳಲುತ್ತಿದ್ದು, ಇವರಲ್ಲಿ 34 ದಶಲಕ್ಷ ಮಕ್ಕಳೂ ಸೇರಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ 2050ರ ವೇಳೆಗೆ 900 ದಶಲಕ್ಷ ಜನರು ಶ್ರವಣದೋಷದ ತೊಂದರೆಗೆ ಒಳಗಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಸಾಫ್ಟ್ವೇರ್‌ ಅಭಿವೃದ್ಧಿ: ಕೇರಳದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ 66 ಸರ್ಕಾರಿ ಹೆರಿಗೆ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ ಶ್ರವಣದೋಷ ಪರೀಕ್ಷೆ ಮಾಡಲಾಗುತ್ತಿದೆ. ಕೇರಳ ಸಾಮಾಜಿಕ ಭದ್ರತಾ ಮಿಷನ್‌ ಇದಕ್ಕಾಗಿ ಸಾಫ್ಟ್ವೇರ್‌ ಅಭಿವೃದ್ಧಿ ಪಡಿಸಿದೆ. ಈ ಮಾಹಿತಿಯನ್ನು ಜಿಲ್ಲಾ ಮಟ್ಟದ ಸಮಿತಿಗಳು ಸೇರಿ ಇತರೆ ಸಂಸ್ಥೆಗಳ ಜೊತೆಗೆ ಹಂಚಿಕೆ ಮಾಡಿಕೊಳ್ಳಲು, ಮುಂದುವರಿದ ಚಿಕಿತ್ಸೆಯನ್ನು ನೀಡಲು ಸಹಕಾರಿಯಾಗಲಿದೆ ಎಂದರು. 

ಡಾ.ದತ್ತಾತ್ರಿ ಮಾತನಾಡಿ, ಭಾರತದಲ್ಲಿ ಶ್ರವಣದೋಷ ಸಮಸ್ಯೆ ಕುರಿತಂತೆ ಸಾರ್ವಜನಿಕ ಅರಿವು ಕಡಿಮೆ ಇದೆ. ಈ ಹಿಂದೆ ಮಕ್ಕಳಲ್ಲಿ ಈ ದೋಷ ಕಂಡುಬಂದಾಗ, ಅವರು ಮೂಕಭಾಷೆ ಕಲಿತು ಅದರಲ್ಲಿ ಪರಿಣಿತಿ ಹೊಂದಿ ಧ್ವನಿಯಿಲ್ಲದ ಬದುಕಿಗೆ ಹೊಂದಿಕೊಳ್ಳಬೇಕಾಗಿತ್ತು.

ಆದರೆ, ಮುಂದಿನ ದಿನಗಳಲ್ಲಿ ಆ ಸಮಸ್ಯೆ ಇರುವುದಿಲ್ಲ. ಶಿಶುವಿನ ಜನನವಾದ ಮೊದಲ ತಿಂಗಳಲ್ಲೇ ಅಥವಾ 12 ತಿಂಗಳ ಒಳಗೆ ಪರೀಕ್ಷೆ ಮಾಡಿಸುವುದು ಉತ್ತಮ. ಈ ಹಂತದಲ್ಲಿ ಕಾಕ್ಲಿಯರ್‌ ಇಂಪ್ಲಾಂಟ್‌ ಮಾಡುವುದು ಕೂಡಾ ಸಮಸ್ಯೆಯನ್ನು ಪರಿಹರಿಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.